Showing posts with label ಕಾಂತಿಯಿಂದಿರುವ ಚಕ್ರ ಪದುಮ ಗದೆ ಪ್ರಥಮ ವಚನ vijaya vittala. Show all posts
Showing posts with label ಕಾಂತಿಯಿಂದಿರುವ ಚಕ್ರ ಪದುಮ ಗದೆ ಪ್ರಥಮ ವಚನ vijaya vittala. Show all posts

Thursday 17 October 2019

ಕಾಂತಿಯಿಂದಿರುವ ಚಕ್ರ ಪದುಮ ಗದೆ ಪ್ರಥಮ ವಚನ ankita vijaya vittala

ಪ್ರಥಮ ವಚನ
ಕಾಂತಿಯಿಂದಿರುವ |
ಚಕ್ರ ಪದುಮ ಗದೆ |
ಅದರೊಳಗೆ ಬಿದ್ದಿರುವ
ಪರಮಪವಿತ್ರ ತ್ಯುಬುಗಳ ತೆಗೆದು |
ನೇತ್ರದೊಳಗೊತ್ತಿ | ಪರಿಮಳವಾದ ಗಂಧಗಳಿಂದ ಅಲಂಕೃತ |
ಸಿರಿದೇವಿ ವರದೊಡೆಯ ಮೇಲಿದ್ದು | ಕರಕಮಲದಲೊತ್ತುವ |
ದಿನವೆ ಪರಮ ಪುಣ್ಯೋದಯ

ಪಾದ |
ಸರಸೀರುಹ ಸರಸದಿಂ ಕೊಂಡಾಡಿ |
ನೆರಳಿ ಮರಳೀ ಸೌಖ್ಯದಾನಂದ |
ಶರಧಿಯೊಳು ಮುಣುಗಿ ಮುಣುಗಿ ಏಳುತ |
ಸೌಖ್ಯದಾನಂದ ಭಕ್ತಿಭಾವಗಳಿಂದ
ಕರುಣಾಳು ಕೃಷ್ಣ ತ್ವರಿತದಲಿ ತನ್ನ ಸೇವಕ ಜನರೊಳಗೆ |
ಸೇರಿಪ್ಪ ನಾ ಅರಿಯನು ನಾನೊಂದು ಸ್ತೋತ್ರ ಮಾಡುವದಕ್ಕೆ |
ವರವ್ರಜ ತರುಣಿಯರು ಏನು ಪುಣ್ಯವ ಮಾಡಿದರೊ |
ಸರುವದಾ ಹರಿಯನ್ನು ಕಾಣುವರು ಕಂಗಳಲಿ |
ಪರಿಹಾಸ್ಯ ನುಡಿಯಲ್ಲ | ಪರಮ ಪವಿತ್ರರಿಗೆ ದೊರೆ |
ಸಿರಿ ವಿಜಯವಿಠ್ಠಲನು | ಕರವಿಡಿದು ಎನ್ನಭೀಷ್ಟವನಿತ್ತು |
ಪರಿಪಾಲಿಸಬೇಕೆಂದು ಭಕ್ತ ಕೇಳಿದನು 1

ದ್ವಿತೀಯ ವಚನ
ಜಲಜನಾಭನÀ ರಥದ ದಡದ ಮೇಲೆ ನಿಲ್ಲಿಸಿ |
ಜಲದೊಳಗೆ ತಾ ಮುಳುಗಿ ಅಕ್ರೂರ ಕಣ್ಣು ತೆರೆಯೆ |
ಕಲುಷವರ್ಜಿತನಾದ ಕೃಷ್ಣ |
ಹಲಧರನ ಸಹ ಮೇಳ ಸಂಭ್ರಮದಿ | ಜಲದೊಳಗೆ ತಾ ಕಂಡು |
ನಾ ಪೇಳಿದ ಮಾತು ನಡಿಸಿ |
ಬಲವಂತದಲಿ ಬಿದ್ದ ಭವರೋಗ ವೈದ್ಯನ ಮಾತೆ |
ಲಲನಾಮಣಿಗೆ ಏನು ಹೇಳುವೆನು |
ಸುಲಭವಾಗಿ ಎಮಗೆ ಅಭೀಷ್ಟಪ್ರದವಿದು |
ಎಂದೆನುತ ತಂದೆ ನಂದಗೋಪನು |
ಯೋಚಿಸಿ ಮನದಲಿ ಚಿಂತೆಯಗೊಂಡು |
ಹನುಮೇಶ ವನಜಾಕ್ಷ | ಘನಮಹಿಮ ಎನ್ನ ಮನದ ಚಿಂತೆಯನು
ಹನನವ ಮಾಡಿ ಎನ್ನ ಕೈಪಿಡಿಯಲಾಗದೆ ಈಗ ಎನುತ |
ಮೇಲೇಳೆ ಸನಕ ಸನಂದನ ಸನತ್ಕುಮಾರ ಸಹ |
ವನಜ ಸಂಭವ ಜನಕ ವೈಕುಂಠಪತಿ ಕೃಷ್ಣ |
ಕನಕ ರಥದ ಮೇಲೆ ನಿಂತಿದ್ದು ತಾ ಕಂಡು |
ಕರವೆರಡು ಜೋಡಿಸಿ | ಭರದಿ ಭಕ್ತಿಯಗೊಂಡು |
ನರಜನ್ಮ ಹುಳು ನಿನ್ನ ಮಹಿಮೆಗಳ ಅರಿಯದೆ |
ಜಲದೊಳಗೆ ನೀ ಬಿದ್ದಿ ಎನುತಲೀ ಯೋಚಿಸಿದೆ |
ಚರಣದ ಮಹಿಮೆಗಳ |
ಮರಣದಲಿ ಅಜಮಿಳಗೆ
ದಯಮಾಡ ಬೇಕೈ |
ಅರ್ಭಕ ಪ್ರಹ್ಲಾದ ನಿಜಮುನಿ ಶುಕಾಚಾರ್ಯರಂತೆ |
ಅಪ್ರಾಕೃತ ಅಕಲಂಕ ಚರಿತ ಅಮರೇಂದ್ರ ವಂದಿತ |
ಪಾಲಾ ವಿಜಯನ ರಥವನ್ನು ಸಾರಥಿಯಾಗಿ
ದಯಾಸಮುದ್ರ ವಿಜಯವಿಠ್ಠಲನೇ2

