ಕೃಷ್ಣ ಎಂಥಾದ್ದೋ ನಿನ್ನ ಕರುಣ
ಶಿಷ್ಯ ಜನರುದ್ದೇಶಬಂದ್ಯೊ ನೀ ಕರುಣ
ದುಷ್ಟಜನರ ಮಾಡಿದ್ಯೊ ನೀ ಮರ್ದನ
ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣ ll 1 ll
ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ
ದಿಟ್ಟತನದಲಿ ನಂದಗೋಕುಲದಿ ಬೆಳೆದ್ಯೊ
ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ
ಕುಟ್ಟಿ ಕಂಸಾಸುರನ ಪ್ರಾಣವೆಳೆದ್ಯೊ ll 2 ll
ಮೊಲಿಯನುಂಡು ಕೊಂಡಿ ಪೂತನಿ ಪ್ರಾಣ
ಕಾಲಿಲೊದ್ದು ಕೊಂದ್ಯೋ ಶಕಟಾಸುರನ
ಬಾಲತನದಲಿ ಕೆಡಹಿದ್ಯೊ ಮಾವನ
ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ ll 3 ll
ತುರುಗಳ ಕಾಯ್ದ್ಯೊ ನೀ ಗೋವಿಂದ
ಬೆರಳೆಲಿತ್ತಿದ್ಯೊ ಹಿರಿಯ ಮುಕುಂದ
ಮರುಳು ಮಾಡಿದ್ಯೊ ಗೋಪಿಕೇರ ವೃಂದ
ಹರುಷಗೈಸಿದೆ ಅನೇಕ ಪರಿಯಿಂದ ll 4 ll
ಹಾಲು ಬೆಣ್ಣೆ ಕದ್ದು ತಿಂದು ನಿನ್ನಾಟ
ಬಾಲಗೋಪಾಲರ ಕೂಡಿ ನಿನ್ನೂಟ
ಚೆಲುವ ನಾರೇರ ನೋಡುವ ನಿನ್ನೋಟ
ಒಲಿದು ಕುಬ್ಜಿಯ ಬೆನ್ನ ಮಾಡಿದ್ಯೊ ನೀಟ ll 5 ll
ಗುರುಮಗನ ತಂದುಕೊಟ್ಯೋ ನೀ ಪ್ರಾಣ
ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ
ಶರಣಾಗತರ ವಜ್ರಪಂಜರ ಪೂರ್ಣ
ವರಮುನಿಗಳಿಗಾಗಿಹೆ ನೀ ನಿಧಾನ ll 6 ll
ಒಲಿದು ಪಾಂಡವರಿಗಾದಿ ಸಹಕಾರಿ
ಬಲವ ಮುರಿದ್ಯೊ ನೀ ಕೌರವರ ಸಂಹಾರಿ
ಹಲವು ಪರಿ ಆಟ ನಿನ್ನದೊ ಶ್ರೀ ಹರಿ
ಸಲಹುತಿಹೆ ಮಹಿಪತಿಗನೇಕ ಪರಿ ll 7 ll
***
ಕೃಷ್ಣ ಎಂಥಾದೋ ನಿನ್ನ ಕರುಣಿ
ಶಿಷ್ಟ ಜನರುದ್ದೇಶ ಬಂದ್ಯೊ ನೀ ಕರುಣಿ
ದುಷ್ಟಜನರ ಮಾಡಿದ್ಯೊ ನೀ ಮರ್ದನಿ
ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣಿ ||೧||
ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ
ದಿಟ್ಟತನದಲಿ ನಂದಗೋಕುಲದಲಿ ಬೆಳೆದ್ಯೊ
ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ
ಕುಟ್ಟಿ ಕಂಸಾಸುರನ ಪ್ರಾಣವಳಿದ್ಯೊ ||೨||
ಮೊಲಿಯನುಂಡು ಕೊಂದಿ ಪೂತನಿ ಪ್ರಾಣ
ಕಾಲಿಲೊದ್ದು ಕೊಂದಿ ಶಕಟಾಸುರನ
ಬಾಲತನದಲಿ ಕೆಡಹಿದ್ಯೊ ಮಾವನ
ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ ||೩||
ತುರುಗಳ ಕಾಯ್ದ್ಯೊ ನೀ ಗೋವಿಂದ
ಬೆರಳಲೆತ್ತಿದ್ಯೊ ಗಿರಿಯ ಮುಕುಂದ
ಮರುಳು ಮಾಡಿದ್ಯೊ ಗೋಪಿಕೆಯರ ವೃಂದ
ಹರುಷಗೈಸಿದೆ ಅನೇಕ ಪರಿಯಿಂದ ||೪||
ಹಾಲುಬೆಣ್ಣೆ ಕದ್ದು ತಿಂಬುವ ನಿನ್ನಾಟ
ಬಾಲಗೋಪಾಲರ ಕೂಡಿ ನಿನ್ನೂಟ
ಚೆಲುವ ನಾರೇರ ನೋಡ್ವ ನಿನ್ನ ನೋಟ
ಒಲಿದು ಕುಬ್ಜೆಯ ಬೆನ್ನ ಮಾಡಿದ್ಯೊ ನೀಟ ||೫||
ಗುರುಮಗನ ತಂದುಕೊಟ್ಯೊ ನೀ ಪ್ರಾಣ
ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ
ಶರಣಾಗತರ ವಜ್ರಪಂಜರ ಪೂರ್ಣ
ವರಮುನಿಗಳಿಗಾಗಿಹೆ ನೀ ನಿಧಾನ ||೬||
ಒಲಿದು ಪಾಂಡವರಿಗಾದಿ ಸಹಕಾರಿ
ಬಲವ ಮುರಿದ್ಯೋ ನೀ ಕೌರವರ ಸಂಹಾರಿ
ಹಲವು ಪರಿ ಆಟ ನಿನ್ನದೊ ಹರಿ
ಸಲಹುತಿಹೆ ಮಹಿಪತಿಗನೇಕ ಪರಿ ||೭||
***********