Showing posts with label ಇಂದಿರೇಶನ ಪದದ್ವಂದ್ವಕಮಲ ಭಜಿಪ gopalakrishna vittala. Show all posts
Showing posts with label ಇಂದಿರೇಶನ ಪದದ್ವಂದ್ವಕಮಲ ಭಜಿಪ gopalakrishna vittala. Show all posts

Sunday 1 August 2021

ಇಂದಿರೇಶನ ಪದದ್ವಂದ್ವಕಮಲ ಭಜಿಪ ankita gopalakrishna vittala

ಇಂದಿರೇಶನ ಪದದ್ವಂದ್ವಕಮಲ ಭಜಿಪ

ಶ್ರೀ ಗುರುವರ ಭೂಪ ಪ.


ಬಂದೆನು ನಿಮ್ಮ ಪದ ಸಂದರುಶನಕೀಗ

ನೀಗಿರಿ ಭವರೋಗ ಅ.ಪ.


ಬಂದವರಯೋಗ್ಯತೆ ಅರಿತಂಕಿತವೀವ | ಕರುಣಾಳುವೆ ದೇವ

ನೊಂದೆನೀಗ ಈ ಅಜ್ಞಭವದಿ ಬಿದ್ದು | ಎಂದಿಗೆ ನಾ ಗೆದ್ದು

ಇಂದಿರೇಶನ ಹೃತ್ಕಮಲದಲಿ ಕಾಂಬೆ | ಗುರುವೆ ತೋರೆಂಬೆ

ಬಂದ ಬಂದ ಕಷ್ಟ ಹಿಂದು ಮಾಡಿ ಪೊರೆದು |

ಕೃಪೆಗೈಯ್ಯಲಿ ಬೇಕಿಂದು 1


ಮುಖ ಕಮಲದಿ ಹೊರಡುವ ವಾಕ್ಸರಣಿಗಳು |

ಗಂಗಾ ಪ್ರವಾಹಂಗಳು

ಅಕಳಂಕದ ತತ್ವಾರ್ಥದಿ ನಾ ಮುಳುಗಿ | ದುರಿತದ ಭವನೀಗಿ

ಸುಖ ಸಾರೂಪ್ಯದ ಮುಕುತಿ ಮಾರ್ಗ ಕಂಡೆ |

ಇನ್ನೀ ಭವ ತುಂಡೆ

ಭಕುತಿ ಭಾಗ್ಯವ ನಿತ್ಯದಿ ಕರುಣಿಪುದು | ಸುe್ಞÁನವ ನೀಡುವುದು 2

ಇಳೆಯೊಳಿಲ್ಲ ಈ ಚರ್ಯೆ ತೋರುವವರು | ಉದ್ಧರಿಪರಿನ್ಯಾರು

ಒಳಹೊರಗೊಂದಾಗುವ ಪರಿ ಕರುಣಿಪುದು | ನ್ಯಾಯವೆ ನೂಕುವುದು

ಪೊಳಲೊಡೆಯನ ಪರಿಪರಿ ಮಹಿಮಾದಿಗಳ | ರೂಪ ಜಾಲಗಳ

ತಿಳಿದಾನಂದಪಡುವ ಗುರುವರೇಣ್ಯ | ಪೊರೆಯ ಬೇಕೀಗೆನ್ನ 3

ಕರಿಗಿರಿ ನರಹರಿ ಪದಕಮಲಗಳನ್ನು | ಹೃದ್ವನಜದೊಳಿನ್ನು

ಪರಿಪರಿ ಪೂಜಿಸಿ ಪರಮಾದರದಲ್ಲಿ | ಸಂಕರ್ಷಣನಲ್ಲಿ

ಇರಿಸಿಹ ಮನವನು ನರರಿಗೆ ತೋರದಲೆ | ಚರಿಸುವ ಈ ಲೀಲೆ

ಅರಿತು ಪೇಳೆ ಈ ಪಾಮರಳಿಗೆ ಅಳವೇ | ಆನಂದದಲಿರುವೆ 4

ತಂದೆ ಮುದ್ದು ಮೋಹನವಿಠಲ ದೇವ | ಹೃದ್ವನಜದಲಿ ಕಾವ

ಸುಂದರ ಗೋಪಾಲಕೃಷ್ಣವಿಠ್ಠಲ ನಿಮ್ಮೊಳು |

ರಮಿಸುವ ನಿತ್ಯದೊಳು

ಮಂದಬುದ್ಧಿಗೆ ಇಂತು ಮತಿಯನಿತ್ತು | ಸಲಹಲಿ ಬೇಕಿಂತು

ತಂದೆ ಧರೆಯೊಳು ಮತ್ತೊಬ್ಬರ ಕಾಣೆ | ಕಾಪಾಡಬೇಕೆನ್ನಾಣೆ 5

***