ತೃತೀಯ ವಚನ
ಅರವಿಂದನಾಭ ಕೃಷ್ಣ ಅಖಿಲಜನ ಪರಿಪಾಲ | ಕೃಪಾ ಸಮುದ್ರ |
ಕಳತ್ರ |
ಪರಿಪಾಲಿಸಬೇಕೆನ್ನ | ಪಾವನ ಚರಿತ್ರ |
ಸುರಪತಿಗೆ ಅಸುರರ ಬಲನೀಗಿ ಆ | ವಿರಂಚಿ ಬಳಿಗೆ |
ಶರಣೆಂದು ವರವೊಂದು ಕೇಳಿದೆ ವೈಕುಂಠಪತಿ ಕೃಷ್ಣ |
ಕಂಟಕ ಕಂಸಾದಿಗಳ ಗೆಲಿದು |
ಪಾದ |
ಸರಸಿಜದೊಳು ಚಿತ್ತವಿರುವಂದದಲಿ |
ಪರಮ ದಯಾಕರ ನಿನ್ನ ಮಹಾ ಮಹಿಮೆಗಳ |
ಗರ್ವಿಷ್ಠನಾಗಿ ಮಲಗಿದವನಲ್ಲಿ |
ಕೇಳ್ವ | ತ್ವರಿತದಲಿ ದಯಮಾಡಿ |
ಭರದಿ ಪಾಲಿಸಬೇಕೆನ್ನ | ಭಕ್ತಜನ ವತ್ಸಲನೆ ಎನಲಾ ಮಾತಿಗೆ |
ಇನ ಇಂದಿರೆ ಅರಸ |
ಹನುಮೇಶ ಕನಕಮಯವಾದ ಪೀತಾಂಬರ | ಜನಿವಾರ |
ಅನೇಕ ಅತರಿಗಳ ಗೆಲಿವ ಕನಕಮಯ | ಕಿರೀಟ ಚತುರ್ಭುಜ |
ಕಟಕ ರತ್ನಮಯದುಂ | ಗುರ
ವಾಹನ ಚಕ್ರವರ್ತಿಗೆ ತನ್ನ ನಿಜರೂಪವ3

