Wednesday 1 December 2021

ನಡೆದು ಬಾರಯ್ಯ ಕೃಷ್ಣ ನಡೆದು ankita bheemesha krishna NADEDU BAARAYYA KRISHNA NADEDU



ನಡೆದು ಬಾರಯ್ಯ ಕೃಷ್ಣ ನಡೆದು ಪ


ಪಕ್ಷಿವಾಹನ ಪರಪೇಕ್ಷಾರಹಿತ ನಿನ್ನ ಕುಕ್ಷಿಯೊಳಗೆ ಜಗ

ರಕ್ಷಿಸುವಾತನೆಂದು ವಕ್ಷಸ್ಥಳದಿ ಶ್ರೀಮಾ-

ಲಕ್ಷ್ಮಿಧರಿಸಿ ಪಾಂಡುಪಕ್ಷನೆನಿಸಿ ನೀ ಪ-

ರೀಕ್ಷಕನುಳುಹಿದಂತಕ್ಷದಿ ನೋಡುತಧೋಕ್ಷಜ ಹರಿಯೆ 1


ಸತ್ಯವಂತನೆ ಕೇಳಸತ್ಯ ಅಜ್ಞಾನ ಭವ-

ಕತ್ತಲೊಳಗೆ ಬಹಳ ಶತ್ರು ಸಮೂಹದಲ್ಲಿ

ಸುತ್ತಿ ಬಳಲುವೆ ಕೇಳಾಪತ್ತು ಬಾಂಧವ ನಿನ್ನ

ಚಿತ್ತಕ್ಕೆ ತಂದು ಸಮಸ್ತ ಸುರೇಶ ನಿನ್ನ

ಹತ್ತಿಲೆ ಕರಿ ಸರ್ವೋತ್ತಮ ಹರಿಯೆ 2


ಧೀರ ಗಂಭೀರ ನಿನ್ನ ಸಾರಥ್ಯ ದೊರೆಯಲ್ವಿ-

ಚಾರ ಮಾಡಿದರು ನಿನ್ನಾರು ತಿಳಿಯಲಿಲ್ಲೊ

ಶೂರ ಸುತಗೆ ಸುಕುಮಾರನೆನಿಸಿದಂಥ ಅ-

ಪಾರ ಮಹಿಮನೆ ಸಮೀರಜ ಭವ ಸುರ

ನಾರದಪ್ರಿಯನೆ ಉದ್ಧಾರಮಾಡು ಎನ್ನನು 3


ಗಜರಾಜ ವರದನೆ ತ್ರಿಜಗದೊಡೆಯ ನಿನ್ನ

ಧ್ವಜ ವಜ್ರಾಂಕುಶ ಪಾದಭಜಕರೆನಿಸುವಂಥ

ಸುಜನರ್ವಂದಿತನಾದ ಕುಜನ ಕುಠಾರಿಯೆ ನೀ

ಅಜಮಿಳಗೊಲಿದಂಥಜಗಣೇಂದ್ರನ ಪ್ರಿಯ

ನಿಜವಾಗಿ ನೋಡೆನ್ನ ರಜತಮ ಕಳೆಯುವ 4


ಕಡಲಶಯನನಾದ ಉಡುರಾಜ್ವದನ ಬಿಟ್ಟು

ಭಿಡಿಯ ಭೀಮೇಶ ಕೃಷ್ಣ್ನೆನ್ನೊಡೆಯನೆನುತ ಬಂದ

ಬಡವ ಸುದಾಮಗಿಟ್ಟಿ ಹಿಡಿ ಹಿಡೀ ಎಂದು ಭಾಗ್ಯ

ತಡೆಯದೆ ನಾ ನಿನ್ನಡಿಗಳಿಗೆರಗುವೆ ಕೊಡು

ಕೊಡು ವರಗಳ ಪೊಡವಿ ಪಾಲಿಪನೆ 5

***


No comments:

Post a Comment