Showing posts with label ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು prasannashreenivasa akshobhya teertha charite. Show all posts
Showing posts with label ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು prasannashreenivasa akshobhya teertha charite. Show all posts

Thursday 5 August 2021

ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ankita prasannashreenivasa akshobhya teertha charite

 ..

kruti by prasanna shreenivasaru ಪ್ರಸನ್ನ ಶ್ರೀನಿವಾಸದಾಸರು

ಅಕ್ಷೋಭ್ಯ ತೀರ್ಥರ ಚರಿತ್ರೆ


ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮ

ರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆ

ಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷ

ವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ ಪ


ಅಖಿಳಗುಣ ಆಧಾರ ನಿರ್ದೋಷ ಶ್ರೀರಮಣ

ಜಗದಾದಿ ಮೂಲಗುರು ಅಗುರು ಶ್ರೀ ಹಂಸ

ವಾಗೀಶ ಸನಕಾದಿ ದೂರ್ವಾಸಾದಿಗಳ

ಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1

ಅಚ್ಯುತ ಪ್ರೇಕ್ಷಾಖ್ಯ ಪುರುಷೋತ್ತಮತೀರ್ಥ

ಅಚ್ಯುತ ಪ್ರೇಕ್ಷರ ಶಿಷ್ಯರೆಂದೆನಿಪ

ಅಚ್ಯುತನ ಮುಖ್ಯಾಧಿಷ್ಠಾನ ಶ್ರೀಮಧ್ವ

ಖಚರೇಂದ್ರ ಫಣಿಪಮೃಡ ಅಮರೇಂದ್ರವಂದ್ಯ 2

ಶ್ರೀ ಮಧ್ವ ಆನಂದತೀರ್ಥ ಕರ ಅಬ್ಜಜರು

ಪದ್ಮನಾಭನೃಹರಿ ಮಾಧವಾಕ್ಷೋಭ್ಯ

ಈ ಮಹಾಗುರುಗಳು ಸರ್ವರಿಗು ಆನಮಿಪೆ

