Showing posts with label ಆವ ಜನುಮ ಸಖನೇ ನಮ್ಮಯ್ಯಾ gurumahipati. Show all posts
Showing posts with label ಆವ ಜನುಮ ಸಖನೇ ನಮ್ಮಯ್ಯಾ gurumahipati. Show all posts

Wednesday 1 September 2021

ಆವ ಜನುಮ ಸಖನೇ ನಮ್ಮಯ್ಯಾ ankita gurumahipati

ಕೃತಿ ಕಾಖಂಡಕಿ ಕೃಷ್ಣದಾಸರು 

kruti by ಕಾಖಂಡಕಿ ಶ್ರೀ ಮಹಿಪತಿರಾಯರು?


ಆವ ಜನುಮ ಸಖನೇ ನಮ್ಮಯ್ಯಾ ಪ 

ಅವಿದ್ಯ ಬಲಿಯೊಳು ಸಿಲುಕಿ ಬಳಲುವನ | ಸುವಿದ್ಯ ನೋಟದ ಕರುಣವ ಬೀರಿದನಾ1 
ಏನರಿಯದಲಿರೆ ವಿಷಯ ಮದಾಂಧದಿ | ಜ್ಞಾನಾಂಜನವ ಮಾಡಿ ಕಂಗಳದೆರಿಸಿದನಾ 2 
ಹೃದಯ ಭೂಮಿಗೆ ಹರಿ ನಾಮಬೀಜವ ಬಿತ್ತಿ | ಸದಮಲ ಭಕುತಿಯ ಬೆಳೆಗಳ ನುಣಿಸಿದನಾ 3 
ಕೇಳದ ನುಡಿಗಳ ಹೇಳುತ ಕಿವಿಯೊಳು | ಕಾಲ ಕಾಲಕ ಎನ್ನ ಹಿತವನೆ ಯೋಜಿಪನಾ4
 ತಂದೆ ಮಹಿಪತಿ ಕಂದನೆನಿಸಿತ್ತ ನಾ | ಪರ ಭಾಗ್ಯವ ನೀಡಿದನಾ5
****