Showing posts with label ಅಭಿನವ ಜನಾರ್ದನ ವಿಠಲ ಯೆನ್ನ janardhana vittala abhinava janardhana vittala stutih. Show all posts
Showing posts with label ಅಭಿನವ ಜನಾರ್ದನ ವಿಠಲ ಯೆನ್ನ janardhana vittala abhinava janardhana vittala stutih. Show all posts

Saturday 1 May 2021

ಅಭಿನವ ಜನಾರ್ದನ ವಿಠಲ ಯೆನ್ನ ankita janardhana vittala abhinava janardhana vittala stutih

ಶ್ರೀ ಗುರುಗೋಪಾಲದಾಸರ ಶಿಷ್ಯರಾದ ಶ್ರೀ ಜನಾರ್ದನವಿಠಲರು ಶ್ರೀ ಪ್ರೇಮದಾಸರಿಗೆ " ಹೇವಳ೦ಬಿ ನಾಮ ಸಂವತ್ಸರ ವೈಶಾಖ ಶುದ್ಧ ದ್ವಿತೀಯ ಶುಕ್ರವಾರದಂದು " ಅಭಿನವ ಜನಾರ್ದನ ವಿಠಲ " ಎಂಬ ಅಂಕಿತದೊಂದಿಗೆ ದಾಸ ದೀಕ್ಷೆ ಕೊಟ್ಟರು. ಆ ಅಂಕಿತ ಪದ ಹೀಗಿದೆ...

ರಾಗ : ಕಾಂಬೋಧಿ     ತಾಳ : ಝ೦ಪೆ


ಅಭಿನವ ಜನಾರ್ದನ ವಿಠಲ ಯೆನ್ನ ।

ಗಭೀರ ವಚನವ ಲಾಲಿಸೈಯ್ಯಾ ಗಮನಕದಿ ವೇಗ ।। ಪಲ್ಲವಿ ।।


ಒಡಿಯ ನೀನಹುದೆಂದು ಅಡಿಗಡಿಗೆ ಚರಣಗಳ ।

ಬಿಡದೆ ನಂಬಿಕೊಂಡು ಪೊಡವಿಯೊಳಗೆ ।

ನಡತಿವಂತರ ಕೂಡ ಬಿಡದೆ ಆಡುವ ನರಗ ।

ಪಡಿನಾಮ ಅಮೃತವನೇ ಪಾಲಿಸಿ ರಕ್ಷಿಪುದು ।। ಚರಣ ।।


ಅಪರಾಧವೆಣಿಸದಲೇ ಅಪವರ್ಗದಾ ಜನರ ।

ನಿಪುಣರನ ಮಾಡುವಾ ನೀತಿವಂತಾ ।

ಕಪಟ ಕುಚೇಷ್ಟಗಳ ಪ್ರಕಟ ಬಾಹ್ಯಾಂತರದಿ ।

ವಪುವಿಲಿದ್ದದು ಕಳೆದು ಉಪಜೀವ್ಯ ನೀನಾಗಿ ।। ಚರಣ ।।

ಶ್ರೀ ಗುರು ಗೋಪಾಲ ದಾಸರಾಯರ ಪಾದ ।

ಜಾಗುರೂಕದಿ೦ದ ಭಜಿಸಿ ಜಗದಿ ।

ಯೋಗನೆಸಗಲಿ ಮನಕೆ ಯೋಗೀಶ ಭಕ್ತಿಯಲಿ ।

ಭಾಗೀರಥಿ ಪಿತ ಜನಾರ್ದನವಿಠಲೈಯ್ಯಾ ।। ಚರಣ ।।

*****