Thursday 5 August 2021

ಶರಣು ವಿಧಿ ವಾಣೀಶ ಶರಣು ಧೃತಿ ಶ್ರಧ್ದೇಶ ankita prasannashreenivasa

 .. ..

kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru

ಶ್ರೀ ಸೌಭಾಗ್ಯ ಸಪ್ತತ್ರಿಂಶತಿ


ಶರಣು ವಿಧಿ ವಾಣೀಶ ಶರಣು ಧೃತಿ ಶ್ರಧ್ದೇಶ |

ಶರಣು ಋಜುವರ್ಯರಲಿ ಶರಣು ಶರಣಾದೆ ಪ


ಮೀನಕೂರ್ಮ ಕ್ರೋಡ ನರಸಿಂಹ ವಟುರೂಪ

ರೇಣುಕಾತ್ಮಜ ರಾಮ ಶ್ರೀ ಕೃಷ್ಣ ಜಿನಜ ||

ವಿಷ್ಣು ಯಶಸ್ಸುತ ಅಜಿತ ಶ್ರೀಶನಿಗೆ ಪ್ರಿಯತಮ |

ಅನುಪಮ ಜೀವೋತ್ತಮರ ಚರಣಕಾನಮಿಪೇ 1

ಪುರುಷವಿಧಿ ಕಾಲವಿಧಿ ವಾಸುದೇವೋತ್ಪನ್ನ |

ವಿರಿಂಚ ಮಹತ್ತತ್ವತನು ಅನಿರುದ್ಧ ಜಾತ ||

ನಾರಾಯಣ ನಾಭಿ ಕಮಲಜ ಚತುರ್ಮುಖನು |

ಸರಸ್ವತೀಪತಿ ರುದ್ರ ತಾತನಿಗೆ ನಮಿಪೆ 2

ಈ ನಾಲ್ಕು ಬ್ರಹ್ಮನ ಅವತಾರದಲಿ ಶುಕ್ಲ |

ಶೋಣಿತ ಸಂಬಂಧ ಇಲ್ಲವೇ ಇಲ್ಲ ||

ಜ್ಞಾನಾದಿ ಐಶ್ವರ್ಯದಲಿ ಯಾರು ನಾಲ್ಮುಗಗೆ |

ಎಣೆ ಇಲ್ಲ ಹದಿನಾಲ್ಕು ಲೋಕದಲಿ ಎಲ್ಲೂ 3

ಭಯವು ಅಜ್ಞಾನವು ಸಂಶಯವು ಇವಗಿಲ್ಲ

ಸತ್ಯ ಲೋಕಾಧಿಪನ ಸುರರ ಅಧ್ಯಕ್ಷ ||

ಹಯಮುಖ ತ್ರಿವೃತ್ತುರೀಯ ಹಂಸ ಇತರಾಸೂನು |

ತೋಯಜಾಕ್ಷ ಕೇಶವನ ಪ್ರಥಮ ಪ್ರತಿಬಿಂಬ 4

ಜಗಜ್ಜನ್ಮಾದ್ಯಷ್ಟಕ ಕರ್ತನ ನಿಯಮನದಿ |

ಜಗವ ಪಡೆದಿಹ ಬ್ರಹ್ಮಸತ್ವವಿಗ್ರಹನು ||

ಖಗಪ ಭುಜಗಪ ಶಿವಾದ್ಯನಂತ ಜೀವೋತ್ತಮನು |

ಅಘರಹಿತ ತಾರಕ ಗುರು ಶತಾನಂದ 5

ಅವನಿಯಲಿ ಅವತಾರ ಬ್ರಹ್ಮದೇವನಿಗಿಲ್ಲ |

ಭಾವಿ ಬ್ರಹ್ಮನು ಮುಖ್ಯವಾಯುದೇವ ||

ದೇವೀಜಯಾ ಸಂಕರುಷಣಾತ್ಮಜನು ಈ |

ಭುವಿಯಲ್ಲಿ ತೋರಿಹನು ಹರಿಯ ಪ್ರಥಮಾಂಗ 6

