Showing posts with label ಇಂದಿರಾರಮಣ ಆನಂದಮೂರುತಿ ನಿನ್ನ namagiri. Show all posts
Showing posts with label ಇಂದಿರಾರಮಣ ಆನಂದಮೂರುತಿ ನಿನ್ನ namagiri. Show all posts

Thursday 5 August 2021

ಇಂದಿರಾರಮಣ ಆನಂದಮೂರುತಿ ನಿನ್ನ ankita namagiri

..

kruti by ವಿದ್ಯಾರತ್ನಾಕರತೀರ್ಥರು vidyaratnakara teertharu 


ಇಂದಿರಾರಮಣ ಆನಂದಮೂರುತಿ ನಿನ್ನ

ವಂದಿಸಿ ಕರಗಳ ಬಂಧಿಸಿ ಬೇಡುವೆ ಪ


ಎಂದಿಗೂ ಎನ್ನ ಹೃದಯಮಂದಿರ ಬಿಡದಿರೊ

ನಂದಮುನ್ನೀಶ್ವರ ವಂದಿತ ಚರಣನೆ ಅ.ಪ


ಕೃತಿರಮಣನೇ ಮುನಿಸತಿಯು ಶಾಪದಿ ಶಿಲಾ

ಕೃತಿಯಾಗಿರಲು ಶ್ರೀಪತಿಯೇ ನೀ ಬಂದು

ರತಿಪತಿಪಿತನೆ ಯುವತಿಯನ್ನೆ ಮಾಡಿದ

ಪತಿತಪಾವನ ನೀನಲ್ಲವೇನೊ ಹರಿಯೆ 1


ನಾಕರಾಜನ ಸುತನು ಕಾಕರೂಪದಿ ಬಂದು

ಏಕಾಂತದೊಳು ಅವಿವೇಕವ ಮಾಡಲು

ಶ್ರೀಕಾಂತ ತೃಣದಿಂದ ಭೀಕರಿಸಿ ಮೂರು

ಲೋಕ ಸುತ್ತಿಸಿ ಅವನ ನೀ ಕಾಡಿದೆ ಹರಿಯೆ 2


ಮತ್ತು ಗಜೇಂದ್ರನಾಪತ್ತು ಪರಿಹರಿಸಿ

ಉತ್ತಮ ಪದವವಗಿತ್ತು ರಕ್ಷಿಸಿದೆ

ಭಕ್ತವತ್ಸಲ ಎನ್ನ ಕುತ್ತುಗಳನು ನೀ

ಚಿತ್ತಕೆ ತರದೇ ಸದ್ವøತ್ತನೆಂದೆನಿಸೈ 3

ನೇತ್ರವೆಂಬುದು ನಾರಿಗಾತ್ರದೊಳಿರುವುದು

ಶ್ರೋತ್ರವು ಗೀತವ್ರಾತದೊಳಿಹುದು

ಚಿತ್ತ ವಿಷಯ ಭೋಗಾಸಕ್ತವು ಗೋಪಿಕಾ

ಮಿತ್ರನೇ ಅಂಜಲಿಮಾತ್ರ ನೀನೊಪ್ಪಿಕೋ 4


ವರನಾಮಗಿರಿಲಕ್ಷ್ಮೀನರಸಿಂಹ ಮೂರುತೆ

ಚರಣಕಮಲಯುಗ ಸ್ಮರಣೆಯ ಎನಗೆ

ಸ್ಥಿರವಾಗಿರುವಂತೆ ವರವಿತ್ತು ಸಲಹೆಲೊ

ಪರಮಪುರುಷ ದಿನಕರಕುಲತಿಲಕನೆ 5

***