Showing posts with label ಇತ್ತೆ ಏತಕ್ಕೆ ಈ ನರಜನ್ಮವ ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ gopalakrishna vittala. Show all posts
Showing posts with label ಇತ್ತೆ ಏತಕ್ಕೆ ಈ ನರಜನ್ಮವ ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ gopalakrishna vittala. Show all posts

Sunday 1 August 2021

ಇತ್ತೆ ಏತಕ್ಕೆ ಈ ನರಜನ್ಮವ ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ ankita gopalakrishna vittala

ಇತ್ತೆ ಏತಕ್ಕೆ ಈ ನರಜನ್ಮವ

ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ ಪ.


ಬಂಧುಬಳಗವ ಕಾಣೆ ಇಂದಿರೇಶನೆ ಭವದಿ

ಬೆಂದು ನೊಂದೆನೊ ನಾನು ಸಿಂಧುಶಯನ

ಬಂದ ಭಯಗಳ ಬಿಡಿಸಿ ನೀನೆ ಪಾಲಿಸದಿರಲು

ಮಂದಮತಿಗೆ ಇನ್ನು ಮುಂದೆ ಗತಿ ಏನೊ 1

ಕಾಣದಲೆ ನಿನ್ನನು ಕಾತರಿಸುತಿದೆ ಮನವು

ತ್ರಾಣಗೆಡÀುತಲಿ ಇಹುದೊ ಇಂದ್ರಿಯಗಳೆಲ್ಲ

ಪ್ರಾಣಪದಕನೆ ಸ್ವಾಮಿ ಶ್ರೀನಿವಾಸನೆ ದೇವ

ಜಾಣತನವಿದು ಸರಿಯೆ ಫಣಿಶಾಯಿಶಯನ 2

ಸಾಧನದ ಬಗೆಯರಿಯೆ ಸರ್ವಾಂತರ್ಯಾಮಿಯೆ

ಮಾಧವನೆ ಕರುಣದಲಿ ಕಾಯಬೇಕೊ

ಹಾದಿ ತೋರದೊ ಮುಂದೆ ಮುಂದಿನಾ ಸ್ಥಿತಿಯರಿಯೆ

ಛೇದಿಸೊ ಅe್ಞÁನ ಹೇ ದಯಾನಿಧಿಯೆ 3

ಸರ್ವನಿಯಾಮಕನೆ ಸರ್ವಾಂತರ್ಯಾಮಿಯೆ

ಸರ್ವರನು ಪೊರೆಯುವನೆ ಸರ್ವರಾಧೀಶ

ಸರ್ವಕಾಲದಿ ಎನ್ನ ಹೃದಯದಲಿ ನೀ ತೋರೊ

ಸರ್ವ ಸಾಕ್ಷಿಯೆ ಸತತ ಆನಂದವೀಯೊ 4

ಆನಂದಗಿರಿನಿಲಯ ಆನಂದಕಂದನೆ

ಆನಂದ ಗೋಪಾಲಕೃಷ್ಣವಿಠ್ಠಲಾ

ಆನಂದನಿಲಯ ಶ್ರೀ ಗುರುಗಳಂತರ್ಯಾಮಿ

ನೀನಿಂದು ಸರ್ವತ್ರ ಕಾಯಬೇಕಯ್ಯ 5

***