ಧೃತಿ ಪ್ರಭಂಜನ ವಾಯು ಸ್ಮರ ಭರತ ಗುರುವರನು |

ಮಾತರಿಶ್ವನು ಸೂತ್ರ ಪವಮಾನ ಪ್ರಾಣ ||

ಎದುರು ಸಮರಿಲ್ಲ ಈ ಬ್ರಹ್ಮ ಧಾಮನಿಗೆಲ್ಲೂ |

ಸದಾ ನಮೋ ಭಾರತೀರಮಣ ಮಾಂಪಾಹಿ 7

ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂ |

ಪ್ರತಿಷ್ಠಿತವೂ ಜೀವರ ದೇಹಕಾಧಾರ ||

ತ್ರಾತಪೋಷಕ ಸರ್ವವಶಿ ಪ್ರಜ್ಞಾಶ್ರೀದನು |

ತತ್ವಾದಿ ದೇವ ವರಿಷ್ಠ ಚೇಷ್ಟಕನು 8

ಶ್ರೀಶ ಹಂಸಗೆ ಪ್ರಿಯ ಶ್ವಾಸ ಜಪ ಪ್ರವೃತ್ತಿಸುವ |

ಬಿಸಜಜಾಂಡವ ಹೊತ್ತು ಕೊಂಡು ಇರುತಿಹನು ||

ಅಸಮ ಸಾಮಥ್ರ್ಯದಿ ಸರ್ವ ಕ್ರಿಯೆ ಮಾಡಿಸುವ |

ಶಾಸ್ತನಾಗಿಹ ಪಂಚ ಅವರ ಪ್ರಾಣರಿಗೆ 9

ಬಲ ಜ್ಞಾನಾದಿಗಳಲ್ಲಿ ಹ್ರಾಸವಿಲ್ಲವು ಇವಗೆ |

ಎಲ್ಲ ಅವತಾರಗಳು ಸಮವು ಅನ್ಯೂನ ||

ಶುಕ್ಲ ಶೋಣಿತ ಸಂಬಂಧ ಇಲ್ಲವೇ ಇಲ್ಲ |

ಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 10

ವಾಯುದೇವನ ಒಲಿಸಿಕೊಳ್ಳದ ಜನರಿಗೆ |

ಭಯ ಬಂಧ ನಿವೃತ್ತಿಯು ಸದ್ಗತಿಯು ಇಲ್ಲ ||

ಮಾಯಾ ಜಯೇಶನ ಪರಮ ಪ್ರಸಾದವು |

ವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 11

ಶ್ರೀರಾಮಚಂದ್ರನು ಒಲಿದ ಸುಗ್ರೀವಗೆ |

ಮಾರುತಿಯ ಒಲಿಸಿಕೊಂಡವನವನೆಂದು ||

ಮಾರುತಿಯ ಒಲಿಸಿಕೊಳ್ಳದ ವಾಲಿ ಬಿದ್ದನು |

ಕರ್ಣನೂ ಹಾಗೇವೇ ಅರ್ಜುನನು ಗೆದ್ದ 12

ರಾಮನಿಗೆ ಸನ್ನಮಿಸಿ ವನದಿ ದಾಟುತ ಹನುಮ |

ಶ್ರಮರಹಿತನು ಸುರಸೆಯನು ಜಯಿಸೆ ಸುರರು ||

ಪೂಮಳೆ ಕರೆಯಲು ಸಿಂಹಿಕೆಯನು ಸೀಳಿ |

ಧುಮುಕಿದ ಲಂಕೆಯಲಿ ಲಂಕಿಣಿಯ ಬಡಿದ 13

ರಾಮ ಪ್ರಿಯೆಗುಂಗುರವ ಕೊಟ್ಟು ಚೂಡಾರತ್ನ |

ರಾಮಗೋಸ್ಕರ ಕೊಂಡು ವನವ ಕೆಡಹಿ ||

