Sunday 1 August 2021

ಏನು ನೆಲೆ ಯೆನುತಿಹೆ ಮನುಜಾ ನಿ ಧಾನಿಸು ಗತಿಯಚ್ಯುತನಲ್ಲದುಂಟೇ ankita vaikunta vittala

 ..

kruti by ಬೇಲೂರು ವೈಕುಂಠ ದಾಸರು belur vaikunta dasaru


ಯೇನು ನೆಲೆ ಯೆನುತಿಹೆ ಮನುಜಾ ನಿ

ಧಾನಿಸು ಗತಿಯಚ್ಯುತನಲ್ಲದುಂಟೇ ಪ


ಹುಲ್ಲುಹನಿಯು ಗಾಳಿಗಿಟ್ಟ ಸೊಡರು ನೀರ

ಗುಳ್ಳೆಗಳದು ತಾ ಸ್ಥಿರವೆನಿಪಾ

ಜಳ್ಳು ಜವ್ವನವ ನಿಶ್ಚಯವೆಂದು ಕಾಲನ

ಭಲ್ಲೆಯಕೆದೆಯನೊಡ್ಡುವೆಯಾತಕೆ ನೀ 1


ಮಿಂಚಿನ ಬಲೆಯ ರಕ್ಷೆಯ ಮನ ಸುದತಿಯಾ

ಚಂಚಲತೆಯ ಜೀವರ ಗೆಲಿದೂ ಪ್ರ

ಪಂಚಿನ ಸಿರಿಯ ನಿಶ್ಚಯವೆಂದು ಬಗೆದು ನೀ

ಮುಂಚುವೆಯೇಕೆ ನರಕಪತಿ ಕರೆಗೇ 2


ಸುರಚಾಪವೋಲೀ ದೇಹದ ಸಂ

ಗರದಿ ಸೋಲುವ ಶರೀರವ ನಂಬೀ

ನರಕಕೂಪಕ್ಕಿಳಿಯದೇ ವೇಲಾಪುರ

ದರಸ ವೈಕುಂಠ [ಕೇಶವ] ಶರಣೆನ್ನೇ 3

***


No comments:

Post a Comment