Showing posts with label ಉಡುಪ ವಂಶಜ ಹರಿಯು ಉಡುಪತಿಯ ತಪದೆಡೆಯೊ ankita others by nidambur ramadasa. Show all posts
Showing posts with label ಉಡುಪ ವಂಶಜ ಹರಿಯು ಉಡುಪತಿಯ ತಪದೆಡೆಯೊ ankita others by nidambur ramadasa. Show all posts

Thursday 5 August 2021

ಉಡುಪ ವಂಶಜ ಹರಿಯು ಉಡುಪತಿಯ ತಪದೆಡೆಯೊ ankita others by nidambur ramadasa

 ..

by nidambur ramadasa dasaru ನಿಡಂಬೂರು ರಾಮದಾಸ 

ಮಂಗಳಾಚರಣೆ

ಉಡುಪ ವಂಶಜ ಹರಿಯು ಉಡುಪತಿಯ ತಪದೆಡೆಯೊ

ಳುಡುಪ ಶೇಖರನನ್ನು ತನ್ನ ಬಳಿಯಿರಿಸಿ

ಕಡುಪಾಪಿಗಳ ಹೃದಯಮಂಥನವ ಮಾಡಲ್ಕೆ

ಕಡೆಗೋಲು ನೇಣುಗಳ ಪಿಡಿದು ನಿಂತಿರುವ 1

ಬೆನಕ ದೇವನೆ ನಿಜದಿಯಾಗಸಕೆ ಒಡೆಯನವ

ನಾದವಾಹಿನಿಯನ್ನು ತನ್ನಲ್ಲಿಯಿರಿಸಿ

ಗುರುಗಳುಪದೇಶದಿಂ e್ಞÁನವೊದಗಿಪ ಜನಕೆ

ಪೊಡಮಡುವೆನವನಡಿಗೆ ಯೆಡರು ಬರದಂತೆ 2

ಸರಸತಿಯೆ ನೀ ನನ್ನ ರಸನೆಯಲಿ ನೆಲೆನಿಂತು

ನಿನ್ನ ಮಾವನ ಪೊಗಳಲೆನಗೆ ಮತಿತೆತ್ತು

ಅವನೊಲುಮೆಯಿಂದೆನಗೆ ಮುಕುತಿಯನು ಪಡೆವಂತೆ

ಹರಸು ನೀನ್ ಭಗವತಿಯೆ ನಿನ್ನ ವಂದಿಸುವೆ 3

***

ಮೂರಕ್ಕರದ ದೇವ ಮೂರು ವಸ್ತುವ ಬೆರಸಿ

ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ

ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು

ಹರಿವಾಯುಗಳ ಒಲುಮೆ ದೇಹ ರಕ್ಷಕವು4

ಅವ್ಯಾಕೃತಾಕಾಶ ರೂಪದಲಿ ತಾನಿಹನು

ವಿಶ್ವಂಭರಾತ್ಮಕನು ದೇವ ನಿಜದಿಂದ

ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು

ಮಧ್ವಹೃದಯನಿವಾಸಿ ಸರ್ವಮೂಲನವ 5

ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು

ತುಂಬಿಯಾಗಸದಲ್ಲಿ ವ್ಯಾಕೃತವದಹುದು

ವ್ಯಾಕೃತಾಕಾಶದಲಿ ತುಂಬಿ ವಾಯುವಿನಣುಗಳ್

ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6

ಆಗಸದಿ ವಾಯುವಿನ ಪರಮಾಣು ಒತ್ತಡವೆ

ದೃಶ್ಯವಾಯುವು ತಾನೆ ಹರಿವುದಾಗಸದಿ

ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ

ತೇಜವುದಯಿಸುವುದದರಲ್ಲಿ ಮೂರಿಹವು 7

ತೇಜದಿಂದಲೆ ನೀರು ಜಗಕೆಯಾಧಾರವದು

ನೀರಿನಿಂದಲೆ ಭೂಮಿ ಉದಯಿಸುವದದರಿಂ

ಪಂಚಭೂತಂಗಳಿವು ಭೂಮಿಯಲಿ ತೋರುವವು

ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8

ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ

ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ

ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು

ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9

ಭೂತಕೃತ್ತೂ ಅವನೆ ಭೂತಪಾಲಕನವನೆ

ಭೂತಭಾವದಲಿದ್ದು ಪ್ರೇರಕನು ಅವನೆ

ಆತ್ಮಾಂತರಾತ್ಮವೆಂದೆರಡು ರೂಪಗಳವಗೆ

ಹೃದಯದಾಕಾಶದಲಿ ವಾಸವಾಗಿಹನು 10

ಪಂಚಭೂತಗಳು ಪಂಚೇಂದ್ರಿಯಗಳು

ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು

ಪಂಚಾತ್ಮಕನು ದೇವ ಪಂಚವಾಯುಗಳಿಂದ

ಪಂಚತನ್ಮಾತ್ರಗಳ e್ಞÁನವೊದಗಿಪನು11

ಸುಖ ರತಿ ಪ್ರೇರಕನು ತಾನಾಗಿ ಸಿರಿವರನು

ಶಾರೀರ ಪುರದಲ್ಲಿ ನೆಲೆಯಾಗಿ ಇಹನು

ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ

ಳವನ ಬಳಿಯಿದ್ದು ಸೇವೆಯ ಗೈಯುತಿಹರು 12

ವಿಶ್ವರೂಪದ ದೇವ ವಿಶ್ವ ದರ್ಶನಕಾಗಿ

ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು

ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು

ವಿಶ್ವವನು ಬೆಳಗಿಸುತ e್ಞÁನವೊದಗಿಪನು 13

ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು

ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ

ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು

ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14

ತೈಜಸದ ದೇವನವ ತೇಜದಾರೂಪದಲಿ

ಕಂಠಗತನಾಗಿದ್ದು ದೇಹದಲಿ ಬೆಳಗಿ

ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ

ಸ್ವಪ್ನಲೋಕವನು ಮಾನಸಕೆ ತೋರಿಸುವ 15

ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು

ಮಾಯೆಯಾ ಮುಸುಕಿನಿಂದe್ಞÁನಬರಿಸಿ

ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ

ಜಗಕೆ ತನ್ನಯ ಮಾಯೆಯನು ತೋರಿಸುವನು 16

ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು

ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ

ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು

ಮಾಯಾವಿ ಪರಮಾತ್ಮನದು ಲೀಲೆಗಳಿವು 17

***

ದ್ವಾದಶನಾಮ ನಿರ್ವಚನ

ಶ್ರೀಕೃಷ್ಣ ನಿನ್ನ ಚರಣಾರವಿಂದಕ್ಕೆರಗಿ

ಭಕುತಿಯಿಂ ನಿನ್ನ ಪನ್ನೆರಡು ರೂಪಗಳ

ನಾಮ ನಿರ್ವಚನದಿಂ ಕೂಡಿ ನುತಿಸುವೆ ನಾನು

ಸರ್ವಸಿದ್ಧಿಯನ್ನಿತ್ತು ಕಾಪಾಡು ಹರಿಯೆ 18

ಸೃಷ್ಟಿಲಯಕಾರಿಗಳು ಬೊಮ್ಮರುದ್ರರು ಇವರೆ

ಕೇಶವೆಂಬಕ್ಷರದಿ ಮೆರೆಯುತ್ತಲಿಹರು

ವರ್ತನವು ಯಾರಿಂದಲಹುದವನೆ ಪರದೇವ

ಕೇಶವಾತ್ಮಕನವನು ಶ್ರೀಕೃಷ್ಣ ದೇವ 19

ನಾರವೆಂದರೆ ದೋಷ ಲೇಶವಿಲ್ಲದ ಗುಣವು

ನಾರವೆಂದರೆ ನೀರು ಜೀವನಾಧಾರ

ನಾರವಯನವು ಯಾರಿಗವನೆ ನಾರಾಯಣನು

ರಜತಪೀಠದ ಪುರದ ಪರದೈವವವನು 20

ಮಾಧವನು ಮಾಲಕುಮಿಗೊಡೆಯನವ ಪರಮಾತ್ಮ

ಮಾಯೆಯನು ಎದೆಯಲ್ಲಿ ತಾಳ್ದ ಸಿರಿವರನು

ಮಾಯೆಯಿಂದಲಿ ಮಾನವಗೆ ಮುಸುಕನು ಹಾಕಿ

ತನ್ನ ರೂಪವನಾರು ನೋಡದಂತಿಹನು 21

ಹಿರಿ ಬೆಟ್ಟವನು ತಾನು ಕಿರಿ ಬೆಟ್ಟಿನಲಿ ಹೊತ್ತು

ಗೋವುಗಳ ರಕ್ಷಿಸಿದ ಗೋಪಾಲ ನೀನು

ವೇದರಕ್ಷಕನಾಗಿ ಗೋವಿಂದನೆನಿಸಿರುವೆ

ಶ್ರೀಕೃಷ್ಣ ನಿನ್ನ ಮಹಿಮೆಯನೇನ ಪೇಳ್ವೆ 22

ಚೇಷ್ಟಕನು ಬಲರೂಪನಾಗಿರುವ ಕಾರಣದಿ

ವಿಶ್ವದಲ್ಲೆಲ್ಲು ವ್ಯಾಪಿಸಿರುವುದರಿಂ

ವಿಷ್ಣುನಾಮದ ನೀನು ವೈಷ್ಣವರ ಕುಲದೊಡೆಯ

ಮಧ್ವಹೃನ್ಮಂದಿರದ ನೆಲೆಯಲ್ಲಿ ಇರುವೆ 23

ಮಧುವೆಂಬ ದೈತ್ಯನನು ಸೃಜಿಸಿಯವನನು ಕೊಂದು

ಮಧುಸೂದನನು ಎಂಬ ಬಿರುದು ನೀ ಪೊತ್ತೆ

ದುರ್ಜನರ ಸಂಹಾರ ಸಜ್ಜನರ ಉದ್ಧಾರ

ಎಂಬೆರಡು ಕಾರ್ಯಗಳಿಗಾಗಿಯವತಾರ 24

ತ್ರೈವಿಕ್ರಮಾವತಾರವ ತಾಳ್ದು ದೇವ

ಪಾವನಾತ್ಮಕ ಗಂಗೆಯಿಂ ಕಾಲ ತೊಳೆದು

ಮೂರು ಲೋಕದ ಭಕುತರಿಗೆ ದರ್ಶನವ ಕೊಟ್ಟು

ಭಕ್ತರಕ್ಷಕನಾಗಿ ಮೆರೆದೆ ಸಿರಿವರನೆ25

ವಾಮನನು ನೀನಾಗಿ ವಾಮಪಂಥದಿ ಹೋಗಿ

ಬಲಿ ಚಕ್ರವರ್ತಿಯಲಿ ಮೂಹೆಜ್ಜೆ ಬೇಡೆ

ಭಕುತಿಯಿಂದವ ಕೊಡಲು ಮುಕುತಿಯನು ಕೊಡಲೆಂದು

ಬಲಿಯ ಮನೆಯೂಳಿಗವ ಗೈದೆ ಪರಮಾತ್ಮ26

ಸಿರಿಯನೆದೆಯಲಿ ಪೊತ್ತು ಶ್ರೀಧರನು ನೀನಾಗಿ

ಸರ್ವ ಭೂಷಣಗಳಿಂ ಶೋಭಿಸುತಲಿರುವೆ

ಅನ್ನದಾತನು ನೀನು ಅನ್ನಭೋಕ್ತøವು ನೀನು

ಭುಕ್ತಿ ಮುಕ್ತಿ ಪ್ರದನು ನೀನಿರುವೆ ದೇವ 27

ಇಂದ್ರಿಯಗಳು ಹೃಷೀಕಾಭಿಧಾನದಲಿಹವು

ನೀನವುಗಳಿಗೆ ಎಲ್ಲ ಒಡೆಯನಾಗಿರುವೆ

ಹೃಷೀಕೇಶ ನಾಮವದು ನಿನಗೊಪ್ಪುವದು ಹರಿಯೆ

ನನ್ನ ಮನ ನಿನ್ನಡಿಯೊಳಿರುವಂತೆ ಮಾಡು28

ಸಾಗರವನುದರದಲ್ಲಿರಿಸಿ ನೀನದರಿಂದ

ನಾಭಿಯಲಿ ಪದುಮವನು ಸೃಷ್ಟಿಸಿದೆ ದೇವಾ

ಪದುಮನಾಭನು ನೀನು ಬೊಮ್ಮಪಿತನಾಗಿರುವೆ

ನಿನ್ನ ಮಾಯಾ ರೂಪವನೇನಪೇಳ್ವೆ29

ಮೊಸರ ಕುಡಿಕೆಯನೊಡೆದು ತಾಯಿಯಿಂ ಬಂಧಿತನು

ದಾಮೋದರನು ಎನಿಸಿ ಉಜಡೆಯನ್ನೊಯ್ದು

ಮರಗಳೆಡೆಯಲಿ ಪೊಕ್ಕು ಬೀಳಿಸುತಲವುಗಳನು

ಭಕುತರಾ ಶಾಪಮೋಚನೆಯ ನೀ ಮಾಡ್ದೆ30

ಕೇಶವನೆ ಮೊದಲಾದ ಪನ್ನೆರಡು ನಾಮಗಳ

ಅರ್ಥವರಿತನವರತ ಪೇಳಲವಗೊಲಿದು

ಸಂಸಾರ ಬಂಧನವ ತೊಲಗಿಸಿಯೆ ಪರಮಾತ್ಮ

ತನ್ನ ಬಳಿಗೊಯ್ಯುವನು ನಿಜ ಪೇಳ್ವೆ ನಾನು31

ಶ್ವೇತ ರಕ್ತವು ಪೀತ ಕೃಷ್ಣ ವರ್ಣಗಳೆಂಬ

ನಾಲ್ಕು ಬಣ್ಣದ ದೇವನೊಬ್ಬನೇ ಇಹನು

ಕಲಿಯುಗದ ಕಾಲದಲಿ ಕೃಷ್ಣನೊಬ್ಬನ ನೆನೆದು

ನಾಮಜಪ ಮಾಡಿದರೆ ಮುಕ್ತಿಯನು ಕೊಡುವ 32

***

ಮತ್ಸ್ಯಾದಿ ದಶಾವತಾರಗಳು

ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ

ಮನ್ವಂತರ ಪ್ರಳಯಜಲಧಿಯನು ಪೊಕ್ಕು

ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್

ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33

ಕ್ಷೀರೋದಧಿಯಲಾಳತಲಕೆ ಮಂದರ ಪೊಕ್ಕೆ

ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ

ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್

ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34

ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ

ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು

ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ

ವಾರಾಹ ರೂಪದಿಂದಲಿ ಆಟವಾಡ್ದೆ35

ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು

ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ

ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ

ನರಸಿಂಹ ರೂಪವನು ತಾಳ್ದೆ ಪರಮಾತ್ಮ 36

ಇಂದ್ರಾವರಜನೊಮ್ಮೆ ವಟುವಾಮನನು ಬಂದು

ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ

ರಾಜ ಕೊಡಬಯಸಲದ ಗುರು ಶುಕ್ರತಡೆದಾಗ

ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37

ಸಂಹಾರ ಲೀಲೆಯನು ತೋರಲವ ಪರಮಾತ್ಮ

ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು

ಮಾತೆಯನು ಬದುಕಿಸುತ ದುಷ್ಟರಾಜರ ತರಿದು

ರಾಜವಂಶವನು ನಿರ್ವಂಶ ಮಾಡಿದನು 38

ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ

ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು

ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ

ರಾವಣನ ಕೊಂದು ಸೀತೆಯ ಮರಳಿ ತಂದೆ 39

ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ

ಪದಿನಾರು ಸಾಸಿರದ ಸತಿಯರನು ಒಲಿಸಿ

ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ

ಆನಂದರೂಪದವ ಪರಮಾತ್ಮ ನಿಜವು 40

ತಾಮಸದ ಜೀವರನಧೋಗತಿಗೆಯಿಳಿಸುತಲಿ

ವೇದ ಮತವನು ತೆಗಳಿ ಬುದ್ಧ ರೂಪದಲಿ

ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ

ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41

ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ

ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ

ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ

ಕೃತಯುಗವ ಮಾಡಿದೆಯ ಪರಮಾತ್ಮ ನೀನು 42

ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು

ಹತ್ತು ರೂಪಗಳಿವುಗಳೇ ಮುಖ್ಯವದರಿಂ

ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ

ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43

ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು

ಅಗ್ನ್ಯಾದಿ ನಾಮಗಳು ದೇವರಿಗೆಯಿಹವು

ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ

ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44

ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು

ಮನವೆಂಬ ಕಡಿವಾಣ ಹಿಡಿದೋಡಿಸುವವನು

ಜೀವನೇ ರಥಿಕನವ ವಿಷಯಬೇಟೆಗಳಲ್ಲಿ

ಪರಮಾತ್ಮನರಿವೆಂತು ಮೂಡುವುದು ಅವಗೆ 45

ವಾಸದಿಂ ಬೆಳಗಿಸುವ ವಾಸುದೇವನು ತಾನು

ವರುಣನಂತರ್ಗತನು ಶಿರದಲ್ಲಿಯಿಹನು

ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ

e್ಞÁನವನ್ನೊದಗಿಪನು ಶ್ರೀಕೃಷ್ಣನವನು 46

ವಿe್ಞÁನಿ ಭಗವಂತ ಹೃದಯ ಗುಹೆಯಲ್ಲಿಹನು

ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ

ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ

ರಕ್ತರೂಪವ ಮಾಡಿ ಪಾಲಿಸುವ ನಮ್ಮ47

ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು

ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು

ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ

ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48

ವಾಯುವಂತರ್ಗತನು ನೀಲರೂಪದ ದೇವ

ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು

ಕಾಮರೂಪಿಯು ಅವನಪಾನಕ್ಕೆ ಒಡೆಯನವ

ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49

ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ

ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ

ಹೃದಯದಲ್ಲಾಗಸವು ಇರುವ ಕಾರಣದಿಂದ

ಪಂಚಭೂತಂಗಳಿವು ದೇಹದಲ್ಲಿಹವು 50

ವಿಶ್ವದಲ್ಲೆಲ್ಲು ವ್ಯಾಪಿಸಿದ ಪರಮಾತ್ಮ

ವಾಯುವಿನ ಜೊತೆಗೂಡಿ ದೇಹಚಾಲಕನು

ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ

ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51

***

ಹೊನ್ನು ಹೆಣ್ಣು ಮಣ್ಣು

ಮಾಯೆಯದು ಮೂರು ರೂಪಗಳ ನಾನು ಪೇಳುವೆನು

ಹೊನ್ನು ಹೆಣ್ಣು ಮಣ್ಣು ಎಂಬ ಮೂರವುಗಳ್

ಅವುಗಳನು ಹಂಬಲಿಸಿ ಕೆಡಬೇಡ ಮರುಳೆ ನೀನ್

ಅವುಗಳೇ ಮೃತ್ಯುವಿನ ಕಡೆಗೊಯ್ಯುವವುಗಳ್ 52

ಕಷ್ಟದಿಂ ಸೃಷ್ಟಿಯಲಿ ನಗ್ನತೆಯೆ ಸುಂದರವು

ಕಷ್ಟದಿಂ ಮರಣದಲಿ ನಗ್ನತೆಯ ದೇಹ

ಕಷ್ಟವಿಕ್ಕ್ಕೆಡೆಗಳಲಿ ನಾಸ್ತಿಸುಖ ಮಧ್ಯದಲಿ

ಕನಕ ಕನಕವದೆಂದು ಹೊನ್ನ ಪೇಳುವರು53

ಮೋಹಿನಿಯು ತಾನಾಗಿ ದ್ಯೆತ್ಯರನು ವಂಚಿಸಿದ

ಮೋಹಿನಿಯು ತಾನಾಗಿ ರುದ್ರ ವಂಚಿತನು

ಮೋಹಿನಿಯು ತಾನಾಗಿ ಸುಂದೋಪಸುಂದ ವಧೆ

ಮೋಹಿನಿಯು ಪೆಣ್ಣು ಮೋಸವದಲ್ತೆ ಮನುಜ? 54

ಮಣ್ಣಿನಿಂದಲೆ ಹರಿಯು ದೇಹವನು ಸೃಷ್ಟಿಸುವ

ಮಣ್ಣೆ ಅನ್ನವದಾಗೆ ಪಾಲಿಸುವ ನಮ್ಮ

ಮರಣಕಾಲದಲದುವೆ ಮಣ್ಣನಪ್ಪುವದು ತಿಳಿ

ಮಣ್ಣಿಗಾಗಿಯೇ ನೀನು ಹಂಬಲಿಪೆಯೇಕೆ 55

ಪ್ರಾಣದೇವರೆ ನಿನ್ನ ಉಸಿರಾಟ ಕಾರಣರು

ಪ್ರಾಣನುಸಿರಾಟವದು ಯಾರಿಂದಲಹದು?

