Friday 6 August 2021

ನೆನಸದಿರು ಎಲೆ ಮನವೆ ಅನುದಿನ ವಿಷಯ ಸುಖವು ಎಂದು ankita vijayaramachandra vittala

 ..


Kruti by ವಿಜಯರಾಮಚಂದ್ರ ವಿಠಲ ದಾಸರು mysore kattemane 


ನೆನಸದಿರು ಎಲೆ ಮನವೆ ಅನುದಿನ

ವಿಷಯ ಸುಖವು ಎಂದು

ಕನಸಿಲಾದರು ಸ್ಮರಿಸಲಾಗದು ಮನವೆ ಪ


ಘನ ಸಂತೋಷವಿಲ್ಲವಿದು ನಿತ್ಯಾನಿತ್ಯ ಸುಖ ಬಯಸಿ

ಮನದಲ್ಲಿ ನೀ ಸ್ಮರಿಸೆ ಹರಿಯೆ | ತೊರೆಯ ಅ.ಪ


ಅಶನ ವಸನ ಪಶುವ್ರಾತ ವಶವಿರುವಾಭರಣ

ಹಸನಾದ ರಥ ಪದಾತಿಗಳು

ಸ್ವಸ್ವರೂಪವಲ್ಲ ಭಿನ್ನ ತಿಳಿಯೊ | ಮಮತೆ ಅಳಿಯೊ 1


ಬುದ್ಧಿ ವಿದ್ಯಾಕುಶಲ ಗತಿ ಅಧ್ವರ್ಯ ಪ್ರಭು ಮನ್ನಣೆ

ಶುದ್ಧ ರೂಪ ಲಾವಣ್ಯ ಯೌವನ

ತಿದ್ದಿದ ಮತಿಯೆ ಸಿರಿ ಶೌರ್ಯ ಪರಾಕ್ರಮ

ವದ್ಯವಾಗಿ ಪೋಪುದು ಸ್ಥಿರವಲ್ಲ | ಸುಳ್ಳಲ್ಲ 2


ಇಚ್ಛೆಯಿಲ್ಲದೆ ನೀನು ಜನರ ಮೆಚ್ಚಿಗಾಗಿ ಮಾಡಿದ ದಾನ

ವೆಚ್ಚವಾಗಿ ಪೋಪವೊ ಧನವಲ್ಲದೆ

ನಿಚ್ಚಳ ಪುಣ್ಯಬಾರದು ಮನವೆ ಹೆಚ್ಚಿನ ಸ್ತೋತ್ರಕೆ ಮರುಳಾಗಿ

ನೆಚ್ಚದಿರು ವಿಹಿತೋಕ್ತಿಯ | ಬಿಡದಿರು ಸನ್ಮತಿಯ 3

ಆರ್ತನಾಗದಲೆ ನೀನು ಕೀರ್ತಿಗೋಸುಗ ಕಥಾಶ್ರವಣ

ಕರ್ತಭಾವದಿ ಸತತ ಮಾಡೆ

ವರ್ತಿಸುವ ಪುಣ್ಯಪ್ರಾಪ್ತಿ ವೈಷಿಕ ಸುಖವಲ್ಲದೆ

ಶಾಸ್ತ್ರಮರ್ಮ ತಿಳಿಯದೊ | ಅಹಂ ಮಮವಳಿಯದೊ 4


ಮಾನಿತನು ನಾನೆಂದು ನಾನಾ ಮತವಾಶ್ರಯಿಸಿ

ಜ್ಞಾನಿಗಳಿಗೆ ಶಿರಬಾಗಲೊಲ್ಲಿ

ಏನು ಇದರಿಂದೆಂಬ ತ್ರಿಕರಣ ಶುದ್ಧಿಕಾರಣ

ದ್ಯುನದಿ ಸ್ನಾನವಾಹವಲ್ಲಾ | ಇದು ಬಿಡಸಲ್ಲಾ 5


ಜ್ಞಾನ ಭಕ್ತಿ ವೈರಾಗ್ಯವನು ಅನುವಾಗಿ

ಕೈಗೊಳುವುದೇ ಮಾನ

ಅನ್ಯಾಧೀನವೆನ್ನದೆಂಬುದೇ ಲಜ್ಜಾ

ಅನುಭವ ಜ್ಞಾನಿಗಳ ಸಹವಾಸ ಸ್ನಾನ ಸಚ್ಛಾಸ್ತ್ರಾಲಾಪ

ನಾನು ನನ್ನದು ಬಿಡುವುದೇ ತ್ಯಾಗ | ಇದೇ ಯೋಗ 6


ಕರಣ ವಿಷಯಗಳಲ್ಲಿ ಹರಿಯ ಚಿಂತಿಸುತ ನಿತ್ಯ

ವರ ಯೋಗ ಭೋಗದಲ್ಲಿ

ವರ ರಾಮಚಂದ್ರವಿಠಲರಾಯನು ನಿನ್ನ

ದುರಿತ ಕಳೆದು ಪಾಲಿಸುವ7

***


No comments:

Post a Comment