Showing posts with label ಇಂದು ನೀ ಕರೆದು ತಾರೆ neleyadikeshava ಮುಂಡಿಗೆ mundige. Show all posts
Showing posts with label ಇಂದು ನೀ ಕರೆದು ತಾರೆ neleyadikeshava ಮುಂಡಿಗೆ mundige. Show all posts

Wednesday 1 September 2021

ಇಂದು ನೀ ಕರೆದು ತಾರೆ ankita neleyadikeshava ಮುಂಡಿಗೆ mundige

 ..

ಪೌರಾಣಿಕ ವಾವೆವರಸೆಯ ಮುಂಡಿಗೆ


ಇಂದು ನೀ ಕರೆದು ತಾರೆ - ಬಾರದೆ ಶ್ರೀಗೋ-ವಿಂದ ತಾ ಮುನಿದಿಹರೆ - ವಿರಹ ಬೇಗೆಯಲಿಬೆಂದು ಸೈರಿಸಲಾರೆ - ಸಖಿ, ನೀನು ತಂದು ತೋರೆ ಪ


ನೊಂದರೂ ಮನದಾನಂದದಿಂದನಂದನಂದನನೆಂದು ಸೈರಿಸಿಎಂದಿಗೂ ಅಗಲಿರಲಾರೆ ಕರೆತಂದುಹೊಂದುಗೂಡಿಸೆ ಮಂದಗಮನೆ ಅ


ಕಾಲಿಲ್ಲದಲೆ ಆಡಿದ - ವೇದ ತಂದಿತ್ತಕಾಲಿಲ್ಲದವನ ಪೊತ್ತ - ಅಮೃತ ತಂದಿತ್ತಕಾಲ ತೂಗಿ ನೋಡುತ್ತ - ಗಜ ಉನ್ಮತ್ತಕಾಲಿನಿಂದಲಿ ಕೊಲುವ ರೂಪದಿಕಾಲಿನಲಿ ರಿಪುವನು ಸೀಳಿದಕಾಲಿನಲಿ ತಾನಳೆದ ಮೇದಿನಿಕಾಲಿನಲಿ ನಡೆದ ಭಾರ್ಗವಕಾಲಿನಲಿ ವನವಾಸ ಪೋದನಕಾಲಿನಲಿ ಕಾಳಿಯನ ಮರ್ದಿಸಿದನಕಾಲಿನಲಿ ತ್ರಿಪುರರ ಗೆಲಿದನಕಾಲಿಗೆರಗುವೆ ತೇಜಿರೂಢನ 1


ಎವೆಯಿಕ್ಕದೆ ನೋಡಿದ - ತಲೆಯ ತಗ್ಗಿಸಿಕವಲು ಕೋರೆದಾಡೆಯೊಳಾಡಿದ - ಕಂಬದಿ ಮೂಡಿದತವಕದಿಂದಲಿ ಬೇಡಿದ - ಭೂಭುಜರ ಕಡಿದಶಿವನ ಬಿಲ್ಲನು ಮುರಿದ _ ದೇವಕಿಕುವರ ನಗ್ನ ಹಯವನೇರಿದವಿವಿಧಾಬ್ಧಿಯೊಳಾಡಿ ಗಿರಿಧರಸವಿದು ಬೇರನು ಬಾಲಗೊಲಿದನಅವನಿ ಬೇಡಿ ಕೊಡಲಿ ಪಿಡಿದನಸವರಿ ದಶಶಿರನ ಬೆಣ್ಣೆ ಕದ್ದನಯುವತಿಯರ ವ್ರತಗೆಡಿಸಿ ಕುದುರೆಯ ಹವಣುಗತಿಯಲಿ ಏರಿದಾತನ2


ವರ ಮತ್ಸ್ಯ ನಗಧರನ - ಸೂಕರ ಸಿಂಹನತಿರುಕ ತಾಯ್ತರಿದನ - ವರವಿತ್ತು ಶಬರಿಗೆತುರುಗಾಯ್ದ ನಿರ್ವಾಣನ - ಅಶ್ವಾರೂಢನಊರಿಲ್ಲದೆ ಹೊರೆ ಹೊತ್ತನ ಮುರುಢ ಕ್ರೂರನಉರವ ಸೀಳಿದ ವಿಪ್ರ ನೃಪರರಿಧರಣಿಜೆಯ ವರ ಕೃಷ್ಣ ಗಗನದಿಪುರವ ದಹಿಸಿದ ತೇಜಿರೂಢನಮೆರೆವ ಜಲಜ ಕೂರ್ಮ ವರಹನರಹರಿ ದ್ವಿಜ ಕೊರಳ ಕೊಯ್ದವನ ನೆಲಮಗಳ ವರಶೌರಿ ಬುದ್ಧನ ತುರಗವೇರಿದ ಆದಿಕೇಶವನ3

***