Wednesday 1 September 2021

ಎನ್ನ ಬಿನ್ನಪ ಸಖಿ ಚನ್ನಾಗಿ ತಿಳಿಸೆ ಚನ್ನಿಗರರಸ ಪೋರನ್ನ ಕೃಷ್ಣನ ಮುಂದೆ ankita vasudeva vittala

 ..


kruti by ವ್ಯಾಸತತ್ವಜ್ಞ ತೀರ್ಥರು vyasatatwajna teertharu 


ಎನ್ನ ಬಿನ್ನಪ ಸಖಿ ಚನ್ನಾಗಿ ತಿಳಿಸೆ

ಚನ್ನಿಗರರಸ ಪೋರನ್ನ ಕೃಷ್ಣನ ಮುಂದೆ ಪ


ಜನನಿ ಜನಕ ಚಿಕ್ಕತನದಿಂದ ತನಗತಿ

ಮನಮುಟ್ಟಿ ವಿನಯದಿ ವಿನಿಯೋಗಿಸಿ

ಜನರೊಳು ಘನ ಧರ್ಮ ಧನ ಗಳಿಸಿದರಂತೆ

ಅನುಸ್ಮøತಿ ಎನಗಿನ್ನು ಇನಿತಿಲ್ಲವು ಪೇಳೆ 1


ಅಂದಿಂದಾತನ ಮೊಗ ಚಂದಾಗಿ ನೋಡಿಲ್ಲವೆ

ಒಂದು ಬಾರೆನ್ನ ತಾನು ಬಂದು ತೋರನೆ

ಮಂದಿ ಪೇಳುವದು ಕೇಳ್ಯಾನಂದಿಸುವೆನಲ್ಲದೆ

ಮುಂದೇನು ಗತಿಯೆಂದು ಇಂದುಮುಖಿಯೆ ಪೇಳೆ2


ದಿನಗಳೊದಗಿದವೆ ಜನರೆಲ್ಲ ಕಂಡಂತೆ

ಬಿನಗು ಮಾತುಗಳನು ಎನಗಂಬರೆ

ಎನಗೇನು ಇದರಿಂದ ತನಗೆ ಆ ಕೀರುತಿ

ಮನಮುಟ್ಟಿ ನೀ ಪೇಳೆ ವನಜಾಕ್ಷಗೆ ಸಖಿ3


ಪಿರಿಯ ಸತಿಯರಂತೆ ಪರಿ ಪರಿ ಭೂಷಣ

ಸರಿ ಬಂದರೆ ಉಪಚರಿಸುವಂತೆ

ದೊರಿಯರ ಸತಿಯರ ನರರ ದೃಷ್ಟಿಯ ಬಾಧೆ

ಪರಿಚಾರಕರಿಟ್ಟು ಪರಿಹರಿಸ ಪೇಳೆ 4


ಆ ಸುದತಿಯರನ್ನ ಲೇಸಾಗಿ ಭೋಗಿಸೆ ನಾ

ನಸೂಯ ಅದರಿಂದ ಲೇಶ ಮಾಡೆ

ವಾಸುದೇವವಿಠಲ ಈ ಸಮಯದಲಿ ಎನ್ನ

ತಾ ಸುಮುಖದಿಂದ ನೋಡೆ ನಾ ಸುಖಿ ಸಖಿಯೆ5

***


No comments:

Post a Comment