Showing posts with label ಉಡುಪಿಯ ಕೃಷ್ಣ ಯನ್ನ ನುಡಿ ಲಾಲಿಸೋ sirivatsankita. Show all posts
Showing posts with label ಉಡುಪಿಯ ಕೃಷ್ಣ ಯನ್ನ ನುಡಿ ಲಾಲಿಸೋ sirivatsankita. Show all posts

Thursday 5 August 2021

ಉಡುಪಿಯ ಕೃಷ್ಣ ಯನ್ನ ನುಡಿ ಲಾಲಿಸೋ ankita sirivatsankita

 ..

kruti by ಚಿಕ್ಕೋಡಿ ಆಚಾರ್ಯ sirivatsankitaru (chikkodi acharyaru) 


ಉಡಪಿಯ ಕೃಷ್ಣ ಯನ್ನ ನುಡಿ ಲಾಲಿಸೋ ಪ


ಸಡಗರದಲಿ ನೀನು ಮಡದಿವೃಂದ ಬಿಟ್ಟು

ಕಡಲಪಯಣದಿಂದಲಿ ವಂದು ಬಿಡದೆ ಭಕ್ತರಿಗೆಲ್ಲ

ವಡೆಯನಾಗಿ ನೀನು ಷಡುರಸ ಅನ್ನವ ಕೊಡುತನಿಂತಿಹೆ 1


ಪ್ರಾಣಪತಿಯು ಅತಿ ಜಾಣನೆಂದೆನಿಶಿÉ ನೀ

ಕಾಣಿಸುವಿ ನರಪ್ರಾಣಿಗೆ

ಮಾಣವಕನೆ ನೀ ಜಾಣನೆಂದೆನುತಲಿ

ಧ್ಯಾನಮಾಡಿ ಮೋದಿಸುವರು 2


ಧರೆಯೊಳು ರಜತಪೀಠ ಪುರದೊಳೂ ನೆಲೆಸಿಪ್ಪ

ಸುರವೃಂದನುತ ಬೇಗ ಸಲಹೆನ್ನ

ವರಮಧ್ವ ಮುನಿನುತ ಸರಸಿಜಭವ ವಂದ್ಯ

ಶ್ರೀವತ್ಸಾಂಕಿತ ವೆಂಕಟಪತಿಯೇ 3

***