Showing posts with label ಕೀರ್ತನೆಯ ಮಾಡಿ ಕೈವಲ್ಯ ಪಡೆವರು ಜನರು ಹರಿ neleyadikeshava. Show all posts
Showing posts with label ಕೀರ್ತನೆಯ ಮಾಡಿ ಕೈವಲ್ಯ ಪಡೆವರು ಜನರು ಹರಿ neleyadikeshava. Show all posts

Wednesday 1 September 2021

ಕೀರ್ತನೆಯ ಮಾಡಿ ಕೈವಲ್ಯ ಪಡೆವರು ಜನರು ಹರಿ ankita neleyadikeshava

 ..

ಕೀರ್ತನೆಯ ಮಾಡಿ ಕೈವಲ್ಯ ಪಡೆವರು ಜನರು - ಹರಿ ಪ


ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ


ಹಲುವು ಮಾಯಗಳಿಂದ ಹಂಬಲಿಸಿ ಕೆಡಬೇಡಬಲವಂತರೊಡನೆ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1


ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2


ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3


ವಿಟಜನರ ಕೂಡಿ ವೇಶ್ಯಾವಾರ್ತೆಗಿಳಿಯಬೇಡಸಟೆ ಹೇಳಿ ಸಂಸಾರ ಕೆಡಿಸಬೇಡತುಟಿ ಮೀರ್ದ ಹಲ್ಲಂತೆ ದೂತ ಎಂದಿಗು ಬೇಡನಿಟಿಲನೇತ್ರನು ನಾನೆನುವ ಜಂಭ ಬೇಡ 4


ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5

***