ಶ್ರಮ ಇಲ್ಲದೆ ಅಕ್ಷಯಾದಿ ಅಧಮರ ಕೊಂದು |

ರಾಮ ದೂತನು ಹನುಮ ಲಂಕೆಯ ಸುಟ್ಟ 14

ಶ್ರೀರಾಮನಲಿ ಬಂದು ನಮಿಸಿ ಚೂಡಾಮಣಿಯ |

ಚರಣದಿ ಇಡೆ ರಾಮ ಹನುಮನ ಕೊಂಡಾಡಿ ||

ಸರಿಯಾದ ಬಹುಮಾನ ಯಾವುದು ಇಲ್ಲೆಂದು |

ಶ್ರೀರಾಮ ತನ್ನನ್ನೇ ಇತ್ತಾಲಿಂಗನದಿ 15

ಮೂಲ ರೂಪವನೆನೆದ ಲಕ್ಷ್ಮಣನ ಎತ್ತಲು |

ಕೈಲಾಗದೆ ರಾವಣನು ಸೆಳೆಯೆ ಆಗ ||

ಲೀಲೆಯಿಂದಲಿ ಎತ್ತಿ ರಾಮನಲಿ ತಂದನು |

ಬಲವಂತ ಹನುಮ ಶೇಷಗುತ್ತಮತಮನು 16

ಮೃತ ಸಂಜೀವಿನಿಯಾದಿ ಔಷಧಿ ಶೈಲವನು |

ತಂದು ಸೌಮಿತ್ರಿ ಕಪಿಗಳಿಗೆ ಅಸು ಇತ್ತ ||

ಮುಂದಾಗಿ ಪೋಗಿ ಶ್ರೀರಾಮ ಬರುವುದು ಪೇಳಿ |

ಕಾಯ್ದ ರಾಮಾನುಜನ ಅಗ್ನಿ ಮುಖದಿಂದ 17

ಇತರರು ಮಾಡಲು ಅಶಕ್ಯ ಸೇವೆ ಹನುಮ |

ಗೈದಿ ಮೋಕ್ಷವು ಸಾಲ್ದು ಏನು ಕೊಡಲೆನ್ನೆ ||

ಸದಾ ಸರ್ವ ಜೀವರಿಂದಧಿಕ ಭಕ್ತಿ ಒಂದೇ |

ಕೇಳ್ದ ಶ್ರೀರಾಮನ್ನ ವೈರಾಗ್ಯ ನಿಧಿಯು 18

ಗಂಡು ಶಿಶು ಬೀಳಲು ಗುಂಡು ಪರ್ವತ ಒಡೆದು |

ತುಂಡು ನೂರಾಯಿತು ಕಂಡಿಹರು ಅಂದು ಬೋ - ||

ಮ್ಮಾಂಡದಲಿ ಪ್ರಚಂಡ ಭೀಮಗೆ ಸಮ |

ಕಂಡಿಲ್ಲ ಕೇಳಿಲ್ಲ ನೋಡಿ ಭಾರತವ 19

ಉಂಡು ತೇಗಿದ ಗರಳ ತಿಂಡಿಯ ಭೀಮನು |

ಉಂಡು ಹಾಲಾಹಲವ ಹಿಂದೆ ಈ ವಾಯು ||

ಹಿಂಡಿ ಸ್ವಲ್ಪವ ಮುಕ್ಕಣ್ಣಗೆ ಕೊಟ್ಟನು |

ಬಂಡು ಮಾತಲ್ಲವಿದು ಕೇಳಿ ವೇದವನು 20

ಅರಗು ಮನೆಯಿಂದ್ಹೊರಟು ಸೇರಿ ವನವನು ಅಲ್ಲಿ |

ಕ್ರೂರ ಹಿಡಿಂಬನ ಕೊಂದವನ ಸೋದರಿ ||

ಭಾರತೀ ಯಕ್ಸ ್ವರ್ಗ ಶಿಕಿಯು ಹಿಡಿಂಬಿಯ

ಕರಪಿಡಿದ ಭೀಮನು ಅನುಪಮ ಬಲಾಢ್ಯ 21

ಬಕ ಕೀಚಕ ಜರಾಸಂಧಾದಿ ಅಸುರರು |

ಲೋಕ ಕಂಟಕರನ್ನ ಕೊಂದು ಬಿಸುಟು ||

