Sunday 1 August 2021

ಮರೆದೆಯೇನೋ ಚನ್ನರಾಯಾ ಒಮ್ಮೆ ಅರಿ ನೀನೆ ವೇಲಾಪುರಿ ಶ್ರೀ ಚನ್ನರಾಯಾ ankita vaikunta vittala

 ..

kruti by ಬೇಲೂರು ವೈಕುಂಠ ದಾಸರು belur vaikunta dasaru


ಮರೆದೆಯೇನೋ ಚನ್ನರಾಯಾ ಒಮ್ಮೆ

ಅರಿ ನೀನೆ ವೇಲಾಪುರಿ ಶ್ರೀ ಚನ್ನರಾಯಾ ಪ


ಪೊಳೆವ ನಂದನವನದಲಲರ್ದ ಮಾವಿನ ನೆಳಲ

ಲಲರುವಾ ಸಿರಿತೋಳ ತಲೆಗಿಂಬನೊರಗೀ

ಅಳಿಯ ಮೃದುಗಾನಕ್ಕೆ ತಲೆದೂಗುತಲೆ ನುಡಿದ

ವಿಲಸಿತದ ಸರಸ ವಚನವ ಚೆನ್ನರಾಯಾ 1


ಬೆಳದಿಂಗಳೆರಕದಂದದ ಸಾರದ್ಹಂದರದಿ

ಪೊಳೆವಿಂದುಕಾಂತದ ಜಗುಲಿಯೊಳೆನ್ನ

ತಲೆಯ ಮಗ್ಗಲನೊರಗಿ ಸುಳಿವೆಲರಗಾಳಿಗಂಜಿಸುತ

ಕಲೆಯರಿತು ಮೈಮರಸಿದುದ ಚನ್ನರಾಯಾ 2


ತನುಮಿಸುಕೆ ಬಹುವಿಧದಿ ಧ್ವನಿಗೈವ ಶಕುನಿ ಪೆಸ-

ರಿನ ಮಂಚದಲಿ ಹಂಸತೂಲ ತಲ್ಪದಲಿ

ಮನಸಿಜಾಗಮವರಿತು ಮನವ ಮೆಚ್ಚಿಸಿದೆ ಎ-

ನ್ನಿನಿಯ ಶ್ರೀ ವೈಕುಂಠಪತಿ ಚೆನ್ನರಾಯಾ 3

***


No comments:

Post a Comment