Thursday 5 August 2021

ನಿನ್ನ ದಯದಿಂದಲೇ ಎನ್ನ ಜೀವನವು ಘನ್ನ ಗೋಪಾಲ ವಿಠ್ಠಲ ದಾಸರಾಯ ankita prasannashreenivasa

 ..


kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru

ಗೋಪಾಲದಾಸರು


ನಿನ್ನ ದಯದಿಂದಲೇ ಎನ್ನ ಜೀವನವು

ಘನ್ನ ಗೋಪಾಲ ವಿಠ್ಠಲ ದಾಸರಾಯ ಪ


ತುಂಗೆ ಕೃಷ್ಣೆ ಮಧ್ಯರಂಗ ಕ್ಷೇತ್ರದಿ ಮುದದಿ

ತುಂಗ ವಿಜಯಾರ್ಯರ ಪದಂಗಳಿಗೆ ಎರಗಿ

ಗಂಗೆಪಿತ ಮಾತಂಗ ವರದನಾಮನ ಅಂತ

ರಂಗದಿ ನೋಡಿ ಗುಣಗಳನು ಪಾಡಿದೆಯೊ 1

ಅನುಜರಿಗು ಅಚಲ ಮಾತೆಗು ಶರಣು ಸುಜನರಿಗು

ಮೌನಿ ಪಂಡಿತರಿಗೂ ಎನ್ನಂಥ ಪಾಮರಗು

ಜ್ಞಾನ ಸುತತ್ವ ಸನ್ಮಾರ್ಗ ಬೋಧಿಸಿ ಜಗ

ನ್ನಾಥನ ಮನಸಿನ ಅನುಭವಕೆ ತಂದೆ 2

ಬೇಸರದಿ ನಾ ಸೀತಾಪತಿಪಲ್ಲಿಯಲಿ ಮಲಗೆ

ಏಸು ಕರುಣವೊ ದಾಸರಾಜ ನೀ ಬಂದು

ವ್ಯಾಸಮುನಿಮಠ ಗುರುಪೂಜೆಗೆ ಕರೆದೊಯ್ದು

ದಶಪ್ರಮತಿ ಭಾಷ್ಯಪಠನಾರ್ಚನೆಯ ತೋರಿಸಿದೆ 3

ಗೋ ಎನಲು ಗರುಡವಾಹನ ಪೀಡೆ ಪರಿಹರಿಪ

ಪಾ ಎನಲು ಪರಮಪೂರುಷ ಪಾಲಿಸುವ

ಲ ಎನಲು ಲಕ್ಷ್ಮೀಶ ನಿಖಿಳೇಷ್ಟಗಳನೀವ

ಅನವರತ ಗೋಪಾಲದಾಸರಿಗೆ ಶರಣು 4

ಆನಂದಮುನಿಹೃಸ್ಥ ವನಜಸಂಭವಪಿತ ಪ್ರ

ಸನ್ನ ಶ್ರೀನಿವಾಸ ಜಗನ್ನಾಥ ನಿನ್ನ

ನಿನ್ನವರ ಪಾದ ಸಂಸ್ಮರಿಸುವ ಸುಜನರನು

ಅನವರತ ಪಾಲಿಸುವ ಸಂದೇಹವಿಲ್ಲ 5

***


No comments:

Post a Comment