Wednesday 1 September 2021

ಸಿಲುಕಿದೆನು ಭವ ಪಾಶದಲಿ ನಾನು ಹರಿಯೆ ಕಿಲಿಕಿಲಿ ನಗುವರೆ ಸಲಹುವದು ದೊರೆಯೆ ankita vasudeva vittala

 ..


kruti by ವ್ಯಾಸತತ್ವಜ್ಞ ತೀರ್ಥರು vyasatatwajna teertharu 


ಸಿಲುಕಿದೆನು ಭವ ಪಾಶದಲಿ ನಾನು ಹರಿಯೆ

ಕಿಲಿಕಿಲಿ ನಗುವರೆ ಸಲಹುವದು ದೊರೆಯೆ ಪ


ಕೆಲರ ಮಾತಿಗೆ ಪೋಗಿ ಬಲವಾಗಿ ಅವರ

ಕೆಲಸ ಮಾಡುವೆ ನಿಜ ಕೆಲಸವ ಮರೆದೆ ನಾ 1


ಧರಣಿಯ ಪತಿಯೇವೆ ಶರಣೆಂದು ತಿಳಿದು

ಮರೆದೆನೊ ನಿನ್ನ ಪಾದ ಸಿರಿಯ ರಮಣನೆ2

ಉದರಗೋಸುವಾಗಿ ಮರೆದವರ ವಶದಿ

ಹದನವ ಕಳಕೊಂಡು ಮದಡ ನಾನಾದೆನೊ 3


ಉಣವೆನೊ ಪರರನ್ನ ದಣಿವೆನೊ ಅದಕ್ಕೆ

ಕುಣಿವೆನೊ ಅವರಂತೆ ಗುಣವೇನು ಎನಗೆ 4


ಈಸು ಪರಿಯಲೆನ್ನ ಶ್ರೀಶ ದಾಸರ ವಶದಿ

ವಾಸವಿತ್ತು ಬದುಕಿಸೊ ವಾಸುದೇವವಿಠಲ 5

***


No comments:

Post a Comment