Wednesday 1 September 2021

ಬಂದು ಸಂಸಾರದಿ ನೊಂದು ತಾಪತ್ರಯದಿ ಬೆಂದು ಕಂದಿ ಕುಂದಿದೆ ದೇವಾ ankita gurujagannatha vittala

 ..

ಬಂದು ಸಂಸಾರದಿ ನೊಂದು ತಾಪತ್ರಯದಿ

ಬೆಂದು ಕಂದಿ ಕುಂದಿದೆ ದೇವಾ ಪ


ಪರಮ ಕರುಣಿಯೆ ನಿನ್ನ ಶರಣು ಪೊಕ್ಕಾ ಜನರ

ಪರಿಪಾಲಿಪನೆಂಬ ಬಿರಿದೊ ಅರಿದೂ ನೀನೆ

ಮೆರೆಯದಲೆ ಸಲಹÀಬೇಕೆನ್ನ ನಿನ್ನ

ಚರಣನೀರಜಯುಗ್ಮವನ್ನಾ ತೋರಿ

ಹರುಷವನೆ ನೀಡೆಲೋ ಮುನ್ನಾ ಘನ್ನ

ಪರಮಭಕುತಿ ವಿರಕುತಿ ನೀನೆ ಎನಗಿತ್ತೆನ್ನ

ಹರುಷದಲಿ ಪಾಲಿಸೈಯ್ಯಾ ಜೀಯಾ 1


ಮಾನುಷಾಧಮ ನಾನು ಹೀನಮತಿಯಲಿ ನಿನ್ನ

ಧ್ಯಾನವನು ಮಾಡದಲೆ ಬರಿದೆ ಜರಿದೆ ಇಂಥ

ಹೀನಭವದೊಳಗೆ ಬಾಯಿದೆರದೆ ದಿವ್ಯ

ಜ್ಞಾನಿಜನರನ್ನು ನಾ ಜರಿದೆ ಙÁ್ಞನ

ಹೀನನಾಗಿ ಕಾಲಕಳೆದೆ ಇನ್ನು

ಶ್ರೀನಿವಾಸನೆ ನಿನ್ನ ಧ್ಯಾನ ಮಾಡುವೆನೋವಿ -

ಜ್ಞಾನವನೆ ಪಾಲಿಸಯ್ಯಾ ಜೀಯಾ 2


ಈಸುವತ್ಸರ ನಿನ್ನುಪಾಸನವ ಮಾಡದಲೆ

ರಾಸಭಾನಂತೆ ಬದುಕಿದೆ ದೇವಾ ಈಗ

ವಾಸವಾಗೆಲೋ ಮನದಿ ಸ್ವಾಮೀ ನಾನು

ಈಸಲಾರೆನು ಭವದಿ ಪ್ರೇಮೀ ಎನ್ನ

ಆಸೆ ಪೂರ್ತಿಸೊ ಅಂತರ್ಯಾಮಿ ಇನ್ನು

ಎಸುವಿಧದಲಿ ಸರ್ವೇಶ ಪೇಳಲಿ ಮುನ್ನೆ

ಈಶ ಭವಶ್ರಮ ಕಳಿಯೋ ಈಗಾ ವೇಗಾ 3


ಆವ ಕರ್ಮದಲಿಂದ ಈ ವಸುಮತಿಯಲ್ಲಿ

ಈ ವಿಧಾದಿಂದ ಬಂದೆ ನಿಂದೆ ನಿನ್ನ

ಸೇವಕಾನಲ್ಲವೆ ತಂದೆ ಎನ್ನ

ಆವಾಗ ನೋಡುವಿಯೊ ಮುಂದೆ ಈಗ

ಕಾವವನಾರು ನಾ ಎಂದೆ ವೇಗ

ದೇವ ನಿನ್ನಯ ಪಾದಸೇವೆ ಸುಖವನು ಇತ್ತು

ಆವ(ಅವ)ರಂತೆ ಪೊರೆಯೊ ಎನ್ನಾ ಚೆನ್ನಾ 4


ಉರಗಾದ್ರಿ ನಿಲಯನೆ ವರಭೋಗಿಶಯನನೆ

ಪರಮಪುರುಷನು ಎಂದು ಮೊರೆಯಾ ಇಡುವೆ ನಿನ್ನ

ಪರಿಪರಿಯ ಜನರನ್ನು ಪೊರೆವೆ ಎನ್ನ

ತಿರಸ್ಕಾರ ಮಾಡುವುದು ಥsÀರವೇ ನಿನ್ನ

ಮರಿಯಾದೆಯಲ್ಲಮರತರುವೇ ಕೃಪಾ

ಕರನೇ ಸರ್ವರಿಗು ಸರಿಯಾಗಿ ಇರುತಿರುವಿ

ಗುರುಜಗನ್ನಾಥ ವಿಠಲಾ ವತ್ಸಲಾ 5

***


No comments:

Post a Comment