Wednesday 1 December 2021

ಬಾರಯ್ಯ ಎನ್ನ ಮನ ಮಂದಿರಕೆ ಬೇರೊಂದು ಯೋಚನೆ ankita shree krishna BAARAYYA ENNA MANA MANDIRAKE BERONDU YOCHANE

 


ಬಾರಯ್ಯ ಎನ್ನ ಮನ ಮಂದಿರಕೆ ಪ


ಬೇರೊಂದು ಯೋಚನೆ ಮಾಡದೆ ಸಿರಿಪತಿ ಅ.ಪ


ನಾ ರಾಜಸ ಬುದ್ಧಿಯೆಂಬಿಯ ನಿನ್ನಕಾರುಣ್ಯದ ಸೋನೆ ಸೊರಗುವುದೆವಾರ ವಾರಕೆ ಮೇಘವಾರಿಯ ಕರೆದರೆಧಾರುಣಿಗೆ ಕ್ಷಾಮ ಬರುವುದೆ ಕೃಷ್ಣ1


ತಾಮಸ ಬುದ್ಧಿಯೆಂಬಿಯ ನಿನ್ನಶ್ರೀಮೂರ್ತಿ ಹೊಳೆದರೆ ತಮವಡಗದೆಶ್ರೀ ಮನೋಹರನೆ ಭಾನು ಉದಿಸಿದರೆತಾಮಸವಡಗದೆ ಜಗದೊಳು ಕೃಷ್ಣ 2


ನಾ ದೋಷಿ ಕಠಿಣನೆಂತೆಂಬೆಯ ನಿನ್ನಪಾದಪದುಮ ಪಾಪಹರವಲ್ಲವೆಆ ದುಷ್ಟ ಶಿಲೆ ಸೋಕೆ ಋಷಿಪತ್ನಿಯಾದಳುನೀ ದಯಮಾಡೆ ನಾ ನೀಚನೆ ಸಿರಿಕೃಷ್ಣ 3

***


No comments:

Post a Comment