Showing posts with label ಏರಿಸಿ ಏರಿಸಿ ಮಾರುತ ಮ್ವತಧ್ವಜ krishnavittala. Show all posts
Showing posts with label ಏರಿಸಿ ಏರಿಸಿ ಮಾರುತ ಮ್ವತಧ್ವಜ krishnavittala. Show all posts

Monday 2 August 2021

ಏರಿಸಿ ಏರಿಸಿ ಮಾರುತ ಮ್ವತಧ್ವಜ ankita krishnavittala

ತಾತ್ವಿಕವಿವೇಚನೆ

ಏರಿಸಿ ಏರಿಸಿ ಮಾರುತ ಮ್ವತಧ್ವಜ

ಸಾರ ಸುಖಂಗಳ ನಿತ್ಯದಲುಂಬುವ

ಯೋಗ್ಯತೆ ಯುಳ್ಳವರೂ ಪ


ಈರನ ಮತವೇ ಸಾರವು ಶ್ರುತಿಗಳ

ಶೌರಿಯ ಮತವೇ ಈರನ ಮತ ಖರೆ

ದೂಡಿರಿ ಸಂದೇಹ ಅ.ಪ


ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ

ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ

ಅಲ್ಲವು ನುಡಿಯಿದು ಬ್ರಹ್ಮನು ಕಾರಣ

ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1

ಉಂಬುದು ಉಡುವುದು ಕಾಂತೆಯ ಸಂಗವು

ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ

ನಂಬಲನರ್ಹವೆ ಕಾರ್ಯಸುಕಾರಿಯ

ಹಂಬಲ ದುಃಖವು ಸುಖಗಳು ಎಲ್ಲಾ ಅನುಭವ ಸಿದ್ಧ ಖರೆ 2

ಒಂದೇ ತೆರವಿಹ ವಸ್ತು ದ್ವಯವಿರೆ

ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ

ಎಂದೀ ಒಂಟೀ ಬ್ರಹ್ಮನು ಭ್ರಾಂತಿಯ

ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3

ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ

ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ

ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ

ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4

ನಾನೇ ಬ್ರಹ್ಮನು ಎಂಬೀ e್ಞÁನವು

ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ

ತಾನೇ ಬ್ರಹ್ಮನು ಆಗಿರೆ ಭವದೊಳು

ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5

ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ

ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ

ಬ್ರಹ್ಮನು ನಿರ್ಗುಣ ನಂದವಿಹೀನನು

ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6

ವ್ಯಕ್ತಿತ್ವವು ತಾನಾಶವು ಆಹುದೆ

ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು

ಮುಕ್ತಿಯು ದುಃಖವಿವರ್ಜಿತ ಬರಿಸುಖ

ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7

ಸತ್ಯವ ನುಡಿವುದು ವೇದವು ಒಂದೆಡೆ

ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ

ಮೊತ್ತವ ನೂಕುತ ಕಿಚ್ಚಡಿ ವೇದಕೆ

ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8

ಬೌದ್ಧರು ಒಪ್ಪನು ಶ್ರುತಿಗಳ ದೇವನ

ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ

ವೈದಿಕ ವೇಷದ ಬೌದ್ಧನ ವಾದವೆ

ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9

ತರತಮ ಬಹುವಿಧ ಭೋಗವ ಮುಕ್ತಿಲಿ

ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು

ಸ್ಥಿರವೇ ಆಯಿತು ಇದರಿಂ ಮುಕ್ತಲಿ

ಪರಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10

ನಾಸ್ತಿಕ ವಾದವ ತಳ್ಳಿರಿ ಆಚೆಗೆ

ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು

ನಾಥನು ಓರ್ವನು ಇರಬೇಕಲ್ಲವೆ

ಆತನು ನೊಡಿಹ e್ಞÁನಿಗಳಿಲ್ಲವೆ ಪೊಗಳವೆ ಗೋತತಿಯು11

ಪ್ರಕೃತಿ ವಿಕಾರದ ಜಗವಿದು ವಿದಿತವೆ

ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು

ವಿಕಲ ವಿವರ್ಜಿತ ಸಕಲ ಗುಣಾರ್ಣವ

ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12

ನಿತ್ಯವು ಈತ್ರಯ ಸಿದ್ಧವು ಆದರೆ

ನಿತ್ಯ ಪರಸ್ಪರ ಸಂಬಂಧ ತ್ರಯ e್ಞÁನವೆ ಪುರುಷಾರ್ಥ

ಉತ್ತಮ ನೊಬ್ಬನು ಅಧಮರು ಇಬ್ಬರು

ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13

ಸರ್ವ ಸ್ವತಂತನು ಒಬ್ಬನೆ ಇರದಿರೆ

ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ

ಸರ್ವಗ ಶಾಶ್ವತ ಪೂರ್ಣಾ ನಂದನು

ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14

ಶುರುಕೊನೆ ಮಧ್ಯವು ಇದ್ದ ದೇವಗೆ

ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ

ಇರದಿರೆ ಸಕಲೈಶ್ವರ್ಯವು ಆತಗೆ

ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15

ಸುಳ್ಳಿರೆ ಜಗವಿದು ಪಾಲಿಪ ದೊರೆಯದ

ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು

