Friday 3 September 2021

ನಂಬೋದ ಖರಿಯಾ ಶ್ರೀಹರಿಯಾ ಪಾದ ನಾ ankita vasudeva vittala

 ..

kruti by ವ್ಯಾಸತತ್ವಜ್ಞ ತೀರ್ಥರು vyasatatwajna teertharu 


ನಂಬೋದ ಖರಿಯಾ ಶ್ರೀಹರಿಯಾ ಪಾದ ನಾ

ನಂಬೋದೆ ಖರಿಯಾ ಅಂಬುಜಾಂಬಕ ತನ್ನ

ನಂಬಿದ ಭಕುತರ

ಇಂಬಾಗಿ ಪೊರೆದೆನೆಂತೆಂಬ ವಾರುತಿ ಕೇಳಿ ಪ


ದೂರವಾದರೆ ತಾನು ನಾರಿಯ ಮೊರೆ ಕೇಳಿ

ಚೀರಿ ಕರೆದಳೆಂದು ಶೀರಿಗಳನೆ ಇತ್ತು

ಮೀರಿ ಪೊರೆದನೆಂಬೊ ವಾರುತಿ ಜಗದೊಳು

ಬೀರಿದನರಿಯಾ

ಬಿಂಕವ ಬಿಟ್ಟು ಸೇರಿಕೊ ಹರಿಯ

ದಾರಿ ಕಾಣದೆ ವನ ಸೇರಿದ ಕುವರನ್ನ

ಸಾರೆಗರೆದು ಸೌಖ್ಯ ಪೂರೈಸಿದನೆಂದು 1


ಕಾಡಾನೆ ವ್ರಜದೊಳು ಕೂಡಿದ್ದ ಗಜರಾಜ

ಗಾಡಾಹ ತಾಪದಿಂದ ಬಾಡಿ ನೀರಡಿಸಲು

ಗೂಢ ಸರೋವರ ನೋಡಿ ನೀರನೆ ಪೊಕ್ಕು

ಆಡಾಲು ಮದದಿ ನಕ್ರನು ಬಂದು ಪೀಡಿಸೆ ಭರದಿ

ಮೂಢ ನಾನೆಲೊ ಕೃಷ್ಣ ಮಾಡೊ ರಕ್ಷಣೆಯನ್ನು

ಓಡಿಬಂದಭಯವ ನೀಡಿದ ಪರಿ ನೋಡಿ 2


ಭೂಸುರ ವರನೊಬ್ಬನು ದೇಶ ದೇಶವ ತಿರುಗಿ

ಕಾಸು ಬಾಳದ ಸ್ತ್ರೀಯಳಿಗೆ ಆತನೆ ವಶವಾಗಿ

ಹೇಸಿಕಿಲ್ಲದೆ ಅಲ್ಲಿ ತಾ ಸೂನುಗಳ ಪಡಿಯೆ ಸಹ

ವಾಸರ ಕಳಿಯೆ ಕಾಲನು ಘೋರ ಪಾಶದಿ ಶಳಿಯೆ

ಆ ಸಮಯದಿ ಕೊನೆ ಕೂಸನ್ನೆ ಕೂಗಲುವಾಸುದೇವವಿಠಲ ತಾ ಸಲಹಿದನೆಂದು 3

***


No comments:

Post a Comment