Friday 6 August 2021

ರಮಾನುತ ಪಾದಪಲ್ಲವ ಶ್ರೀಕರ ಚರಣ ankita vijayaramachandra vittala vijaya dasa stutih

 ..


Kruti by ವಿಜಯರಾಮಚಂದ್ರ ವಿಠಲ ದಾಸರು mysore kattemane 


ರಮಾನುತ ಪಾದಪಲ್ಲವ ಶ್ರೀಕರ ಚರಣ

ಸೇವಕರ ಸಂಗದೊಳಿರಿಸು ವಿಜಯರಾಯ ಪ


ನಿಮ್ಹೊರತು ಪೊರೆವರನ್ಯರನು ನಾಕಾಣೆ

ನಿಮ್ಮ ಚರಣವ ನಂಬಿದೆ ಕರುಣದಿ ಕಾಯೊ ಅ.ಪ


ಪಂಡಿತ ಪಾಮರರನು ಉದ್ಧಾರ

ಮಾಡೆ ಕರುಣದಿಂದ ಸಕಲ ವೇದಗಳ

ಕ್ರೋಡೀಕೃತವಾದ ನಿರ್ಣಯ ಭಾಷ್ಯಗಳರ್ಥವ

ಮಾಡಿದಿ ಪದಗಳ ಸಕಲರೂ ತಿಳಿವಂದದಿ 1


ನಿನ್ನವರಾದ ರಂಗ ಒಲಿದ ರಾಯರ ನೋಡು

ನಿನ್ನ ಉಕ್ತಿಯ ನಂಬಿದ ವೆಂಕಟರಾಯರ ನೋಡು

ನಿನ್ನವನೆಂದೆನ್ನನು ಅವರಂತೆ ನೋಡದೆ

ಎನ್ನ ಕೈ ಸಡಿಲ ಬಿಡುವದೇನೋ 2


ಎಂದಿಗಾದರು ನಿನ್ನ ದಾಸರ ಕರುಣದಿಂದ

ಪಾದದ್ವಂದ್ವ ಹೊಂದದೆ ಹೋಗುವೆನೆ ದಾಸರಪ್ರಿಯನೆ

ತಂದೆ ವಿಜಯ ರಾಮಚಂದ್ರವಿಠಲರಾಯನ

ಹೊಂದುವ ಮಾರ್ಗವ ಬಂದು ತೋರಿಸಬೇಕೊ 3

***


No comments:

Post a Comment