ಲೋಕಕ್ಕೆ ಕ್ಷೇಮವ ಒದಗಿಸಿದ ಈ ಅಮಿತ |

ವಿಕ್ರಮ ಭೀಮನಿಗೆ ಸಮರಾರು ಇಲ್ಲ 22

ಕಲಿ ಕಲಿಪರಿವಾರ ದುರ್ಯೋಧನಾದಿಗಳ |

ಬಲವಂತ ಭೀಮನು ಬಡಿದು ಸಂಹರಿಸಿದ ||

ಕಲಿಹರ ಸುಜನಪಾಲ ಭೀಮ ಸಮ್ರಾಟನ |

ಕಾಲಿಗೆ ಎರಗುವೆ ದ್ರೌಪದೀ ಪತಿಗೆ 23

ಮಾಲೋಲ ಕೃಷ್ಣನ ಸುಪ್ರೀತಿಗಾಗಿಯೇ |

ಬಲ ಕಾರ್ಯಗಳ ಮಾಡಿ ಅರ್ಪಿಸಿದ ಭೀಮ ||

ಕಲಿಯುಗದಿ ಈ ಭೀಮ ಅವತಾರ ಮಾಡಿಹನು |

ಕಲಿಮಲಾಪಹ ಜಗದ್ಗುರು ಮಧ್ವನಾಗಿ 24

ಹನುಮಂತನ ಮುಷ್ಠಿ ಭೀಮಸೇನನ ಗದೆ |

ದಾನವಾರಾಣ್ಯವ ಕೆಡಹಿದ ತೆರದಿ ||

ಆಮ್ನಾ ಯಸ್ಮøತಿ ಯುಕ್ತಿಯುತ ಮಧ್ವ ಶಾಸ್ತ್ರವು |

ವೇನಾದಿಗಳ ಕುಮತ ತರಿದು ಸುಜನರ ಕಾಯ್ತು 25

ಇಳೆಯ ಸುಜನರ ಭಾಗ್ಯ ಶ್ರುತಿ ಪುರಾಣಂಗಳು |

ಪೇಳಿದಂತೆ ಕೊಂಡ ಯತಿರೂಪ ವಾಯು ||

ಮೇಲಾಗಿ ಇದ್ದ ನಮ್ಮ ಅಜ್ಞಾನ ಕತ್ತಲೆಯ |

ತೊಲಗಿಸಿದನು ಈ ಮಧ್ವಾಖ್ಯ ಸೂರ್ಯ 26

ದುರ್ವಾದ ಕುಮತಗಳು ಸಜ್ಜನರ ಮನ ಕೆಡಿಸೆ |

ತತ್ವವಾದವ ಅರುಪಿ ಸಜ್ಜನರ ಪೊರೆದ ||

ಮೂವತ್ತು ಮೇಲೇಳು ಗ್ರಂಥ ಚಿಂತಾಮಣಿ |

ಸುವರ್ಣ ಕುಂದಣ ಪದಕ ಯೋಗ್ಯರಿಗೆ ಇತ್ತ 27

ದುಸ್ತರ್ಕ ದುರ್ಮತ ಬಿಸಿಲಿಲ್ಲಿ ಬಾಡುವ |

ಸಸಿಗಳು ಸಾತ್ವಿಕ ಅಧಿಕಾರಿಗಳಿಗೆ ||

ಹಸಿ ನೀರು ನೆರಳು ಈ ಮಾಧ್ವ ಮೂವತ್ತೇಳು |

ಸಚ್ಛಾಸ್ತ್ರ ಪೀಯೂಷ ಗೋಕಲ್ಪ ತರುವು 28

ಮೂಢ ಅಧಮರ ದುಷ್ಟ ಮತಗಳ ಸಂಪರ್ಕದಿ |

ಈಡಿಲ್ಲದ ಮೋದಪ್ರದ ಜ್ಞಾನ ಕಳಕೊಂಡು ||

ಬಡತನದಿ ನರಳುವ ಸಜ್ಜನರ ಪೋಷಿಪುದು |

ನೋಡಿ ಈ ಸುರಧೇನು ಮಾಧ್ವ ಮೂವತ್ತೇಳ 29

ಬಿಲ್ವಪ್ರಿಯ ಶಿವ ಈಡ್ಯ ಸಾರಾತ್ಮ ಕೃಷ್ಣನ |

ಚೆಲ್ವ ಉಡುಪಿ ಕ್ಷೇತ್ರದಲಿ ನಿಲ್ಲಿರಿಸಿ ||