ಅವನೆ ಪರಮಾತ್ಮ ತಿಳಿ ದೇವಾಧಿದೇವನವ

ನಿನ್ನ ಬಾಳಿಗೆ ಕಾರಣರು ಇಬ್ಬರಹರು56

ಸೂರ್ಯದೇವನು ನೇತ್ರತತ್ವಕ್ಕೆ ಒಡೆಯನವ

ಸೂರ್ಯನದು ಕಣ್ಣು ಯಾರಿಂದ ತೋರುವುದು?

ಅವನೆ ಪುರುಷೋತ್ತಮನು ಪರಮಾತ್ಮ ಹರಿಯವನು

ಆ ವಿಶ್ವರೂಪಿಯೇ ವಿಶ್ವಧಾರಕನು57

ವಾಸದಿಂ ಬೆಳಗಿಸುವ ಕಾರಣದಿ ಭಗವಂತ

ವಾಸುದೇವಾತ್ಮಕನು ಸೃಷ್ಟಿಮೂಲನವ

ವಸುದೇವಪುತ್ರನಾಗವತರಿಸಿ ಸಿರಿವರನು

ಉಡುಪಿಯಲಿ ಪೂಜೆಗೊಂಬನು ನಿಜವ ಪೇಳ್ವೆ 58

ಕೃತಯುಗದ ಭಾರ್ಗವನು ತ್ರೇತೆಯಲಿ ದಾಶರಥಿ

ದ್ವಾರಪದ ಕೃಷ್ಣ ನೀನೇಯಿರುವೆ ದೇವಾ

ಮಧ್ವವರದನು ನೀನು ಭಾರ್ಗವನ ನೋಡಲ್ಕೆ

ಉಡುಪಿಗೇ ಬಂದಿರುವೆ ಪರಮಾತ್ಮ ನೀನು 59

ಪರಶುರಾಮ ಕ್ಷೇತ್ರ ಶ್ರೀಕೃಷ್ಣನ ಕ್ಷೇತ್ರ

ಪದ್ಮನಾಭಕ್ಷೇತ್ರ ಶಂಕರಕ್ಷೇತ್ರ

ಹಲವಾರು ದೇವತೆಗಳಿಲ್ಲಿ ನೆಲೆಗೊಳ್ಳುತ್ತ

ಪಾವನವ ಗೈಯುವರು ಭೂಮಿಯನ್ನಿದನು 60

ತುಲೆಯಲ್ಲಿ ತೂಗಿದಾಗುತ್ತಮವದದರಿಂದ

ತುಲು ದೇಶವಿದು ಜಗದಿ ವಿಖ್ಯಾತವಹುದು

ತುಲು ಲಿಪಿಯೆ ಸರ್ವಮೂಲ ಗ್ರಂಥ ಲೇಖನಕೆ

ವೇದಾದ್ರಿಯಾಯಿತಿದು ವೇದಾಂತಭೂಮಿ 61

ಮಧ್ಯಗೇಹದ ಭಟ್ಟರಿಂ ಸೇವೆಯ ಪಡೆದು

ವಾಯುದೇವೋತ್ತಮನ ಮಗನಾಗಿ ಕೊಡಿಸಿ

ಸಜ್ಜನರ ಹೃದಯದಲಿ ಮುಖ್ಯ ತತ್ವವ ತಿಳಿಸೆ

ಸರ್ವಜ್ಞ ಮೂರ್ತಿಯನು ತಂದಿರುವೆ ದೇವಾ62

ಪರಶುರಾಮನ ರೂಪದಿಂ ನೀಂ ತಪಗೈದ

ಪಾಜಕ ಕ್ಷೇತ್ರದಲಿ ಭಕುತನವತರಿಸೆ

e್ಞÁನರೂಪದ ನೀನು ಅವನ ಹೃದಯವ ಪೊಕ್ಕು

ಮಧ್ವಮತವನು ನೀನು ಪಸರಿಸಿದೆ ಹರಿಯೆ 63

***

ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ

ಲಾದುದನು ಕೇಳುತ್ತಿ ಪರಮಾತ್ಮನನ್ನು

ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ

ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64

ದಾಸಕೂಟದ ಭಕ್ತರಿಂ ರಚಿತವಾದ ಸು

ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ

ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ

ಕೀರ್ತನದ ಭಕ್ತರೆಂದರಿ ಮನುಜ ನೀನು 65

ವ್ಯಾಸ ದಾಸರ ಕೂಟದಿಂದರಿತ ದೇವರನು

ಮಾನಸದ ಮಂಟಪದಲ್ಲಿರಿಸಿ ಪೂಜಿಸುತ

ಅದನೆ ಪೌನಃಪುನ್ಯದಿಂದ ಮೆಲುಕಾಡುವದು

ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66

ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ

ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ

ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ

ಪಾದಸೇವನಭಕ್ತಿಯೆಂದು ತಿಳಿ ಮನುಜ 67

ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ

ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ

ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ

ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68

ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು

ವಾಗೆಂಬುದೆಂಟಂಗಗಳನು

ಪಾದದೆಡೆಯೀಡಾಡಿ ನಮಿಸುವುದೇ ವಂದನವು

ಸಾಷ್ಟಾಂಗನಮನವಿದು ತಿಳಿಯೈ 69

ದಾಸೋಹವೆಂಬುದನು ತಿಳಿದು ನೀನನವರತ

ಫಲದ ಬಯಕೆಯ ತೊರೆದು ಸೇವೆಯನು ಮಾಡೆ

ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು

ಭವಬಂಧ ತೊರೆಯಿಸುತ ಪಾಲಿಸುವನವನು 70

ಸಚ್ಚಿದಾನಂದ ಸ್ವರೂಪದವ ಪರಮಾತ್ಮ

ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ

ನೀರು ಹಾಲನು ನಂಬಿದಂತೆ ನಂಬುವನನ್ನು