ಸುಮನಸ ಶ್ರೇಷ್ಠರು ಮಹಿಯಲಿ ಪುಟ್ಟಿಹರು 3

ಸಾಧು ವೈದಿಕ ವೇದಾಂತ ಸತ್ತತ್ವ ಮತ

ಮಧ್ವ ಮತವೇ ಅನ್ಯ ಯಾವುವೂ ಅಲ್ಲ

ಎಂದು ನಿಶ್ಚೈಸಿ ಶೋಭನಭಟ್ಟಸ್ವಾಮಿ

ಶಾಸ್ತ್ರಿ ಮೊದಲಾದವರು ಮಧ್ವಗೆರಗಿದರು 4

ಸೂರಿವರ ಶೋಭನ ಭಟ್ಟಾದಿಗಳಂತೆ

ಸಾರಾಸಾರ ವಿವೇಕಿ ಗೋವಿಂದ

ಶಾಸ್ತ್ರಿಯು ಮಹಾ ದೊಡ್ಡ ಪಂಡಿತರು ತಾನೂ

ಎರಗಿ ಶರಣಾದರು ಮಧ್ವರಾಯರಲಿ 5

ಇಂಥಾ ಮಹಾತ್ಮರ ಇನ್ನೂ ಬಹು ಸಜ್ಜರನ

ಉದ್ಧರಿಸಲಿಕ್ಕೇವೆ ಹರಿ ಅಜ್ಞೆಯಿಂದ

ಈ ಧರೆಯಲ್ಲಿ ತೋರಿಹ ಮಧ್ವರಾಯರ

ಶಾಸ್ತ್ರಿ ಬೇಡಿದರು ಸಂನ್ಯಾಸ ಕೊಡು ಎಂದು 6

ಸಚ್ಚಾಸ್ತ್ರ ಪ್ರವಚನ ಪಟು ವಿದ್ವನ್ಮಣಿಯು

ನಿಶ್ಚಲ ಭಕ್ತಿಮಾನ್ ಸವೈರಾಗ್ಯ ವಿಪ್ರ

ಅಚಲ ಸತ್ತತ್ವನಿಶ್ಚಯ e್ಞÁನಿ ಶಾಸ್ತ್ರಿಗೆ

ಅಕ್ಷೋಭ್ಯ ನಾಮನ ಇತ್ತರಾಚಾರ್ಯ 7

ಪ್ರಣವ ಮೂಲಾದಿ ಸುಮಂತ್ರ ಉಪದೇಶಿಸಿ

ತನ್ನ ಮಠದಲ್ಲಿ ಅಕ್ಷೋಭ್ಯತೀರ್ಥರಿಗೆ

ವನರುಹನಾಭರಿಂದ ನಾಲ್ಕನೇ ಸ್ಥಾನವ

ಘನದಯದಿ ಇತ್ತರು ಆನಂದಮುನಿಯು 8

ಬದರಿಗೆ ಮೂರನೇ ಬಾರಿ ತೆರಳುವ ಪೂರ್ವ

ಮಧ್ವ ಮುನಿ ನೇಮಿಸಿದ ಕ್ರಮದಿಂದಲೇವೆ

ಪದ್ಮನಾಭ ನರಹರಿ ಮಾಧವ ತೀರ್ಥರು

ವೇದಾಂತ ಪೀಠದಲಿ ಕುಳಿತುಜ್ವಲಿಸಿದರು 9

ಪದ್ಮನಾಭತೀರ್ಥರ ಪಾದಪದ್ಮಗಳಿಗೆ

ಸದಾ ನಮೋ ನಮೋ ಎಂಬೆ ಇವರ ಪೀಳಿಗೆಯ

ವಿದ್ಯಾಕುಶಲರು ಸೂರಿಗಳ ಚರಣಕ್ಕೆ

ಸಂತೈಪರೆಮ್ಮ ಸದಾ ನಮೋ ಸರ್ವದಾ 10

ನರಹರಿತೀರ್ಥರು ಚರಣ ಸರಸೀರುಹದಿ

ಶರಣಾದೆ ಕಾಯ್ವರು ಈ ಮಹಾನ್ ಇಹರು

ವರಾಹ ತನಯಾ ಸರಿದ್ವರಾಕ್ಷೇತ್ರದಲಿ

ಶ್ರೀ ವೃಂದಾವನದೊಳು ಹರಿಯ ಧ್ಯಾನಿಸುತ 11

ಮಾಧವತೀರ್ಥರ ಪಾದಪದ್ಮಗಳಿಗೆ

ಸದಾನಮೋ ನಮೋ ಎಂಬೆ ಇವರ ಪೀಳಿಗೆಯ

ಯತಿಗಳೂ ಭಕ್ತಿಮಾನ್ e್ಞÁನಿಗಳ ಚರಣಕ್ಕೆ