ಎಲ್ಲಾ ಜಗವಿದು ನಿತ್ಯಾ ನಿತ್ಯವು

ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16

ನಿತ್ಯವು ಪ್ರಕೃತಿಯು ಜೀವರು ಈಶನು

ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು

ನಿತ್ಯ ಸುಖಂಗಳ ಬಯಸುವ ನಮಗವು

ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17

ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು

ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು

ಚೇತನ ನಿಚಯದ ಚೇತನ ಹರಿ ಇಹ

ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18

ದೋಷ ವಿದೂರ ಅಶೇಷ ಗುಣಾರ್ಣವ

ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ

ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು

ಲೇಶವು ಸಾಗದು ಸ್ವಾಮಿಯೆಂದು

ನಿಹ ಉಲ್ಲಾಸದಿ ಭಜಿಸುವುದು 19

ಪರಿಮಿತ ಶಕ್ತನು ದೇವನು ಇದ್ದರೆ

ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ

ಹರಿಗುಣವಗಣಿತ ಸಿಗ ಸಾಕಲ್ಯದಿ

ನಿರುಪಮ ಸುಖe್ಞÁನಾತ್ಮಕ ವಿಭುವರ ಅನಾದಿ ಸಿದ್ಧವಿದು 20

ಪ್ರಾಕೃತ ಗುಣಗಣ ವರ್ಜಿತ ದೇವನ

ಪಾಕೃತ ಕರಣವು ನೋಡುವ ದಾಗದು

e್ಞÁನ ಸುದೃಷ್ಠಿಗೆ ಗೋಚರನು

ಸ್ವೀಕೃತ ನಾದರೆ ಜೀವನು ಹರಿಯಿಂ

ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21

ತರತಮ e್ಞÁನದಿ ಗುಣ ಉತ್ಕರ್ಷವು

ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ

ಅರಿವುದು ಅತಿಪರಿ ಪಕ್ವದ ಭಕ್ತಿಯ

ತರುವುದು ಕ್ರಮದಲಿ ಸಿದ್ಧಿಸೆ ಭಕ್ತಿಯು ಮಾಧವ ಮೆಚ್ಚುವನು22

ವೇದಗಳಿಂದಲೆ ದೇವನು ವ್ಯಕ್ತನು

ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ

ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು

ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23

ಬಿಂಬನು ಹರಿ ಪ್ರತಿ ಬಿಂಬನು ಜೀವನು

ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು

ಉಂಬುತ ಮುದದಿಂ ಸುಖದುಃಖಂಗಳ

ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24

ಮೆಚ್ಚುಲು ಮಾಧವದಾವುದಸಾಧ್ಯವು

ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು

ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ

ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25

ಹರಿ ಪರ ಮೋಚ್ಚನು ವರಸಮರಿಲ್ಲವು

ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು

ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು

ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26

ಸಾಮನು ಸರ್ವರ ಬಿಂಬನು ಸರ್ವಸು

ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು

ಭೂಮನು ಭಕ್ತ ಪ್ರೇಮಿಯು ಸದ್ಗುಣ

ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27

ಸಿರಿ ವಿಧಿ ಪರಿಸರ ವಿಪಶಿವ ಪ್ರಮುಖರು

ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು

ಉರುಗಾಯನ ಜಗದೊಳ ಹೊರವ್ಯಾಪ್ತನು

ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28

ತರತಮ ಪಂಚಸುಭೇದವು ನಿತ್ಯವು

ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು

ಅರಿಯರು ಯಾರೂ ಇವನೇ ವಲಿಯದೆ

ಪುರುಷೋತ್ತುಮ ಸಾಕಲ್ಯದವಾಚ್ಯನು

ಎಂದು ಡಂಗುರ ಹೊಡೆಯುತ 29

ಗುರುವಿನ ದ್ವಾರವೆ ಹರಿತಾ ವಲಿಯುವ

ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು

ಗುರುಗಳು ಹಿರಿಯರು ಎಲ್ಲಾ ಕ್ರಮದಲಿ

ಮೂರೋಂದು ತ್ಯಾಗವ ಘಳಿಸದೆಲೆಂದಿಗು

ಮಧ್ವರಿಗೊಂದಿಸಿ ಮುದದಿ 30

ಅನುಭವವಿಲ್ಲದ e್ಞÁನವು ವಣವಣ

ಮನದೊಳು ಗುಣಿಸಿರಿ ತಿಳಿವಿನ ತಿರುಳನು

ಸಾಧನೆ ಇದು ಖರೆಯ

ಚಿನುಮಯ ನೊಲಿಸಲ್ ಮನೆಧನ ಬೇಡವು

ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31

ಕಲಿಯುಗವಿದು ವರ ಸುಲಭದಿ ಸಾಧನೆ

ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ

ವಳದಾರಿಯು ಸರಿ ಕ್ರಮದಿಂ ಪಾಡಲು

ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32

ಕವಿಗುರು ರಾಜರ ಚರಣದಿ ಬಾಗುತ

ಪವನ ಮತಾಂಬುಧಿ ಸೋಮನು ಜಯಮುನಿ

ಹೃದಯಗ ವಾಯುವಲಿ

ಅವಿರತ ನಲಿಯುವ ಶ್ರೀ ಕೃಷ್ಣವಿಠಲನು

ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33

****