Wednesday 1 September 2021

ನಾರಾಯಣೆನು ಮನವೆ ನರಹರಿಯ ನೆನೆ ಮನವೆಘೋರ ದುರಿತಗಳ ಬೆದರಿಸಿ ಓಡಿಸುವುದು ankita neleyadikeshava

 ..

ನಾರಾಯಣೆನು ಮನವೆ ನರಹರಿಯ ನೆನೆ ಮನವೆಘೋರ ದುರಿತಗಳ ಬೆದರಿಸಿ ಓಡಿಸುವುದು ಪ


ಗುರುವಿನುಪದೇಶದಲ್ಲಿ ಪರಮ ರಹಸ್ಯವನರಿತುಮರೆಯದಲೆ ಅಲ್ಲಿ ಅಧಿಕಾರಿಯಾಗೊತಿರುಮಂತ್ರವನು ಜಪಿಸು ತಿರುಲಾಂಛನವ ಧರಿಸುಪರಮ ವೈಷ್ಣವರ ಪಂಕ್ತಿಯ ಸೇರು ಮನವೆ 1


ಕುಲಛಲಂಗಳ ಬಿಟ್ಟು ಬಲು ಪಾಶಗಳ ತರಿದುಹಲವು ಕೊಂಬೆಗೆ ನೀನು ಹರಿದಾಡದೆಸುಲಭದಲಿ ಶ್ರೀಪಾದತೀರ್ಥ ಪ್ರಸಾದವನುನೆಲೆಗೊಳಿಸಿ ಆತ್ಮನಿಗೆ ನಿತ್ಯ ಸುಖಿಯಾಗೋ 2


ಶೇಷವಿಶೇಷವೆಂದೆನಿಪ ಪರಮಾರ್ಥದೊಳುಮೀಸಲಳಿಯದ ಪಾಪರಹಿತನಾಗುವಾಸಾಧಿಪತಿ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸ ನೀನಾಗೊ 3

****


No comments:

Post a Comment