Showing posts with label ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ vaikunta vittala. Show all posts
Showing posts with label ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ vaikunta vittala. Show all posts

Sunday 1 August 2021

ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ ankita vaikunta vittala

..

kruti by ಬೇಲೂರು ವೈಕುಂಠ ದಾಸರು belur vaikunta dasaru


ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗ

ದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ ಪ


ನೆಲೆಯಾದುದಿಲ್ಲ ತಾಯುದರ ಬಾಲತ್ವವಿದು

ನೆಲೆಯಾದುದಿಲ್ಲ ಜವ್ವನವೆಂಬುದೂ

ನೆಲೆಯಾದುದಿಲ್ಲ ಜರೆಯು ಚಕ್ಷುರಾಜಿಗಳು

ನೆಲೆಯಾಗಬಲ್ಲದೆ ಒಡಲು ನಿನಗೆ ಮರುಳೆ 1


ಹುಟ್ಟಿದನಳಿದನೇಕೆ ಜೀವ ನಿಜ ಜನನಿಯಲಿ

ಹೊಟ್ಟೆಯಲಿ ಹೊತ್ತು ಹೆತ್ತುದಕೈಸಲೆ

ಕೊಟ್ಟುಕೊಂಡುದಕೆ ಪಡೆದಿತ್ತು ಸುತರೆಂದೆನಿಸಿ

ನೆಟ್ಟನೈದುವರು ನಿನಗೇನಹರು ಮರುಳೆ 2


ನೀನಳಿದ ಬಳಿದ ಸತಿಸುತರಿಗೇನ್ಹೇಳುವೆ

ಏನಹರು ನಿನಗವರು ಮೃತವಾದ ಬಳಿಕಾ

ದೀನನಹೆ ಬಯಲಮಮತೆಗಳೆಂದು ತಿಳಿದುಕೊ

ನೀನೆತ್ತಲವರೆತ್ತಲಿಹರವರು ಮರುಳೆ 3


ಮಗನಾವ ತಂದೆಯಾವನು ಜೀವ ಜೀವರಿಗೆ

ಮಗನು ತಂದೆಯು ಕರ್ಮವಾಸನೆಗಳಾ

ಬಗೆಯಿಂದಲೀಶ್ವರನು ಜೀವಕೋಟಿಗಳ ಸೃಜಿಸೆ

ಜಗದೊಳಾಡುವರು ನಿನಗೇನಹರು ಮರುಳೆ 4


ಅತಿಭಕ್ತನೆಂದು ವೈಕುಂಠ ವೇಲಾಪುರದ

ಪತಿ ಅರ್ಜುನಗೆ ನಿರೂಪಿಸಿದರ್ಥವ

ಮತಿಗೆಟ್ಟು ಬಿಟ್ಟು ನಾನಾ ದೈವದಡಿಗಳಿಗಾ

ನತನಾಗಿ ಸಂಸಾರಿಯ[ಹೆ] ಇದೇಕೆ ಮರುಳೆ 5

***