ಭಕ್ತರಕ್ಷಕನವನು ಮುಕ್ತಿದಾಯಕನು 71

ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ

ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ

ಕೃಷ್ಣನಿಗೆ ಆರ್ಪಿತವು ಸುಕೃತ ದುಷ್ಕøತವೆಲ್ಲ

ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72

ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು

ಅಷ್ಟಯತಿಗಳ ಶುದ್ಧಮಾನಸರ ಮಾಡಿ

ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು

ರಾರಾಜಿಸುವೆ ದೇವ ಕೃಷ್ಣರೂಪದಲಿ 73

ಭಾರ್ಗವೀಪತಿಯಾದ ಸಿರಿವರನು ಮಾಧವನು

ಭಾರ್ಗವೀರೂಪವನು ಶುಕ್ರವಾರದಲಿ

ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು

ಮೋಹಿನೀರೂಪವದು ಮೋಹಕವದಲ್ತೆ 74

ಬಲ್ಲಾಳ ವಂಶಜರು ಉಡುಪ ಕುಲದವರೆಂದು

ಭಕುತ ಗುರುವಾದಿರಾಜರ ಹಸ್ತದಿಂದ

ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ

ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75

ದುಷ್ಟ ಜನಮರ್ದನ ಜನಾರ್ದನನು ನೀನಿರುವೆ

ನಿನ್ನ ರೂಪವೆ ಪಕ್ಷನಾಥ ಸೇವಿತವು

ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ

ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76

ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ

ಕೊಡಲಿಯಿಂ ಕಡಿಕಡಿದು ದುಷ್ಟರಾಜರನು

ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ

ಪರಶುರಾಮನು ಎಂಬ ಪೆಸರನ್ನು ಪಡೆದೆ 77

ಪರಶುರಾಮನು ರಾಮ ಪರಶುರಾಮನು ಕೃಷ್ಣ

ಒಬ್ಬನೇ ಹಲವಾರು ರೂಪಗಳ ತಾಳಿ

ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ

ನಿನ್ನ ಮಾಯಾರೂಪ ತಿಳಿದವರು ಯಾರು? 78

ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು

ತಿಳಿಸಲ್ಕೆ ನೀನು ಮೇಘದ ವರ್ಣದವನು

ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ

ಯೆಂದು ಶ್ರುತಿ ಹೇಳುವುದು ತಿಳಿಯೈ79

ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ

ಉತ್ತಮನು ನೀನಿರುವೆ ಅಧಮ ನಾನಿರುವೆ

ಅe್ಞÁನದಾಚ್ಛಾದಿಕೆಯನೆನಗೆ ಹಾಕುತಲಿ

ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80

ಶ್ರವಣಮನನಾದಿ ಸಾಧನದ ಬಲದಿಂದ ನಾ

ನನ್ನ ಮುಸುಕನು ತೆಗೆದರೂ ನೀನು

ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ

ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81

ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ

ನಾಭಿರಾಜನ ಪುತ್ರನಾಗಿಯವತರಿಸಿ

ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು

ಲೋಕದ ಕ್ಷಾಮವನು ಹೋಗಲಾಡಿಸಿದೆ 82

ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು

ಅಜಗರದ ವೃತ್ತಿಯಲಿ ದೇಹವನು ತೊರೆದು

ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ

ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83

ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು

ಪ್ರಾಕೃತದ ದೇಹವನು ಹೊಂದಿದಾ ಜನರು

ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ

ಸುಖ ದುಃಖವನು ಹೊಂದಿ ಜೀವಿಸುವರವರು 84

ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ

ಅಚ್ಯುತನ ನಾಮದಿಂ ಪಾಪ ಪರಿಹರಿಪೆ

ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ

ನಾಮದಲನಂತನೆನಿಸಿರುವೆ ಶ್ರೀಹರಿಯೇ 85

ವೇದರಕ್ಷಕನಾಗಿ ಗೋವುಗಳ ರಕ್ಷಿಸುತ

ಗೋವಿಂದನಾಮವನು ಧರಿಸುತಲಿ ನೀನು

ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ

ಕರ್ಮದೋಷದ ಪಾಪ ಪರಿಹಾರವಹುದು 86

ಸಚ್ಚಿದಾನಂದಸ್ವರೂಪ ಹರಿ ನೀನಿರುವೆ

ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು

e್ಞÁನವಾನೆಂದವನು ಹೆರವರ್ಗೆ ತಿಳಿಸುತಿರೆ

ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87

ಹರದಾರಿ ಸಾವಿರಾರಿದ್ದರೂ ನಾದವನು

ಚಣದೊಳಗೆಯಾಕಾಶವಾಣಿ ಕೇಳಿಸುವದು

ಕಾಣದಿಹ ವಿದ್ಯುತ್ತುರೂಪವನು ತಾಳಿದವ

ದೇವನಲ್ಲದೆ ಬೇರೆ ಯಾರ ಮಾಯೆಯಿದು 88

***


ಗಾಯಿತ್ರಿ ಹಿರಿಮೆ

ಹತ್ತು ರೂಪದ ಗಾಯಿತ್ರಿ ನಿನಗೆ ರಂಗದ ತಾನ

ಹತ್ತು ರೂಪಗಳಲ್ಲಿ ಕುಣಿಯುತಿಹೆ ನೀನು

ಹತ್ತು ಸಲವಾದರೂ ಗಾಯಿತ್ರಿ ಜಪಿಸದಿರೆ

ನಿನ್ನಲ್ಲಿ ಭೂಸುರತೆ ಉಳಿಯುವದೆಂತು? 89

ತನ್ನಾಮದರ್ಥವೇ ವ್ಯಾಪ್ತಿರೂಪದ ಮೀನು

ಅಮೃತಸವನದಕತದಿ ಕೂರ್ಮನಿಹೆ ನೀನು

ಭೂವರಾಹನು ನೀನು ವರೇಣ್ಯನಾಮಕನು

ಶತ್ರುಭರ್ಜನದಿಂದ ಭರ್ಗನಾಗಿರುವೆ 90

ಪ್ರಾಣವನು ಮೇಲೆತ್ತಿ

ಅಪಾನವನು ಕೆಳಗಿರಿಸಿ

ಮಧ್ಯದಲಿ ವಾಮನನು

ದೇವ ನೀನಿರುವೆ&ಚಿmಠಿ;ಟಿ, bsಠಿ;91

ಮಹಿಯ ಭಾರವ ತೆಗೆದ

ಪರಶುರಾಮನು ನೀನು

ಪ್ರಾಣನ ಪ್ರೀತಿಕರ

ರಾಮ ನೀನಿರುವೆ 92

ಕಲಿಯುಗದ ದೇವನೇ e್ಞÁನರೂಪದ ಕೃಷ್ಣ

ನಾಸ್ತಿಕ್ಯ ಮತದವನು ಬುದ್ಧ ನೀನಿರುವೆ

ಧರ್ಮ ಪ್ರಸಾರಣಕೆ ಹಯವನ್ನು ಚೋದಿಸುವ

ಕಲ್ಕಿನಾಮಕ ನೀನು ತಿಳಿದು ಜಪ ಮಾಡು 93

ಗಾಯನದಿ ರಕ್ಷಿಸುವೆ ಗಾಯಿತ್ರಿಯೇ ನಮಗೆ

ಬ್ರಾಹ್ಮತೇಜವನುಳಿಸಿ ರಕ್ಷಿಪುದು ನಮ್ಮ

ಗಾಧಿಪುತ್ರನು ತಾನು ಕ್ಷತ್ರಿಯನದಾದರೂ

ಬ್ರಹ್ಮರ್ಷಿಯಾಗಿ ಬಾಳಿದನು ನಿಜವೈ 94

ಸಿರಿವರನೆ ನೀನು ಭಾಸ್ಕರನ ಮಂಡಲದಲ್ಲಿ

ಕಮಲದಾಸನದಲ್ಲಿ ಶೋಭಿಸುತಲಿರುವೆ

ಚಕ್ರ ಶಂಖ ಮಕರಕುಂಡಲಾದಿಗಳಿಂದ

ಲೆನ್ನ ಹೃದಯಕೈತಂದು ನೆಲೆನಿಲ್ಲು 95

ನಿನ್ನ ಸೌವರ್ಣ ತೇಜದ ಬೆಳಕಿನಿಂದೆನ್ನ

ಆತ್ಮದ ಜ್ಯೋತಿಯನು ಬೆಳಗಿಸುತ ನೀನು

ನಿನ್ನನ್ನೆ ಹಂಬಲಿಪ ಭವಬಂಧ ತಪ್ಪಿಸುವ

ನಿನ್ನ ಬಳಿಬರುವ ದಾರಿಯನು ತೋರಿಸೆಲಾ 96

ಗಾಯಿತ್ರಿಯ ಜ್ಯೋತಿ ನಂದದಂತಿರಲು

ನಾನಷ್ಟಾಕ್ಷರಿಯ ಮಂತ್ರ ಜಪಿಸುವೆನು ನಾನು

ವಿದ್ಯುತ್ತಿನದು ರಕ್ಷೆ ನಾರಾಯಣನ ಮಂತ್ರ

ಅದರಿಂದ ರಕ್ಷಣೆಯ ಮಾಡುವೆನು ನಾನು 97

ಆತ್ಮರಕ್ಷಕನು ಹರಿ ದೇಹರಕ್ಷಕನು ಹರ

ಹರನ ದೇಹವು ಪ್ರಕೃತಿಪಂಚಕದಿ ರಚಿತ

ಆತ್ಮದಲ್ಲಿರುವಹಂಕೃತಿಗೊಡೆಯ ಹರ

ಹರಿಹರರೇ ದೇಹಾತ್ಮ ರಕ್ಷಣೆಯ ಮಾಡಿ98

ವಿದ್ಯುತ್ತು ಬಿಳಿ ಕಪ್ಪು ಕೆಂಪು ನೀಲಿಗಳೆಂಬ

ಐದು ಮುಖ ಹರನಿಗಿಹುದದರಿಂದ ನಾನು

ಪಂಚಾಕ್ಷರಿಯ ಮಾಡಿ ಹರನನ್ನು ಧ್ಯಾನಿಸುವೆ

ಧರ್ಮಾಯತನದ ದೇಹ ರಕ್ಷಣೆಯ ಮಾಳ್ಪೆ 99

ಕಾಮವೆನ್ನುವ ವೈರಿ ಮನದಲ್ಲೆ ಹುಟ್ಟಿದವ

ಮನದೊಡೆಯ ರುದ್ರನನ್ನೇ ಹೊಡೆಯಲೆಂದು

ಐದು ಬಯಕೆಗಳೆಂಬ ಬಾಣದಿಂ ಹೊಡೆಯುತಿರೆ

ಕಾಮದಹನವ ಹೊಂದಿ ಬೂದಿಯಾದನವ 100

ಆ ಕಾಮನೇ ಮತ್ತೆ ಅಂಗಹೀನನದಾಗಿ

ರುದ್ರನನ್ನರ್ಧನಾರೀಶ್ವರನ ಮಾಡಿ

ಮನವನ್ನು ಕೆಡಿಸುತಲಿ ಮಾನವರೆಲ್ಲರನು

ದುಃಖದಾ ಮಡುವಿನಲಿ ಕೆಡಹುವನು ನಿಜದಿ 101

ದೇಹಸೃಷ್ಟಿಗೆ ಮೂಲ ಮಣ್ಣು ತೇಜವು ನೀರು

ಈ ಮೂರು ಮೂರುವಿಧವಾಗಿ ಪರಿಣಮಿಸಿ

ಪಾಲನೆಯು ನಡೆಯುವದು ದೇವರಿಂದಲೇ

ಇದನು ಉಪನಿಷತಿನಾಧಾರದಿಂದ ಪೇಳುವೆನು 102

