Showing posts with label ಕಂಡೆ ನಾ ಕಣ್ಣೆದುರಲಿ ಕೃಷ್ಣನಾ uragadrivasa vittala. Show all posts
Showing posts with label ಕಂಡೆ ನಾ ಕಣ್ಣೆದುರಲಿ ಕೃಷ್ಣನಾ uragadrivasa vittala. Show all posts

Monday 2 August 2021

ಕಂಡೆ ನಾ ಕಣ್ಣೆದುರಲಿ ಕೃಷ್ಣನಾ ankita uragadrivasa vittala

ಕಂಡೆ ನಾ ಕಣ್ಣೆದುರಲಿ ಕೃಷ್ಣನಾ ಪ


ಕಂಡೆ ನಾನೀಗ ಬ್ರಹ್ಮಾಂಡದೊಡೆಯ ತಾ

ತಾಂಡವಾಡಿ ಭೂಖಂಡದಿ ಮೆರೆದನ ಅ.ಪ


ಜಯಮುನಿಹೃತ್ಕುಮುದಾಲಯದಿ ಸುಲೀ-

ಲೆಯಾಡುತಿಹ ವಾಯ್ವಂತರ್ಗತ ಕೃಷ್ಣ

ಜಯಜಯಜಯ ಶ್ರೀ ವಿಜಯಸಾರಥಿ ಭವ-

ಭಯಹಾರಿ ಭಕ್ತರಭಯಪ್ರದಾಯಕ

ದಯವನಧಿಯೆ ಮನದಾಮಯ ಕಳೆದು ನಿ-

ರ್ಭಯ ದೊಳು ಕಾಯುವ ಜಗದೊಡೆಯಾ

ಧೇಯವು ನಿನಗಿದು ಸದ್ಭಕುತರಾಶ್ರಯ

ತಟಿತಕೋಟಿ ನಿಭಕಾಯ ಶ್ರೀಭೂಕಾಂತ

ದೈತ್ಯಕೃತಾಂತ ಜಗದಾದ್ಯಂತ

ನಿಂತು ಜೀವರಾದ್ಯಂತ ಕೃತ್ಯಗಳ್

ಸಂತತನಡೆಸುವ ಕಂತುಪಿತನ ನಾ 1


ಶ್ರೀಕಳತ್ರ ಪರಲೋಕೈಕನಾಥ ಜಗ-

ದೇಕವಂದ್ಯನೆ ನರಲೋಕದ ಕ್ರೀಡೆಯೊಳ್

ಭೀಕರಿಲ್ಲದೆ ಬಕಶಕಟಾಕಂಸಾದಿಗಳ

ಏಕಘಳಿಗೆ ಯೊಳು ನೀ ಕೊಂದು ನಲಿದು ನಿಂದೆ

ಪಾಕಶಾಸನ ದಿವೌಕಸವಂದ್ಯನೆ

ಪ್ರಕಟನಹುದೊ ನಿಪ್ಕುಟಿಲರಿಗೆ

ದಿಟ್ಟತನದಿ ಹೃತ್ತಟದಲಿ ಧೇನಿಸೆ

ತಟಿತದಂದದಲಿ ಒಳಗೇ ಭಟಜನರುಗಳಾ

ಕಂಟಕದೆಡರಾಕಟಕಪರಿಹರ

ವಿಟ್ಟು ಕರುಣಾಕಟಾಕ್ಷದಿಂದ ಸಂತ

ವಿಟ್ಟು ನಟಿಸುವಾ ಸೃಷ್ಟಿಕರ್ತನ ನಾ 2


ರಂಗಾ ನಿನ್ನವರುಗಳಿಂಗಿತದಂತೆ ಮಾ-

ತಂಗವರನ ನಿನ್ಹಾಂಗೆನಡೆಸಿ ಶುಭಾಂಗ ಸದ್ಭಕ್ತಕೃ-

ಪಾಂಗ ಮಂಗಳಾಂಗ ತುಂಗಮಹಿಮ ಸ-

ಪ್ತಾಂಗ ಏಕೋನವಿಂಶತಿ ಮಂಗಳವಿಶ್ವನೆ

ಕಂಗಳಲಿದ್ದು ಜಗಂಗಳ ಕಾರ್ಯಂಗಳಿಗೀವೆ

ಹಿಂಗಿಸಿ ಅಂಗದ ಕಾರ್ಯವ ನೀ ಮನ

ಕಂಗಳಿಗಿತ್ತು ಎಂದಿಗು ಪೊರೆವಾ

ಮಂಗಳ ಪ್ರಾಜ್ಞಭೋಗಂಗಳ ಪ್ರಜ್ಞ ಆಗದುಸೂಜ್ಞ

ರಂಗನಾಥ ಹೃದ್ರಂಗದಿ ನಲಿಯುತ

ಹಾಂಗೆ ನಿಂದಿಹ ಈ ಶ್ರೀವೇಂಕಟೇಶನ ನಾ 3

****