Wednesday 1 September 2021

ಸೃಷ್ಟಿ ಕಾರಣ ದಯಾ ದೃಷ್ಟಿಯಲಿ ನೋಡೆನ್ನ ಘಟ್ಟಿಗನೆನಬೇಕೊ ಇಷ್ಟಿಲ್ಲ ಅಪರಾಧ ankita vasudeva vittala

 ..


kruti by ವ್ಯಾಸತತ್ವಜ್ಞ ತೀರ್ಥರು vyasatatwajna teertharu 


ಸೃಷ್ಟಿ ಕಾರಣ ದಯಾ ದೃಷ್ಟಿಯಲಿ ನೋಡೆನ್ನ

ಘಟ್ಟಿಗನೆನಬೇಕೊ ಇಷ್ಟಿಲ್ಲ ಅಪರಾಧ ಪ


ಇಷ್ಟವರನ ಬಂಧದೋಳೆನ್ನ ಸಿಲುಕಿಸಿ

ದುಷ್ಟರೂ ಒಂದಾಗಿ ತಾವೆಲ್ಲ ಎನ್ನನೂ

ಕಷ್ಟಬಡಿಸೇವಂತ ದ್ವೇಷದಿ ಹವಣಿಸ

ಲಿಷ್ಟರೊಳು ನೀ ಕೇಳುವಂತೆ ಕೂಗಿದೆನಲ್ಲ 1


ನಿನ್ನ ಮಾತುಗಳಾಡಧ್ಹಾಂಗೆನ್ನ ಮಾಡಿಸಿ

ಅನ್ಯವಾರುತಿಗಳು ಚನ್ನಾಗಿ ನುಡಿಸಲು

ಅನ್ಯಾಯ ಬಂತೆಂದು ಅವರಂತೆ ನುಡಿದು ನಾ

ಮನ್ನದೊಳಗೆ ಮೊರೆ ಇಟ್ಟದನರಿಯಾ 2


ಒಳಗೆ ಹೊರಗೆ ತುಂಬಿಕೊಂಡಿಹರು ಬಹಳ

ಖಳರು ಅವರು ದೇಶ ಕಾಲವಯ್ಯ

ಬಳಿಯಲಿ ನಿನ್ನವರು ಗೂಢ ವೇಷದಿ ತಾವು

ಸುಳಿಯಲು ಅವರನ್ನು ಗುರುತು ಮಾಡಿದೆನಯ್ಯ 3


ಈಗಲೂ ನಿನ್ನ ಬಲಪವನನಾಗಮದಿಂದ

ಬ್ಯಾಗನೆ ಖಳರನ್ನ ವರದು ಸವರಿಸೊ

ಜಾಗರೂಕನಾಗಿ ಅದೇ ಪದ್ಧತಿ ಪಿಡಿದು

ಸಾಗಿ ಬಂದೆನು ಕೇಳು ಎನ್ನಿಂದೇನಪರಾಧ4


ಲೇಸಾಗಿ ಬಲವಿತ್ತು ಎನ್ನನು ಕಳಿಸಲು

ಆಸು ಅಸುರರನ್ನು ತರದೊಟ್ಟುವೆಯಾ

ವಾಸುದೇವವಿಠಲ ನೀ ಕೈಯ್ಯ ಪಿಡಿದರೆ

ಆ ಸುಕಾರ್ಯಕೆ ಬಾಹೆ ನೋಡೆನ್ನ ಶಕುತಿ5

***


No comments:

Post a Comment