Wednesday 1 September 2021

ಯಾಕೆಮ್ಮನಗಲಿ ಪರಲೋಕ ಸೇರಿದೆ ಗುರು ಐಕೂರು ನರಸಿಂಹಾರ್ಯ ankita shyamasundara ikoor narasimharya stutih

 ..

ಯಾಕೆಮ್ಮನಗಲಿ ಪರಲೋಕ ಸೇರಿದೆ ಗುರು

ಐಕೂರು ನರಸಿಂಹಾರ್ಯ ಪ


ಲೌಕಿಕವ ಬಿಟ್ಟು ಸುವಿವೇಕ ನಡೆವ

ವಾಕು ಪೇಳ್ವರ ಕಾಣೆ ಲೋಕದೊಳು ನಿನ್ಹೊರತು ಅ.ಪ


ಅತಿಮಂದರಾದೆಮಗೆ | ಶ್ರುತಿ ಶಾಸ್ತ್ರ ಪುರಾಣ

ಕಥೆ ದಾಸ ಕವಿತೆ ಸತತ ಪೇಳಿ

ಮತಿವಂತರೆನಿಸಿ ಸ್ಪÀತ್ವಥ ಪಡಿಸಿ ಮುಂದೆ ಸ

ದ್ಗತಿ ಕಾಣಿಸದೆ ಜಗದಿ ಹತಭಾಗ್ಯರನು ಮಾಡಿ 1


ಸಾಧುವರ್ಯನೆ ನಿಮ್ಮ ಪಾದವೇ ಗತಿ ಎಂದು

ಸಾದರದಿ ನಿರುತ ನೆರೆನಂಬಿದಂಥ

ಸೋದರಿಯರು ಪಂಚ ಭೇದ | ತರತಮಜ್ಞಾನ

ಬೋಧಿಸುವರಿಲ್ಲೆಂದು ಖೇದದಿಂದಿರುತಿಹರು 2


ಸೂರಿವರ ನಿನ್ನಗಲಿದಾರಭ್ಯ ಧರೆಯೊಳಗೆ

ನೀರಿಂದ ದೂರಾದ ಮೀನಿನಂತೆ

ಘೋರ ದುಃಖದಿ ಮುಳುಗಿ ಪಾರುಗಾಣದೆ ದಿಕ್ಕು

ತೋರದಾಗಿಹುದೀಗ ಬಾರೋ ಮನಮಂದಿರದಿ 3


ತನುವು ತ್ಯಜಿಸಿದರೇನು | ಅನಿಮಿಷಾಂಶನೆ ನಮ್ಮ

ಕನಸು ಮನನಿನೊಳಗೆ ಸುಳಿದಾಡುತ

ಕೊನೆಯಲ್ಲಿ ಹರಿನಾಮ | ಅನುಗ್ರಹಿಸುವೆವು ಎಂಬ

ಘನ ಅಭಯ ನೀಡೆಂದು ಮಣಿದು ಪ್ರಾರ್ಥಿಪೆನಯ್ಯ 4


ಪುಣ್ಯಪುರುಷನೆ ನಮಗೆ ಇನ್ನಾವ ಬಯಕಿಲ್ಲ

ಜನ್ಮ ಜನ್ಮಕೆ ನಿನ್ನ ಚರಣಾಬ್ಜವ

ಚನ್ನಾಗಿ ಸೇವಿಸುವ ಘನ್ನ ಸುಖಗರಿಯೆಂದು

ಸನ್ನುತಿಸಿ ವಿನಯದಲಿ ಬಿನ್ನೈಸುವೆವು ನಿತ್ಯ 5


ನಿನ್ನಿಂದ ಸತ್‍ಶ್ರವಣ | ನಿನ್ನಿಂದ ಅಘಹರಣ

ನಿನ್ನಿಂದ ಶ್ರೀವಾಯು ಹರಿಯಕರುಣ

ನಿನ್ನಿಂದ ಉಪದೇಶ \ ನಿನ್ನಿಂದ ಭವನಾಶ

ನಿನ್ನಿಂದ ಬಿಂಬ ದರ್ಶನವು ನಮಗಿನ್ನು 6


ಪಾಮರರ ಅಪರಾಧ ನೀ ಮನಕೆ ತಾರದಲೆ

ಹೇಮ ಕಾಮಿನಿ ಭೂಮಿ ಈಮೂರರ

ವ್ಯಾಮೋಹವನೆ ಬಿಡಿಸಿ | ಶಾಮಸುಂದರ ಭಕ್ತ

ಸ್ತೋಮ ಸಂಗದೊಳಿಟ್ಟು ಪ್ರೇಮದಲಿ ಪಿಡಿಕೈಯ್ಯ 7

***


No comments:

Post a Comment