ಚತುರ್ಥ ವಚನ
ಆನಂದತೀರ್ಥ ಮುನಿವಂದ್ಯ | e್ಞÁನಿಗಳ ವಲ್ಲಭ |
ದೀನಜನ ಮಂದಾರ ನಾ | ನಿನ್ನ ಮೊರೆಹೊಕ್ಕು ಧೇನಿಸಲರಿಯೆ |
ಆನೆಯನು ಆದರದಿ ಕಾಯ್ದ ಶ್ರೀನಿವಾಸ |
ಸಾನುರಾಗದಿ ಪ್ರಹ್ಲಾದಗೊಲಿದ ಶ್ರೀನಿಧಿ ನರಸಿಂಹ |
ಅನಾದಿ ಕಾಲದಿ ತಂದೆ ಬಂಧು ಬಳಗವು ಎಂದೆ |
ಮಾನಿನಿ ದ್ರೌಪದಿ ಮೊರೆ ಇಟ್ಟಾಗ ಧ್ವನಿ ಕೇಳಿ |
ಮಣಿ ಲಕುಮಿಗ್ಹೇಳದೆ |
ಆನಂದಮಯನು ಅಕ್ಷಯವಿತ್ತು ಆಗ ಪರಿಪಾಲಿಸಿದಿ ಅದರಂತೆ |
ಮಾನಹೀನನೆಂದು ನಿರಾಕರಿಸದೆ | ಧ್ಯಾನಕ್ಕೆ ಒಳಗಾಗಿ |
ಮೌನಿಜನರನು ಕಾವ ಕ್ಷೋಣೀಶ ಮಾಣಿಕ್ಯ ಮಕುಟ ಕುಂಡಲಧರ |
ಸಿರಿ ತುಳಸಿ |
ಪರಿಮಳ ಸಿರಿಗಂಧ ಉದರದಲಿ ಬೆಳಗುವ |
ಉಪೇಂದ್ರ ನಾಮ ಕೃಷ್ಣ ಉರಗೇಶಶಯನಾ |
ನಿನ್ನ ದಾಸರದಾಸನೆಂದೆನುತ | ಕಾಣಸಿ ನಿನ್ನ ನಿಜರೂಪ |
ನಿನ್ನ ಸ್ತೋತ್ರ ಮಾಡುವ ಭಕ್ತಗಣದೊಳಗೆ ನಿಲ್ಲಿಸೊ |
ನಿನ್ನ ಮತ್ತೊಂದು ಪದಾರ್ಥ ಕೇಳುವವನಲ್ಲ |
ತೀರ್ಥ ತೀರ್ಥಗಳಲ್ಲಿ ಮುಳುಗಿ ಬಂದವನಲ್ಲ |
ಸಾರ್ಥಕವಾದಂಥ ಕೃತ್ಯ ಮಾಡುವನಲ್ಲ |
ಸಾಧುಜನಸಂಗದಲಿ ಸೇರಿ ಪಾಡಿದವನಲ್ಲ |
ಈ ನುಡಿ ಸತ್ಯವೇ ಲೇಸು ಪುಸಿಯಲ್ಲ | ಮಲ್ಲಮಲ್ಲರ ಗೆಲಿದ
ಮಾಧವನು ನೀನಲ್ಲದೆ ಇನ್ನೊಂದು ದೈವವಿಲ್ಲದ ಮಧ್ವ
ಮುನಿ ಹೃದಯಾಟ್ಟ ಪೀಠದೊಳು ವಾಸ ಮಾಡುವ ದೊರೆ
ಉದ್ಧರಿಸಬೇಕೆನ್ನ ವಿಜಯವಿಠ್ಠಲನೆ 4

ಪಂಚಮ ವಚನ
ಕರಿಯಬೇಕೆನ್ನ ಹಿರಿಯರೂ |
ಇಡಲಾಗದ ಮನಸು ಸರ್ವದಾ ನಿನ್ನ |
ಚರಣಾರವಿಂದ ದ್ವಂದ್ವದಲಿ | ಭರದಿಂದ ಮುದ್ರೆಯನಿಟ್ಟ |
ತುತಿ ಮಾಡುವೆ ನಿನ್ನ |
ಮುಚಕುಂದ ವರದ ನಿತ್ಯಾನಂದ ವಿಗ್ರಹ |
ಸರಸಿರುಹಾಕ್ಷ ಸಜ್ಜನ ಪರಿಪಾಲಾ |
ಪೂಜ್ಯ ಅವಗುಣ ವರ್ಜ ಅಕಳಂತ |
ಮಹಾನುಭಾವ ಮಧ್ವೇಶ |
ಈ ನುಡಿಯು ಪುಸಿಯಲ್ಲ |
ಕರ ಪಿಡಿದು ಕಾಯ್ವರನ ಕಾಣೆ
ಚರಣಾವಿಂದವನು ಭಜಿಪ ವೀಣೆ | ಈ
ಕ್ಷೋಣಿಯೊಳಗೆನ್ನ ನರಜನ್ಮವು ಬಾರದೆ ಪರಿಪಾಲಿಸಬೇಕೆನ್ನ |
ಪರಮ ಪವಿತ್ರ ಪಂಕೇರುಹನೇತ್ರ ಸಂಕಟಗಳ ಕಳೆದು |
ಸೌಖ್ಯಪದ ವೈಕುಂಠದೊಳಗೆನ್ನ ನಿಲ್ಲಿಸೊ |
ಭರದಿಂದ ನಿನ್ನ ನಾಮದ ಭಂಡಾರ ಕದ್ದ ಕಳ್ಳನೆನೆಸಿ |
ಅರವಿಂದನಾಭ ನಿನ್ನ ಅಮರನೇ ವೈಕುಂಠ |
ಕಾರಾಗೃಹದೊಳಗೆ ವಾಸ ಮಾಡಿಸು ದೇವ ಕೋಟಿ |
ವರುಷಕೆ ಇದುವೆ ಎನಗೆ ಹರುಷ ಆನಂದಮಯ |
ಇನ್ನೋರ್ವನಿಲ್ಲ ವಿಜಯವಿಠ್ಠಲನೇ 5
********