ಆದರದಿ ನಮಿಸುವೆ ಸದಾ ಪೊರೆವರೆಮ್ಮ 12

ಸುಲಭರು ಸುಜನರಿಗೆ ಶರಣರ ಸಲಹುವರು

ಮಾಲೋಲನೊಲಿದಿಹ ಅಕ್ಷೋಭ್ಯತೀರ್ಥ

ಬಲು ಖಿನ್ನ ಬ್ರಾಹ್ಮಣನು ಬ್ರಹ್ಮ ಹತ್ಯ ಮಾಡಿದವ

ಕಾಲಲ್ಲಿ ಬಿದ್ದು ಶರಣಾದ ಗುರುಗಳಲಿ 13

ಗುರು ದಯಾನಿಧಿ ಅಕ್ಷೋಭ್ಯತೀರ್ಥರು ಆಗ

ಶರಣಾದ ಪುರುಷನ ಪಶ್ಚಾತ್ತಾಪ

ಖರೆಯೇ ಎಂಬುವುದನ್ನು ಜನರಿಗೆ ತಿಳಿಸಲು

ಏರಿ ಮರ ನದಿಯಲಿ ಬೀಳೆ ಹೇಳಿದರು 14

ತನ್ನಯ ಮಹಾಪಾಪ ಕಳೆಯುವ ಗುರುಗಳು

ಏನು ಹೇಳಿದರೂ ಮಾಡುವೆ ತಾನೆಂದು

ಸನ್ನಮಿಸಿ ಗುರುಗಳಿಗೆ ನದಿ ಬದಿ ಮರಹತ್ತೆ

ದೀನ ರಕ್ಷಕ ಗುರು ಇಳಿಯೆ ಹೇಳಿದರು 15

ವೃಕ್ಷದಿಂದಿಳಿದ ಆ ವಿಪ್ರಘಾತುಕನ ಮೇಲೆ

ಅಕ್ಷೋಭ್ಯತೀರ್ಥರು ಶಂಖತೀರ್ಥವನ್ನ

ಪ್ರೋಕ್ಷಿಸಿ ಆತನ ಮಹಾ ಬ್ರಹ್ಮಹತ್ಯಾ

ದೋಷ ಕಳೆದರು ಪಂಕ್ತಿಯಲಿ ಸೇರಿಸಿದರು 16

ಶಂಖತೀರ್ಥದ ಮಹಿಮೆ ಅಲ್ಲಿದ್ದ ಜನರಿಗೆ

ಶಂಕೆಯಲ್ಲದೆ ತಿಳಿಸಿ ಬಂದು ಬೇಡುವವರ

ಡೊಂಕು ಕೊರತೆಗಳೆಲ್ಲ ನೀಗಿಸಿ ಯೋಗ್ಯದಿ

ಶ್ರೀಕಾಂತನಲಿ ಭಕ್ತಿ ಪುಟ್ಟಿಸಿಹರು 17

ತಮ್ಮಲ್ಲಿ ಬೇಡುವ ಅಧಿಕಾರಿಯೋಗ್ಯರಿಗೆ

ಶ್ರೀಮಧ್ವಶಾಸ್ತ್ರದ ದಾಢ್ರ್ಯ e್ಞÁನ

ಶ್ರೀ ಮನೋಹರನನ್ನ ಅಪರೋಕ್ಷಿಕರಿಸುವ

ಸುಮಹಾ ಉಪಾಯವ ಅರುಹಿಹರು ದಯದಿ 18

ಮಧ್ವಸಿದ್ಧಾಂತ ಸ್ಥಾಪನ ಮಾತ್ರವಲ್ಲದೇ

ವೇದ ವಂಚಕ ದುರ್ಮತಗಳ ಖಂಡನವ

ಪೋದಕಡೆ ಮಾಡುತ್ತಾ ದಿಗ್ವಿಜಯ ಜಯಶೀಲ -

ರೆಂದು ಮರ್ಯಾದೆಗಳ ಕೊಂಡಿಹರು ಜಗದಿ 19

ಅದ್ವೈತವಾದಿಯು ಶಾಂಕರ ಮಠಾಧೀಶ

ವಿದ್ಯಾರಣ್ಯರು ಪ್ರಸಿದ್ಧ ಪಂಡಿತರು

ಎದುರು ನಿಂತರು ಅಕ್ಷೋಭ್ಯ ತೀರ್ಥರ ಮುಂದೆ

ವಾದಿಸಿದರು ಮುಳುಬಾಗಿಲು ಸಮೀಪ 20

ಶ್ವೇತಕೇತು ಉದ್ದಾಲಕರ ಸಂವಾದ

ತತ್ವ ಮಸಿ ವಾಕ್ಯವೇ ವಾದದ ವಿಷಯ