ಎಲ್ಲ ಭಕ್ತರ ಕಾವ ಸುಖಮಯ ಜಗತ್ಕರ್ತ |

ಮೂಲ ರಾಮನ ಸಾಧು ಜನರಿಗೆ ಕಾಣಿಸಿದ 30

ಮಹಿದಾಸ ಬೋಧಿಸಿದ ತತ್ವವನು ವಿವರಿಸುತ |

ಮಹಂತ ಪೂರ್ಣಪ್ರಜ್ಞ ಬದರೀಗೆ ತೆರಳಿ ||

ಮಹಿಶಿರಿಕಾಂತ ಶ್ರೀ ವ್ಯಾಸನ ಬಳಿ ಇಹನು |

ಅಹರಹ ಪ್ರೇಮದಿಂಸಂಸ್ಮರಿಸೆತೋರ್ವ 31

ರಾಮ ಕೃಷ್ಣವ್ಯಾಸ ಜಾನಕೀಸತ್ಯಾ |

ರುಕ್ಮಿಣೀ ಅಂಭ್ರಣಿ ಪ್ರಿಯತಮ ಹನುಮ ||

ಭೀಮ ಮಹಾ ಪುರುಷೋತ್ತಮ ದಾಸರಿಗೆ |

ನಮಿಪೆ ವಿಪಶೇಷ ಶಿವಾದ್ಯಮರ ಸನ್ನತರ್ಗೆ 32

ಚತುರ್ಮುಖ ವರವಾಯು ಸರಸ್ವತಿ ಭಾರತಿಗೆ |

ಸದಾ ಶ್ರೀಹರಿಯಲ್ಲಿ ಭಕ್ತಿ ಅಚ್ಛಿನ್ನ ||

ಅತಿರೋಹಿತ ಜ್ಞಾನ ಪ್ರಾಚುರ್ಯರಾಗಿಹರು |

ಸಾಧಾರಣವಲ್ಲ ಋಜುಗಳ ಮಹಿಮೆ 33

ಋಜುಗಳ ರಾಜೀವ ಚರಣಗಳಿಗಾ ನಮಿಪೆ |

ಭುಜಗಶಯ್ಯನಲಿ ಭಕ್ತಿ ಸಹಜ ಇವರಲ್ಲಿ ||

ಭುಜಗ ಭೂಷಣಾದಿಗಳಿಗಧಿಕತಮ ಬಲಜ್ಞಾನ |

ತ್ರಿಜಗಮಾನ್ಯರು ತ್ರಿಗುಣ ತಾಪವರ್ಜಿತರು 34

ಅಪರೋಕ್ಷ ಋಜುಗಣಕೆ ಅನಾದಿಯಾಗಿಯೇ ಉಂಟು |

ತಪ್ಪದೇ ಶತಕಲ್ಪ ಸಾಧನವ ಗೈದು ||

ಶ್ರೀಪನ ಅಪರೋಕ್ಷ ಇನ್ನೂ ವಿಶೇಷದಿ |

ಲಭಿಸಿ ಕಲ್ಕ್ಯಾದಿ ಸುನಾಮ ಧರಿಸುವರು 35

ಕಲ್ಕ್ಯಾದಿ ಪೆಸರಲ್ಲಿ ಪ್ರತಿ ಒಂದು ಕಲ್ಪದಲು |

ಅಕಳಂಕ ಇವರು ಬಹು ಸುವಿಶೇಷ ಸಾಧನದಿ ||

ಭಕ್ತ್ಯಾದಿ ಗುಣಕ್ರಮದಿ ಅಧಿಕ ಅಭಿವ್ಯಕ್ತಿಯಿಂ |

ಮುಖ್ಯ ವಾಯು ಬ್ರಹ್ಮಪದವ ಪೊಂದುವರು 36

ಈ ಬ್ರಹ್ಮಾದಿಗಳೊಳು ಇದ್ದು ಕೃತಿಮಾಡಿಸುವ |

ಶಿರಿಸಹ ತ್ರಿವೃನ್ನಾಮ ಪ್ರಸನ್ನ ಶ್ರೀನಿವಾಸ ||

ಸುಹೃದ ಸೌಭಾಗ್ಯದಗೆ ಜಯ ಜಯತು ಅರ್ಪಿತವು |

ಹರಿವಾಯು ನುಡಿಸಿದಿದು ಜಯತು ಹರಿವಾಯ 37

***


No comments:

Post a Comment