Sunday 21 November 2021

ಎಂತಾದರೂ ಚಿಂತೆ ಬಿಡದು ನಿಶ್ಚಿಂತರಾದವರ purandara vittala ENTAADARU CHINTE BIDADU NISHCHINTARAADAVARA

ರಾಗ ರೇವತಿ 


ಎಂತಾದರೂ  ಚಿಂತೆ ಬಿಡದು|

ನಿಶ್ಚಿಂತರಾದವರ ನಾನೊಬ್ಬರನು ಕಾಣೆ||


ಬ್ರಹ್ಮನಿಗೆ ಶಿರವೊಂದು ಭಿನ್ನವಾದ ಚಿಂತೆ

ರಕ್ಕಸರ ಗುರುವಿಗೆ ಕಣ್ಣಿಲ್ಲದ ಚಿಂತೆ|

ಮನ್ಮಥಗೆ ತನುಸುಟ್ಟು ಭಸ್ಮವಾದ ಚಿಂತೆ

ಮುಕ್ಕಣ್ಣ ಶಿವನಿಗೆ ತಿರಿದುಂಬೊ ಚಿಂತೆ||


ಧರ್ಮನಿಷ್ಠರಿಗೆ ಸುಖದೊಳಿರುವ ಚಿಂತೆ

ದುಷ್ಕರ್ಮಿಗಳಿಗೆ ಪರರ ಕೆಡಿಸುವ ಚಿಂತೆ|

ತಮ್ಮ ಅರ್ಜುನಗೆ ವೈರಿಯ ಕೊಲ್ಲುವ ಚಿಂತೆ

ಅಣ್ಣ ಭೀಮನಿಗೆ ಅನ್ನ ಸಾಲದ ಚಿಂತೆ||


ಭಕ್ತರಿಗೆ ಗುರುವಿನಲಿ ಮುಕ್ತಿ ಪಡೆಯುವ ಚಿಂತೆ

ಮುಕ್ತರಿಗೆ ಅನುಕ್ಷಣವು ಹರಿದರ್ಶನದ ಚಿಂತೆ|

ಯುಕ್ತಿ ಬಲ್ಲವರಿಗೆ ತತ್ತ್ವ ಹೇಳುವ ಚಿಂತೆ

ಶಕ್ತ ಪುರಂದರವಿಟ್ಠಲಗೆಮ್ಮ ಸಲಹುವ ಚಿಂತೆ||

***



No comments:

Post a Comment