Wednesday 1 September 2021

ವರ್ಣಿಸಲು ಸಾಧ್ಯವೆ ಧರೆಯೊಳಿನ್ನು ಗುರುವರ್ಯಸುಶೀಲೇಂದ್ರ ankita shyamasundara susheelendra teertha stutih

 ..

ವರ್ಣಿಸಲು ಸಾಧ್ಯವೆ ಧರೆಯೊಳಿನ್ನು

ಗುರುವರ್ಯಸುಶೀಲೇಂದ್ರ ತೀರ್ಥರ ಮಹಿಮೆಯನ್ನು ಪ


ಭಾನುನಂದನನಂತೆ ದೀನ ಮಾನವರಿಗೆ

ಸಾನುರಾಗದಿ ಕೊಡುವ ದಾನ ನೋಡಿ ||

ಏನು ಹೇಳಲಿ ದಿವಿಜಧೇನು ಭೂರುಹಮಣಿ

ಕ್ಷೋಣಿಯೊಳು ಜಡಪಶು ರೂಪ ತಾಳಿದವು 1


ಪರಮಠಾಧೀಶರು ಪರಿಪರಿಯಲಿಂದವರ

ಪರಮ ಔದಾರ್ಯಗುಣ ಪರೀಕ್ಷಿಸುತಲಿ

ಬೆರಳು ಕಚ್ಚುತಲಿ ಬೆರಗಾಗಿ ಜಗದೊಳಗೆ

ಸರಿ ಇವರಿಗಿಲ್ಲೆಂದು ಶಿರದೂಗಿ ಹೊಗಳಿದರು 2


ಧೀಮಂತ ಜನರೊಡೆಯ ಶ್ರೀಮಂತಮಂದಿರದ

ಸ್ವಾಮಿಗಳ ಪೂರ್ಣ ಪ್ರೇಮ ಪಡೆದು |

ತಾಮರಸ ಭಾವ ಪೂಜ್ಯ ಶಾಮಸುಂದರ ಮೂಲ

ರಾಮ ಮೂರ್ತಿಯನು ಭೂಮಿಯೊಳು ಮೆರೆಸಿದರು 3

***


No comments:

Post a Comment