Monday 2 August 2021

ನಿತ್ಯ ದಿತಿಜರು ಕಲಿಗೆ ದೂರುತಿಹರೋ ankita sirigovinda vittala satyadhyana teertha stutih

ನಿತ್ಯದಿತಿಜರು ಕಲಿಗೆ ದೂರುತಿಹರೋ

ಸತ್ಯಧ್ಯಾನರ ಕಾಟ ತಾಳಲಾರೆವೊಯೆಂದು ಪ


ನೀ ಕಲಿಸಿದಾಟವನು ತಾ ಕಳೆದು ಜನರ ಅಘನೂಕಿ

ಜಗಸತ್ಯ ಶ್ರೀ ಹರಿಯು ಪರನು

ಶ್ರೀಕಮಲಭವರೆಲ್ಲ ದಾಸರೆಂದರುಪಲು

ತಾ ಕಲ್ಪಿಸಿದ ಪಾಠಶಾಲೆ ಸಭೆಗಳನೆಂದು 1


ಭೂಸುರರಿಗನ್ನ ಧನ ಭೂಷಣಗಳಿತ್ತು

ಅಭ್ಯಾಸಗೈಸಿದ ಸಕಲ ವೇದಶಾಸ್ತ್ರ

ಏಸು ವಿಧ ಯತ್ನಗಳು ನಾ ಮಾಡಿದರು ಜಯ

ಲೇಸು ಕಾಣದೆ ನಿನ್ನ ಬಳಿಗೆ ಬಂದೆವು ಎಂದು 2


ಇಂತು ತಾ ಮಾಡಿದನು ಪಿಂತಿನಾಶ್ರಮದಿ

ಈ ಗಂತು ನಮ್ಮವರಾದ ವದು ಮತ್ಸರಾ

ಕಂತು ಕೋಪಾದಿಗಳಿಗಂತಕನು ಯನಿಸಿ

ಮುನಿ ಸಂತತಿಪನಾಗಿರುವದೆಂತು ನೋಳ್ಪೆವು ಎಂದು 3


ತಾಪಸೋತ್ತಮ ಸತ್ಯದ್ಯಾನದಿಂ ಭೂತಳದಿ

ಪಾಪ ಸರಿದಿತು ಪುಣ್ಯವೆಗ್ಗಳಿಸಿತು

ಲೇಪಿಸದು ಖತಿಜನಕ ಇವರ ದಯದಿಂದೆಮ್ಮ

ವ್ಯಾಪಾರ ಧರೆಯೊಳಗೆ ಭೂಪ ಇನ್ಯಾಕೆಂದು 4


ನಿರುತ ಸಿರಿಗೋವಿಂದ ವಿಠಲನ್ನ ಸೇವಿಸುತಾ

ಪರಹಿಂಸೆ ಧನಯುವತಿ ದ್ಯೂತತೊರದಾ

ವರಯತಿಯ ಮೋಹಿಸುವ ಶಕ್ತಿ ತನಗಿಲ್ಲೆಂದು

ಅರುಹಿದನು ಭೃತ್ಯರಿಗೆ ಕಲಿ ಮನನೊಂದು 5

****


No comments:

Post a Comment