Friday 6 August 2021

ಸೇರಿ ಸುಖಿಸು ಮಾನವ ಗುರು ಚರಣ ಸರೋಜವ ankita shreenidhi vittala

 ..

kruti by ಶ್ರೀನಿಧಿವಿಠಲರು shreenidhi vittalaru


ಸೇರಿ ಸುಖಿಸು ಮಾನವ

ಗುರು ಚರಣ ಸರೋಜವ ಪ


ಸೇರಿದ ಶರಣರ ಘೋರ ಪಾತಕವೆಂಬ

ವಾರಿಧಿ ಭವಕೆ ಸಮೀರ ಜಗನ್ನಾಥ

ಸೂರಿವರ್ಯ ದಾಸಾರ್ಯರಂಘ್ರಿಯನು 1


ತಾರತಮ್ಯವ ತಿಳಿಯದೆ ಕಲಿಯುಗದಿ ಮುಕ್ತಿ-

ದಾರಿಕಾಣದೆ ಭವದಿ ಬಿದ್ದ ಜ-

ನರುದ್ಧಾರ ಮಾಡಲು ದಯದಿ ಬ್ಯಾಗವಾಟದಿ

ನರಸಿಂಗಾಖ್ಯ ವಿಪ್ರಗಾರ ದೋಳುದ್ಭವಿಸಿ

ಶ್ರೀರಮಾಪತಿಯ ಚಾರು ಕಥಾಮೃತ

ಸಾರವ ಧರೆಯೋಳು ಬೀರಿದಂಥವರ 2


ಮೇದಿನಿಯೊಳು ಚರಿಸಿ ವಾಕ್ಯಾರ್ಥದಿ ಬಹು

ವಾದಿಗಳನೆ ಜಯಿಸಿ ಎನಿಸಿದರು ಪೂರ್ಣ

ಬೋಧ ಮತಾಬ್ಧಿಗೆ ಶಶಿನೃಪ ಮಾನ್ಯರೆನಿಸಿ

ಶ್ರೀದ ಪ್ರಹ್ಲಾದನನುಜ ಸಹ್ಲಾದರೆ ಇವರೆಂದು

ಸಾದರ ಬಿಡದ ಪಾದಪಂಕಜಾರಾಧಕರಿಗೆ ಸುರಪಾದರೆನಿಪರ 3


ಕ್ಷೋಣಿ ವಿಬಂಧ ಗಣದಿ ಸೇವೆಯಗೊಂಡು

ಮಾನವಿ ಎಂಬ ಕ್ಷೇತ್ರದಿ ಮಂದಿರ ಮಧ್ವ

ಸ್ಥಾಣುವಿನೊಳು ಮುದದಿ ಕಾರ್ಪರವೆಂಬ

ಕಾನನದಲ್ಲಿ ಕೃಷ್ಣವೇಣಿ ಕುಲದಿ ಮೆರೆವ

ಶ್ರೀನಿಧಿ ನರಪಂಚಾನನಂಘ್ರಿಯುಗ

ಧ್ಯಾನದಿ ಕುಳಿತ ಮಹಾನುಭಾವರನು 4

***


No comments:

Post a Comment