ಭಕ್ಷ್ಯಭೋಜ್ಯವು ಲೇಹ್ಯ ಪೇಯವೆಂಬೀ

ನಾಲ್ಕು ಪ್ರಾಣದಾಹುತಿಯನ್ನು ನಾವು ಕೊಡುತಿಹೆವು

ಅದರಿಂದ ಪಾಕವನು ಮಾಡುತ್ತ ದೇವನವ

ಸಪ್ತಧಾತುಗಳನ್ನು ಮಾಡಿ ರಕ್ಷಿಸುವ 103

ತೇಜವದು ವಾಗ್ರೂಪ ತಾಳುವದು ಮತ್ತದುವೆ

ಅಸ್ಥಿಮಜ್ಜಗಳಾಗುವವು ನಿಜವ ಪೇಳ್ವೆ

ವೈದ್ಯಕೀಯಪರೀಕ್ಷೆಗೊಳಗಾಗಿ ತಿಳಿವೆ ನೀನ್

ಶ್ರುತಿತತ್ವವೆಂದೆಂದು ಸಾರುತಿಹುದಿದನೆ 104

ಮಣ್ಣಿನನ್ನವೆ ಮೊದಲು ಮನವಾಗಿ ಮತ್ತದುವೆ

ಮಾಂಸ ರೂಪವ ತಾಳಿ ಮಲವದಾಗುವುದು

ನೀರೆ ಮುಖ್ಯ ಪ್ರಾಣ ಮತ್ತೆ ಶೋಣಿತವಾಗಿ

ಮೂತ್ರರೂಪವ ತಾಳಿ ಹೊರಗೆ ಹೋಗುವುದು 105

ಸ್ವೇದಜೋದ್ಭಿಜ್ಜ ಮತ್ತಂಡಜ ಜರಾಯುಜಂಗಳು

ಎಂಬ ನಾಲ್ಕು ವಿಧ ಜೀವಜಂತುಗಳು

ನಾರಾಯಣನು ತಾನು ಜಲವಾಸಿಯಾಗುತಲಿ

ಜೀವಜಂತುಗಳನ್ನು ಸೃಷ್ಟಿ ಮಾಡುವನು 106

ನಿನ್ನ ಗುಣದೋಷಗಳ ಪರರೆಂಬ ದರ್ಪಣದಿ

ನೋಡಿದರೆ ತೋರುವವು ನಿನ್ನವೇ ತಿಳಿಯೈ

ಪರರಲ್ಲಿ ಕಾಣುತಿಹ ದೋಷಗಳನು ತೊರೆಯುತ್ತ

ಗುಣಗಳನು ಎಣಿಸುವವ ಲೋಕಮಾನ್ಯ 107

ಊಧ್ರ್ವಮೂಲದ ದೇವನೂಧ್ರ್ವದ ಹಿಮಾಲಯದೊ

ಳುತ್ತುಂಗ ನಾರಾಯಣಪರ್ವತದಲಿ

ತಾರಕನು ರಾಮನಂತೆಲ್ಲ ನರರನು ತನ್ನ

ಬಳಿಗೆ ಕರೆದೊಯ್ಯಲ್ಕೆ ಮೇಲೆ ನಿಂತಿರುವ 108

ಮಧ್ವಗುರುಹೃದಯಭಾಸ್ಕರನು ನಾರಾಯಣನು

ಬದರಿಯೊಳಿಹ ನೆಲೆಗೆ ಕರೆಯಿಸುತಲೆಮ್ಮನ್ನು

ಸೇವೆಯನು ಕೈಕೊಂಡು ಭಾವಗತನಾಗಿದ್ದು

ಪ್ರೇರಿಸಿದನೀಕೃತಿಗೆ ಪ್ರಕೃತಿ ಪರಮಾತ್ಮ&ಚಿmಠಿ;ಟಿbs, ಠಿ; 109

ಆತ್ಮದಲಿ ಒಳಗಿದ್ದು ಅಂತರಾತ್ಮನು ನೀನು

ಆತ್ಮದ ಬಹಿರ್ಗತನು ಪರಮಾತ್ಮ ನೀನು

ದೇಹದಿಂ ಹೊರಗಿದ್ದು ಕಾಲಾತ್ಮಕನು ನೀನು

ನೀನಿಲ್ಲದಿಹ ದೇಶಕಾಲವೆಲ್ಲಿಹುದು? 110

ಮೂರು ನಾಮಗಳಿಹವು ಶ್ರೀನಿವಾಸನೆ ನಿನಗೆ

ಅವುಗಳನು ನೆನೆದರೇ ಪಾಪ ಪರಿಹಾರ

ಅಚ್ಯುತಾನಂತಗೋವಿಂದನೆನ್ನುವ ನಾಮ

ಕೃತದೋಷ ಪರಿಹಾರಕಾಗಿ ಜಪಮಾಳ್ಪೆ 111

ಮಧುರಾಖ್ಯನಾಮವನು ಹಿಂದು ಮುಂದಾಗಿಸುತ

ಮಧ್ಯದಕ್ಷರವನ್ನು ಕೈಯಲ್ಲಿಯಿರಿಸು

ನಾಮಜಪ ಮಾಡದಿರೆ ಅವನ ಮುಖಕೆಸೆದು ನೀ

ನನವರತ ಜಪಮಾಡಿ ಸಿದ್ಧಿಪಡೆ ಮನುಜಾ 112

ಅಣುವಿಂದ ಅಣುವಾಗಿ ಮಹದಿಂದ ಮಹತ್ತಾಗಿ

ನಿನ್ನ ದರುಶನವು ಜನರಾರಿಗೂ ಇಲ್ಲ

ಮಧ್ಯಕಾಲದಿ ಮಾತ್ರ ದರುಶನವು ವಸ್ತುವಿಗೆ

ಅವತಾರ ರೂಪಗಳೆ ಪೂಜಾರ್ಹವಿಹವು 113

ಎಲ್ಲರೂ ಶ್ರೀಹರಿಯ ನೆಲೆಯೆಂದು ನೀನರಿತು

ಮಮತೆಯಿಂ ನೋಡುತಲಿ ಸುಖವನನುಭವಿಸು

ಹೊಲೆಯನಾದರು ನಿನ್ನ ನಂಬಿ ಮರೆಹೊಕ್ಕಿದರೆ

ಕೈಬಿಡದೆ ನೀನವನ ರಕ್ಷಿಸಲೆ ಮನುಜಾ 114

ಹಲವಾರು ಜಾತಿಗಳು ಹಲವಾರು ಮತಗಳಿಹ

ವವುಗಳಿಗೆ ಮೂಲಮತ ವೇದಮತವೊಂದೆ

ಬೈಬಲ್ ಖುರಾನ್ ಮೊದಲಾದ ಪೆಸರಿಂದದುವೆ

ಲೋಕದಲ್ಲೆಲ್ಲು ಪಸರಿಸುತಲಿಹವು 115

ಭವಬಂಧನವ ಕಳೆದು ತನ್ನ ಬಳಿಗೊಯ್ಯುವವ

ನೀನಲ್ಲದಿನ್ನಾರು ಹರಿಯೆ ಶ್ರೀರಾಮ

ಸಾಂತಾನಿಕದ ಲೋಕಕೊಟ್ಟು ರಕ್ಷಿಸಿದ ಹರಿ

ತಾರಕನು ನೀನಿರುವೆ ನೀನೆ ಗತಿ ದೊರೆಯೆನಗೆ 116

ಪರಶುರಾಮನ ರೂಪದಿಂದ ನೀಂ ತಪಗೈದ

ಪಾಜಕ ಕ್ಷೇತ್ರದಲಿ ಭಕುತನವತರಿಸೆ

e್ಞÁನರೂಪದಿ ನೀನು ಅವನ ಹೃದಯವ ಹೊಕ್ಕು

ಮಧ್ವಮತವನು ಜಗದಿ ದೇವ ಪಸರಿಸಿದೆ 117

ಮಿನುಗು ಹುಳಗಳ ಸೃಜಿಸಿ ಬೆಳಕನದರಲ್ಲಿರಿಸಿ

ಕಗ್ಗತ್ತಲೆಯ ಕಾಡುಗಳಲಿ ರಕ್ಷಿಸುವೆಯೊ

ಅಂತೆಯೇ ನಮ್ಮ ದೇಹದೊಳಗಿದ್ದು ನೀನ್

ಪ್ರತಿಬಿಂಬ ಜೀವವನು ರಕ್ಷಿಸುವೆ ದೇವಾ 118

ಪರಶುರಾಮನು ರಾಮ ಪರಶುರಾಮನು ಕೃಷ್ಣ

ನರನು ನಾರಾಯಣನು ವ್ಯಾಸ ಮೊದಲಾಗಿ

ಒಂದಾಗಿ ಬೇರೆಯಾಗಿಯೆ ರೂಪ ತಾಳುತ್ತ

ಭಕ್ತರಕ್ಷಕನಾಗಿ ದುಷ್ಟವಂಚಕನು 119

ಇಂದ್ರಿಯಂಗಳ ಹೊರಮುಖವಾಗಿ ಸೃಷ್ಟಿಸಿದೆ

ಹೃದಯಗುಹೆಯಲ್ಲಿರುವೆ ಕಾಣುವುದದೆಂತು?