ವೇದಾಂತ ದೇಶಿಕರು ರಾಮಾನುಜೀಯತಿಯ

ಅಧ್ಯಕ್ಷತೆಯಲ್ಲಿ ಸಭೆಯು ಕೂಡಿತ್ತು 21

ಛಾಂದೋಗ್ಯ ಉಪನಿಷತ್ತಲ್ಲಿರುವ ವಾಕ್ಯವು

ಸಆತ್ಮಾ ತತ್ವಮಸಿ ಎಂಬುವಂಥಾದ್ದು

ಭೇದ ಬೋಧಕವೋ ಅಭೇದ ಬೋಧಕವೋ

ಎಂದು ವಾದವು ಆ ಈರ್ವರಲ್ಲಿ 22

ಆತ್ಮ ಶಬ್ದಿತ ನಿಯಾಮಕಗು ನಿಯಮ್ಯ ಜೀವನಿಗೂ

ಭೇದವೇ ಬೋಧಿಸುವುದು ಆ ವಾಕ್ಯವೆಂದು

ಸಿದ್ಧಾಂತ ಬಹುರೀತಿ ಸ್ಥಾಪಿಸಿದರು ಅಕ್ಷೋಭ್ಯರು

ಸೋತಿತು ವಿದ್ಯಾರಣ್ಯರ ಐಕ್ಯವಾದ 23

ಅಸಿನಾತತ್ವ ಮಸಿನಾ ಪರಜೀವಪ್ರಭೇದಿನಾ

ವಿದ್ಯಾರಣ್ಯ ಮಹಾರಣ್ಯಂ ಅಕ್ಷೋಭ್ಯ ಮುನಿರಚ್ಛಿನತ್

ಎಂದು ಬರೆದರು ತಮ್ಮಯ ಗ್ರಂಥದಲ್ಲಿ

ಮಧ್ಯಸ್ತ ವೇದಾಂತದೇಶಿಕ ಸ್ವಾಮಿಗಳು 24

ಇಳೆಯ ಸಜ್ಜನರಿಗೆ ಜಯತೀರ್ಥರನಿತ್ತ

ಮಾಲೋಲಪ್ರಿಯ ಅಕ್ಷೋಭ್ಯರ ಮಹಿಮೆ

ಅಲ್ಪಮತಿ ನಾನರಿಯೆ ಇಲ್ಲಿ ಒಂದೋ ಎರಡೋ

ಸ್ಥಾಲಿ ಪುಲೀಕ ನ್ಯಾಯದಲಿ ಪೇಳಿಹುದು 25

ನದಿ ದಡದಿ ಕುಳಿತಿದ್ದ ಅಕ್ಷೋಭ್ಯತೀರ್ಥರು

ಎದುರಾಗಿ ನದಿಯಲ್ಲಿ ಆಚೆ ದಡದಿಂದ

ಕುದುರೆ ಸವಾರನು ವರ್ಚಸ್ವಿ ಯುವಕನು

ಬೆದರದೆ ಪ್ರವಾಹದಲಿ ಬರುವುದು ಕಂಡರು 26

ಕುದುರೆ ಮೇಲ್ ಆಸೀನನಾಗಿದ್ದ ಯುವಕನು

ಕ್ಷುತ್‍ತೃಷಿ ಶಮನಕ್ಕೆ ಯತ್ನ ಮಾಡುತ್ತಾ

ಉದಕವ ಕೈಯಿಂದ ತುಂಬಿಕೊಳ್ಳದಲೇ

ಎತ್ತುಗಳು ಕುಡಿವಂತೆ ಬಾಯಿ ಹಚ್ಚಿದನು 27

ಮಾಧವ ಮಧ್ವರು ಮೊದಲೇ ಸೂಚಿಸಿದಂತೆ

ಇಂದು ಆ ಕುರುಹರಿತು ಅಕ್ಷೋಭ್ಯರು

ಇದು ಏನು ಪಶುವಂತೆ ಎಂದು ಧ್ವನಿಗೂಡಲು

ಹಿಂದಿನ ಜನ್ಮ ಯುವಕಗೆ ನೆನಪು ಬಂತು 28

ಪಶು ಶಬ್ದ ಗುರುಮುಖದಿಂಬಂದಲಾಕ್ಷಣ ಪೂರ್ವ

ಸಂಸ್ಕಾರ ಪ್ರತಿಭೆಯು ಉದಯವಾಯ್ತು

ದಶಪ್ರಮತಿಗಳ ತಾನು ಎತ್ತಾಗಿ ಸೇವಿಸಿದ್ದು

ಹಸನಾಗಿ ಟೀಕೆ ಬರೆಯಲಾಜÉ್ಞ ಕೊಂಡದ್ದು 29

