Showing posts with label ಆರೂ ಸಂಗಡ ಬಾಹೋರಿಲ್ಲ ನಾರಾಯಣ ನಾಮ ನೆರೆ ಬಾಹೋದಲ್ಲದೆ neleyadikeshava AARU SANGADA BAAHORILLA NARAYANA NAAMA NERE. Show all posts
Showing posts with label ಆರೂ ಸಂಗಡ ಬಾಹೋರಿಲ್ಲ ನಾರಾಯಣ ನಾಮ ನೆರೆ ಬಾಹೋದಲ್ಲದೆ neleyadikeshava AARU SANGADA BAAHORILLA NARAYANA NAAMA NERE. Show all posts

Thursday 16 December 2021

ಆರೂ ಸಂಗಡ ಬಾಹೋರಿಲ್ಲ ನಾರಾಯಣ ನಾಮ ನೆರೆ ankita neleyadikeshava AARU SANGADA BAAHORILLA NARAYANA NAAMA NERE


ಆರೂ ಸಂಗಡ ಬಾಹೋರಿಲ್ಲ ಪ


ನಾರಾಯಣ ನಾಮ ನೆರೆ ಬಾಹೋದಲ್ಲದೆ ಅ


ಹೊತ್ತು ನವಮಾಸ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ 1


ಗುರು ಬಂಧು ಬುಧ ಜನರು ನಿಂತಗ್ನಿ ಸಾಕ್ಷ್ಯಾಗಿಕರವಿಡಿದು ಧಾರೆಯನೆರೆಸಿಕೊಂಡತರುಣಿ ಇನಿಯನ ಹರಣ ಹೋಗಲು ತಾ ಕಂಡುಬರುವುದಕಂಜಿ ದಾರು ಗತಿಯೆಂದಳುವಳು2


ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು 3


ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು 4


ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿಪರಗತಿಗೆ ಸಾಧನವ ಮಾಡಿಕೊಳ್ಳೊಕರುಣನಿಧಿ ಕಾಗಿನೆಲೆಯಾದಿಕೇಶವರಾಯನನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ5


* ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.

***