Showing posts with label ಇಷ್ಟು ಪಾಪವನು ಮಾಡಿದುದೆ ಸಾಕೊ purandara vittala ISHTU PAAPAVANU MAADIDUDE SAKO. Show all posts
Showing posts with label ಇಷ್ಟು ಪಾಪವನು ಮಾಡಿದುದೆ ಸಾಕೊ purandara vittala ISHTU PAAPAVANU MAADIDUDE SAKO. Show all posts

Friday 3 December 2021

ಇಷ್ಟು ಪಾಪವನು ಮಾಡಿದುದೆ ಸಾಕೊ purandara vittala ISHTU PAAPAVANU MAADIDUDE SAKO



ಇಷ್ಟು ಪಾಪವ ಮಾಡಿದ್ದೆ ಸಾಕು ||ಪ|| (ಇಷ್ಟು ಪಾಪಗಳ ಮಾಡಿದ್ದೆ ಸಾಕು)

ಸೃಷ್ಟೀಶನೆ ಎನ್ನ ಉದ್ಧರಿಸಬೇಕು ||ಅ||

ಒಡಲ ಕಿಚ್ಚಿಗೆ ಪರರ ಕಡುನೋಯಿಸಿದೆ
ಕೊಡದೆ ಅನ್ಯರ ಋಣವನಪಹರಿಸಿದೆ
ಮಡದಿಯ ನುಡಿ ಕೇಳಿ ಒಡಹುಟ್ಟಿದವರೊಡನೆ
ಹಡೆದ ತಾಯಿಯ ಕೂಡೆ ಹಗೆ ಮಾಡಿದೆ ||

ಸ್ನಾನ ಸಂಧ್ಯಾದಿಗಳ ಮಾಡದಲೆ ಮೈಗೆಟ್ಟೆ
ಜ್ಞಾನಮಾರ್ಗವನಂತು ಮೊದಲೆ ಬಿಟ್ಟೆ
ಏನ ಹೇಳಲಿ ಪರರ ನಾರಿಗೆ ಮನಸಿಟ್ಟೆ
ಶ್ವಾನಸೂಕರನಂತೆ ಹೊರೆದೆ ಹೊಟ್ಟೆ ||

ವ್ರತನೇಮ ಉಪವಾಸ ಒಂದು ದಿನ ಮಾಡಲಿಲ್ಲ
ಅತಿಥಿಗಳಿಗನ್ನವನು ನೀಡಲಿಲ್ಲ
ಶ್ರುತಿಶಾಸ್ತ್ರ ಪುರಾಣ ಕಥೆಗಳನು ಕೇಳಲಿಲ್ಲ
ವೃಥವಾಗಿ ಬಹುಕಾಲ ಗತವಾಯಿತಲ್ಲ ||

ಶುದ್ಧವೈಷ್ಣವಕುಲದಲುದ್ಭವಿಸಿದೆ ನಾನು
ಮಧ್ವಮತಸಿದ್ಧಾಂತಪದ್ಧತಿಗಳ
ಬುದ್ಧಿಪೂರ್ವಕ ತಿಳಿದು ಕದ್ದುಂಡು ಕಾಯವನು
ವೃದ್ಧಿಮಾಡಿದೆನಯ್ಯ ಉದ್ಧರಿಸು ಹರಿಯೆ ||

ತಂದೆತಾಯಿಯ ಸೇವೆಯೊಂದು ದಿನ ಮಾಡಲಿಲ್ಲ
ಮಂದಭಾಗ್ಯಗೆ ಬವಣೆ ತಪ್ಪಲಿಲ್ಲ
ಹಿಂದೆ ಮಾಡಿದ ದೋಷ ಒಂದುಳಿಯದರುಹಿದೆನೊ
ತಂದೆ ಪುರಂದರವಿಠಲ ಬಂದೆನ್ನ ಸಲಹೊ ||
***

ರಾಗ ಕಾಂಭೋಜ ಝಂಪೆ ತಾಳ (raga tala may differ in audio)

pallavi

isTu pApava mADidde sAku

anupallavi

shrsTIshane ennanuddharisa bEku

caraNam 1

oDale kiccige parara kaDu nOyisida krSNa koDade anyara ruNavanapahariside
maDadiya nuDi kELi oDahuTTIdavaroDane haDede tAyiya kUDe hage mADide

caraNam 2

snAna sandhyAdigaLa mADadale mai geTTe jnAna mArgavanandu modale biTTe Ena
pErali parara mAninige manasiTTe svAna sukaranante horede hoTTe

caraNam 3

vrata nEma upavAsavondu dina mADilla atithigaLigannavanu nIDalilla
shruti sAstra paurALa kathegaLanu kELilla vrtavAgi bahu kAla gatavAyitalla

caraNam 4

shuddha vaiSNava kuladludbhavaside nAnu madhva mata siddhAnta paddhatigaLa
buddhi pUrvaka tiLidu kadduNDu kAyuvenu vrtti mADidenayya uddharisu hariye

caraNam 5

tande tAyiya sEveyondu dina mADilla manda bhAgyage bhavaNe tapphalilla
hinde mADida dOSa onduLiya daruhideno tande purandara viTTala bandenna salaho
***


ಪುರಂದರದಾಸರು
ರಾಗ ಕಾಂಭೋಜ ಝಂಪೆ ತಾಳ 

ಇಷ್ಟು ಪಾಪವ ಮಾಡಿದ್ದೆ ಸಾಕು ||ಪ||

ಸೃಷ್ಟೀಶನೆ ಎನ್ನ ಉದ್ಧರಿಸಬೇಕು ||ಅ||

ಒಡಲ ಕಿಚ್ಚಿಗೆ ಪರರ ಕಡುನೋಯಿಸಿದೆ
ಕೊಡದೆ ಅನ್ಯರ ಋಣವನಪಹರಿಸಿದೆ
ಮಡದಿಯ ನುಡಿ ಕೇಳಿ ಒಡಹುಟ್ಟಿದವರೊಡನೆ
ಹಡೆದ ತಾಯಿಯ ಕೂಡೆ ಹಗೆ ಮಾಡಿದೆ ||

