Showing posts with label ಇಂದರೆ ರಮಣಾ ಇಟ್ಟಾಂಗಿರಬೇಕು ಒಮ್ಮಿಗೆ ಕದಶನ gurumahipati. Show all posts
Showing posts with label ಇಂದರೆ ರಮಣಾ ಇಟ್ಟಾಂಗಿರಬೇಕು ಒಮ್ಮಿಗೆ ಕದಶನ gurumahipati. Show all posts

Wednesday 1 September 2021

ಇಂದರೆ ರಮಣಾ ಇಟ್ಟಾಂಗಿರಬೇಕು ಒಮ್ಮಿಗೆ ಕದಶನ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಇಂದರೆ ರಮಣಾ ಇಟ್ಟಾಂಗಿರಬೇಕು ಪ 

ಒಮ್ಮಿಗೆ ಕದಶನ ಶಾಖಾ ಆಹಾರವ ನೀಡುವನು ಒಮ್ಮಿಗೆ ಷೆಡ್ರಸದ್ದನ್ನವ ಸಾರುಣಿಸುವನು 1 
ಒಮ್ಮಿಗೆ ಜೀರ್ಣ ಕಂಥಾಧಾರಿಯೆನಿಸುವನು| ಒಮ್ಮಿಗೆ ದಿವ್ಯಾಂಬರಗಳ ನುಡಿಸಿ ನೋಡುವನು 2 
ಒಮ್ಮಿಗೆ ಧರಿಯಲಿ ತೋಳತಲೆದಿಂಬದಲಿಡುವಾ| ಒಮ್ಮಿಗೆ ಪರ್ಯಾಂಕಾಸನ ಸಂಪದ ಕೊಡುವಾ 3 
ಒಮ್ಮಿಗೆ ಕವಡಿ ಲಾಭಕ ಕೃತ-ಕೃತ್ಯೆಯೆನಿಸುವನು ತಂದೆ ಮಹಿಪತಿ-ಕಂದಗ ಸಾರಿದ ನಿಜ ಖೂನಾ 4 
ತಂದೆ ಮಹೀಪತಿ-ಕಂದಗ ಸಾರಿದ ನಿಜ ಖೂನಾ| ದ್ವಂದ್ವ ಗೆಲಿದು ಸ್ವಾನಂದದಲಿರುವವನೇ ಜಾಣಾ 5
***