ಮನದಬಾಗಿಲ ತೆರೆದು ಅಂತರ್ಮುಖದಿ ನೋಡೆ

ಪ್ರತ್ಯಗಾತ್ಮನು ನೀನು ಕಾಣುವದು ನಿಜವು 120

ಕುರುಡನಾಗಿಹೆ ನಾನು ಕುರುಡು ಇಂದ್ರಿಯಂಗಳಿಂ

ತೋರುಬೆರಳಿಂದ ತೋರಿಸಲು ಬಯಸಿದೆನು

ನನಗೆ ಅಂಜನಹಾಕಿ ತೋರು ನಿನ್ನ ಜ್ಯೋತಿ

ವಿಶ್ವತಶ್ಚಕ್ಷು ಪರಮಾತ್ಮ ಶರಣೆಂಬೆ 121

ಕೋಟಿ ಗೋದಾನಕ್ಕೂ ಮಿಗಿಲಾಗಿ ಪುಣ್ಯಕರ

ನಿನ್ನ ನಾಮದ ಜಪವು ತಾರಕನು ನೀನು

ತಿಳಿದ ಗುಣಸಾಗರದ ಹನಿಗಳನು ಹೆಕ್ಕಿ ನಾನ್

ನುತಿಸಿದೆನು ನಿನ್ನನ್ನು ಮುಕ್ತಿದಾಯಕನೆ 122

ಸುಗುಣೇಂದ್ರ ಮೊದಲಾದ ಯತಿವರರ ಪೂಜೆಯಿಂ

e್ಞÁನರೂಪದ ನೀನು ಸಂತಸವ ತಾಳಿ

e್ಞÁನಭಂಡಾರಿ ಯತಿವರರಿಗೆಲ್ಲರ್ಗೆ

e್ಞÁನಾಮೃತವ ಕೊಟ್ಟು ರಕ್ಷಿಸುವೆ ಹರಿಯೇ 123

ಭವದಿ ಬಂಧಿಸಿಯೆನ್ನ ಭಾವಗತನಾಗಿದ್ದು

ದುಷ್ಕರ್ಮ ಮಾಡಿಸುತ ಫಲ ಕೊಡುವದೇಕೆ?

ನಿನ್ನ ಪಾದದ ಬಳಿಗೆ ಬರಲಿಕ್ಕೆ ಹಂಬಲಿಪ

ಎನ್ನ ಕೈಯಿಂದೆತ್ತಿ ಬಳಿಗೆ ಕರೆದೊಯ್ಯು 124

ಉಚ್ಛ್ವಾಸ ನಿಶ್ವಾಸ ರೂಪದಿಂದೊಳಹೊಕ್ಕು

ಆತ್ಮ ಸಂದರ್ಶನವ ಮಾಡುತ್ತ ವಾಯು

ಇಪ್ಪತ್ತಒಂದುಸಾಸಿರ ಮತ್ತೆ ಆರ್ನೂರು

ಹಂಸಮಂತ್ರದ ಜಪವ ಮಾಡುವನು ದಿನಕೆ 125

ಪರಶುರಾಮನು ರಾಜರೆಲ್ಲರನು ಸಂಹರಿಸಿ

ಭೂಮಿಯನು ನಕ್ಷತ್ರಮಂಡಲವ ಮಾಡಿ

ವಿಶ್ವಜಿತ್‍ಯಾಗದಲಿ ಕಶ್ಯಪರಿಗೀಯಲದ

ಕಾಶ್ಯಪಿಯ ನಾಮವನು ಭೂಮಿ ಪಡೆಯಿತಲಾ 126

ಕಶ್ಯಪರ ತಪದಿಂದ ರಾಜರಿಲ್ಲದ ಭೂಮಿ

ಭಾರದಿಂ ಕೆಳಗಿಳಿಯೆ ಊರುವಿಂದೆತ್ತಿ

ಅವಳ ಮೊರೆ ಕೇಳಿ ರಾಜವಂಶವನ್ನುದ್ಧರಿಸೆ

ಉರ್ವಿನಾಮವ ಪಡೆಯಿತು ಭೂಮಿ ನಿಜವು 127

ವ್ಯಾಸಪುತ್ರನದಾಗಿ ವ್ಯಾಸಪಿತ ನಾನಾಗಿ

ವ್ಯಾಸಭವನದ ಒಳಗೆ ಭದ್ರನಾಗಿದ್ದೆ

ಈ ಭವನದಿಂದೆನ್ನ ನಿನ್ನ ಭವನಕೆ ಒಯ್ಯು

ಅಮೃತಲೋಕದಿ ನಿನ್ನ ಸೇ, ವೆ ಗೈಯ್ಯುವೆನು 128

ರಾಧಿಕಾರಮಣನೆ ಮಧುರಾಪುರಾಧಿಪತಿ

ದಾನವಾಂತಕ ಕೃಷ್ಣ ಸತ್ಯಸ್ವರೂಪ

ವಿಶ್ವಜ್ಞ ಪೂಜಿತನೆ ರಕ್ಷಿಸೆನ್ನನು ಹರಿಯೇ

ಚಿತ್ತದಲಿ ನೆಲೆನಿಲ್ಲು ತಂದೆ ಕಾಪಾಡು 129

ಇಂದ್ರಾಣಿ ತಪಗೈದ ತಾನದಲಿ ಚ್ಯವನಮುನಿ

ವೇದಾದ್ರಿ ಎಂಬಲ್ಲಿ ತಪಗೈಯುತ್ತಿದ್ದ

ಸ್ವರ್ಣವರ್ಣವನ್ನಿತ್ತು ಕಣ್ಣಿತ್ತ ಸ್ವರ್ಣನದಿ

ಹರಿಯುತಿಹುದಿಲ್ಲಿಯೇ ಈಗಲೂ ನಿಜವು 130

ಪ್ರಕೃತಿ ಪ್ರಕೃತಿಯ ಭೇದ ಪ್ರಕೃತಿ ಜೀವದ ಭೇದ

ಜೀವ ಜೀವಗಳ ಭೇದ ಮೂರನೇಯದು

ಜೀವೇಶ ಭೇದವದು ಪ್ರಕೃತೀಶ ಭೇದವೆಂ

ದಿಹವು ಪ್ರಪಂಚದಲಿ ಪಂಚಭೇದಗಳು 131

***

ಉಡುಪಿ ಪರಿಸರದ ದೇವತೆಗಳು

ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ

ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು

ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ

ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132

ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ

ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ

ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು

ನಾಮದಿಂ ಬೆಳಗುವವು ಷಷ್ಠಿದಿನದಂದು 133

ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ

ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ

ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ

ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134

ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ

ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ

ಅe್ಞÁನದಂಧಕಾರದ ದಿಕ್ಕಿನಿಂದೆನ್ನ

ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135

ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ

ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು

ಪರಮಹಂಸಾಖ್ಯಯತಿಗಳ ಮಾನಸಹಂಸ

ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136

ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು

ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ

ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು

ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137

ಪರಶುರಾಮನು ರಾಮ ಪರಶು ರಾಮನು ಕೃಷ್ಣ

ರಾಮದಾಸನು ನಾನು ಕೃಷ್ಣದಾಸನಿಹೆ

ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು

ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138

ಉಡುಪಾನ್ವಯಜ ನಾನು ಉಡುಪಾನ್ವಯದ ನೀನು

ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ

ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ

ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139

ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ

ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ

ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ

ಅದರಿಂದ ನಿನ್ನನ್ನು ಶರಣು ಶರಣೆಂಬೆ 140

ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ

ಚೈತ್ರ ಮಾಸದ ನವಮಿಯ ದಿನದಲ್ಲಿ

ರಾಮೋತ್ಸವದ ಕಾಲ ಇದನರ್ಪಿಸುತ ನಾನು

ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141

***