ಸ್ನಾನ ಸಂಧ್ಯಾದಿಗಳ ಮಾಡದಲೆ ಮೈಗೆಟ್ಟೆ
ಜ್ಞಾನಮಾರ್ಗವನಂತು ಮೊದಲೆ ಬಿಟ್ಟೆ
ಏನ ಹೇಳಲಿ ಪರರ ನಾರಿಗೆ ಮನಸಿಟ್ಟೆ
ಶ್ವಾನಸೂಕರನಂತೆ ಹೊರೆದೆ ಹೊಟ್ಟೆ ||

ವ್ರತನೇಮ ಉಪವಾಸ ಒಂದು ದಿನ ಮಾಡಲಿಲ್ಲ
ಅತಿಥಿಗಳಿಗನ್ನವನು ನೀಡಲಿಲ್ಲ
ಶ್ರುತಿಶಾಸ್ತ್ರ ಪುರಾಣ ಕಥೆಗಳನು ಕೇಳಲಿಲ್ಲ
ವೃಥವಾಗಿ ಬಹುಕಾಲ ಗತವಾಯಿತಲ್ಲ ||

ಶುದ್ಧವೈಷ್ಣವಕುಲದಲುದ್ಭವಿಸಿದೆ ನಾನು
ಮಧ್ವಮತಸಿದ್ಧಾಂತಪದ್ಧತಿಗಳ
ಬುದ್ಧಿಪೂರ್ವಕ ತಿಳಿದು ಕದ್ದುಂಡು ಕಾಯವನು
ವೃದ್ಧಿಮಾಡಿದೆನಯ್ಯ ಉದ್ಧರಿಸು ಹರಿಯೆ ||

ತಂದೆತಾಯಿಯ ಸೇವೆಯೊಂದು ದಿನ ಮಾಡಲಿಲ್ಲ
ಮಂದಭಾಗ್ಯಗೆ ಬವಣೆ ತಪ್ಪಲಿಲ್ಲ
ಹಿಂದೆ ಮಾಡಿದ ದೋಷ ಒಂದುಳಿಯದರುಹಿದೆನೊ
ತಂದೆ ಪುರಂದರವಿಠಲ ಬಂದೆನ್ನ ಸಲಹೊ ||
*********


ಇಷ್ಟು ಪಾಪವನು ಮಾಡಿದುದೆ ಸಾಕೊ |
ಸೃಷ್ಟಿಗೀಶನೆ ಎನ್ನನುದ್ಧರಿಸಬೇಕೊ ಪ

ಒಡಲಕಿಚ್ಚಿಗೆ ಪರರ ಕಡು ನೋಯಿಸಿದೆ ಕೃಷ್ಣ |ಕೊಡದೆ ಅನ್ಯರ ಋಣವನಪಹರಿಸಿದೆ |ಮಡದಿಯ ನುಡಿಕೇಳಿಒಡಹುಟ್ಟಿದವರೊಡನೆ |ಹಡೆದ ತಾಯಿಯ ಕೂಡಹಗೆಮಾಡಿದೆ1

ಸ್ನಾನಸಂಧ್ಯಾನಜಪ ಮಾಡದಲೆ ಮೈಗೆಟ್ಟೆ |ಜ್ಞಾನಮಾರ್ಗವನಂತು ಮೊದಲೆ ಬಿಟ್ಟೆ ||ಏನ ಹೇಳಲಿ ಪರರ ಮಾನಿನಿಗೆ ಮನಸಿಟ್ಟೆ |ಶ್ವಾನ- ಸೂಕರನಂತೆ ಹೊರೆದೆ ಹೊಟ್ಟೆ2

ವ್ರತ ನೇಮ ಉಪವಾಸ ಒಂದು ದಿನ ಮಾಡಲಿಲ್ಲ |ಅತಿಥಿಗಳಿಗನ್ನವನು ನೀಡಲಿಲ್ಲ |ಶೃತಿ ಶಾಸ್ತ್ರ ಪುರಾಣ ಕಥೆಗಳನು ಕೇಳಲಿಲ್ಲ |ವೃಥವಾಗಿ ಬಹುಕಾಲ ಕಳೆದನಲ್ಲ 3

ಶುದ್ಧ ವೈಷ್ಣವ ಕುಲದಿ ಉದ್ಭವಿಸಿದೆನೋ ನಾನು |ಮಧ್ವ ಮತಸಿದ್ದಾಂತ ಪದ್ಧತಿಗಳ ||ಬುದ್ಧಿಪೂರ್ವಕ ತಿಳಿದು ಪದ್ಮನಾಭನು ದಿನದಿ |ಕದ್ದುಂಡು ಕಾಯವನು ವೃದ್ಧಿಮಾಡಿದನಯ್ಯ 4

ತಂದೆ - ತಾಯ್ಗಳ ಸೇವೆ ಒಂದು ದಿನ ಮಾಡಲಿಲ್ಲ |ಮಂದಭಾಗ್ಯದಬವಣೆತಪ್ಪಲಿಲ್ಲ ||ಹಿಂದೆ ಮಾಡಿದ ದೋಷ ಬಂದುಳಿಯದರುಹಿದೆನು |ತಂದೆ ಪುರಂದರವಿಠಲ ಮುಂದೆನ್ನ ಕಾಯೊ 5
*******