ನಗಾರಿಸಮ ಬಲಿಯುವಕನು ಪ್ರವಾಹದ

ವೇಗ ಲೆಕ್ಕಿಸದಲೇ ದಡಕೆ ತಾ ಬಂದು

ಮುಗಿದುಕರ ಬಾಗಿಶಿರ ನಮಿಸಿ ಅಕ್ಷೋಭ್ಯರ

ಆಗಲೇ ಸಂನ್ಯಾಸ ಕೊಡಲು ಬೇಡಿದನು 30

ಗಾಧಿ ಅರ್ಜುನ ಸಮ ಬಲರೂಪದಲಿ ತೋರ್ಪ

ಈತ ರಾಯರ ಸುತನಾದರೂ ವೈರಾಗ್ಯ

ಯುತ ಭಕ್ತಿಮಾನ್ ಸುಶುಭಲಕ್ಷಣನು ಎಂದು ಹರಿ

ಮಧ್ವನಿಯಮಿತ ಅವಗೆ ಕೊಟ್ಟರು ಸಂನ್ಯಾಸ 31

ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವ

ದಯಾಶೀಲ ಹೊಸಯತಿಗೆ ಇತ್ತು ಅಭಿಷೇಕ

ಅಕ್ಷೋಭ್ಯ ಗುರುಮಾಡೆ ಗಗನದಿಂ ಪೂವರ್ಷ

ಜಯ ಘೊಷ ಹರಡಿತು ಪರಿಮಳ ಸುಗಂಧ 32

ಶ್ರೀಮಧ್ವಾಚಾರ್ಯರು ಬೋಧಿಸಿ ತೋರಿಸಿದ

ರಮಾಪತಿ ಪೂಜಾಸತ್ತತ್ವವಾದ

ದುರ್ಮತ ಖಂಡನದ ರೀತಿಯ ಜಯಾರ್ಯರಿಗೆ

ಸುಮ್ಮುದದಿ ಅರುಹಿದರು ಗುರುಸಾರ್ವಭೌಮ 33

ಶೀಲತಮ ಗುರುವರ್ಯ ಅಕ್ಷೋಭ್ಯತೀರ್ಥರು

ಇಳೆಯಲ್ಲಿ ಮಧ್ವಮತ ಹರಿಭಕ್ತಿಯನ್ನ

ಬೆಳೆಸಲು ಪ್ರತ್ಯೇಕ ಮಠವ ಸ್ಥಾಪಿಸಿದರು

ತ್ರೈಲೋಕ ಭೂಷಣ ತೀರ್ಥರ ಮೊದಲ್ಮಾಡಿ34

ಆದಿ ಮಠ ಹರಿನೈದು ಸಮೀಪ ಪಟ್ಟವ ಆಳಿ

ಹನ್ನೊಂದು ನೂರು ಅರವತ್ತೇಳ ಶಕವರುಷ

ವದ್ಯ ಪಂಚಮಿ ಮಾರ್ಗಶಿರ ವಿಶ್ವಾವಸುವಲ್ಲಿ

ಮಧ್ವ ಹೃದಯಾಬ್ಜಗನ ಪುರವ ಐದಿದರು 35

ಮತ್ತೊಂದು ಅಂಶದಲಿ ಮಳಖೇಡ ಗ್ರಾಮದಲಿ

ನದಿ ತೀರದಲಿ ಹರಿಯ ಧ್ಯಾನ ಮಾಡುತ್ತಾ

ಬಂದು ಬೇಡುವವರಿಷ್ಟಾರ್ಥ ಪೂರೈಸುತ

ವೃಂದಾವನದಲ್ಲಿ ಕುಳಿತಿಹರು ಕರುಣಿ 36

ಶಾಶ್ವತ ಸರ್ವಾಶ್ರಯ ಗುಣಗಣಾರ್ಣವ ಅನಘ

ಜೀವ ಜಡ ಭಿನ್ನ ಪರಮಾತ್ಮ ವಿಧಿತಾತ

ಮಧ್ವಹೃತ್ಪದ್ಮಗ ಶ್ರೀ ಪ್ರಸನ್ನ ಶ್ರೀನಿವಾಸಗೆ

ಸರ್ವದಾಪ್ರಿಯ ಅಕ್ಷೋಭ್ಯ ಗುರೋ ಶರಣು 37 ಪ

|| ಶ್ರೀ ಅಕ್ಷೋಭ್ಯ ತೀರ್ಥಚರಿತೆ ಸಂಪೂರ್ಣಂ ||

***