Showing posts with label ಚರಿತೆ ನಿನ್ನದು ಪೊಗಳಳಲವೇ ಪರಮ venkatesha kalyana ವೆಂಕಟೇಶ ಕಲ್ಯಾಣ krishnavittala. Show all posts
Showing posts with label ಚರಿತೆ ನಿನ್ನದು ಪೊಗಳಳಲವೇ ಪರಮ venkatesha kalyana ವೆಂಕಟೇಶ ಕಲ್ಯಾಣ krishnavittala. Show all posts

Monday 2 August 2021

ಚರಿತೆ ನಿನ್ನದು ಪೊಗಳಳಲವೇ ಪರಮ venkatesha kalyana ವೆಂಕಟೇಶ ಕಲ್ಯಾಣ ankita krishnavittala

 venkatesha kalyana ವೆಂಕಟೇಶ ಕಲ್ಯಾಣ

ಚರಿತೆ ನಿನ್ನದು ಪೊಗಳಳಲವೇ ಪರಮ ಪುರುಷ

ಶ್ರೀವೆಂಕಟ ದೊರೆಯೆ ಪ


ಪರಿಸರ ವಿಧಿಗಳ ಕುಣಿಸಿ ಆಡುವಂಥ ಸರಸದಿಂದಲಿ

ವಿಶ್ವಸೃಷ್ಟಿಯಗೈದಂಥ

ನಿರುತ ಉರದಲ್ಲಿದ್ದು ಚರಣಸೇವಿಸುವಂಥ ವರಸಿರಿ

ತಾನಿನ್ನು ಅರಿಯೆನು ಎಂತೆನಲು ಅ.ಪ

ಸುರವರ ನಾರೆಂದು ಅರಿಯೆಭೃಗುವು ತಾನು

ಜರಿದಂ ಪಾರ್ವತಿ ಪತಿ ಹರ ವಿಧಿಗಳೆನೆಲ್ಲ

ಬರುವ ಬಗೆಯ ಕಂಡು ಸುರತ ಕೇಳಿಯಸೋಗು

ಧರಿಸಿ ಮಲಗಿರಲಂದು ಜರಿದುವದಿಯಲು ವಕ್ಷ

ಹರಿಸಿ ದುಗುಡವ ಮುನಿಗೆ ವರಸಿ ಚರಣದ ಕಣ್ಣು

ತರಿದು ಸಾಧನೆ ಅಧಿಕ ಸಿರಿಗೆ ಪ್ರೇರಿಸಿ ಕೋಪ

ತೊರೆದು ಧಾಮವ ಬೇಗ ಧರೆಗೆ ಇಳಿಯುತ ಬಂದು

ಗಿರಿಯ ಹುತ್ತವ ಸೇರಿ ಸುರಿಸೆ ವಿಧಿಯು ಪಾಲು

ಕರುಣದಿಂದಲಿ ಕೊಂಡು ದೊರೆಯ ಸೇವಕ ಗೋವ

ಹರಿಸೆ ಕೊಡಲಿಯ ನೆತ್ತೆ ಶಿರವನೊಡ್ಡುತ ರಕ್ತ

ಧಾರೆ ಚಿಮ್ಮಿಸಿನಭದಿ ಬರಲು ಚೋಳನು ದೊರೆಗೆ

ಕ್ರೂರ ಶಾಪವನಿತ್ತು ಕರೆಸಿಗುರುಗಳಮದ್ದು

ತರಲು ಹೊರಟದೇವ ನಿರುತ ಚಿನ್ಮಯಗಾತ್ರ

ಉರು ವೈದ್ಯ ಧನ್ವಂತ್ರಿ ನಿರುಪಮ ನಾಟಕದೆ 1

ಸಾಮ ವಿಶ್ವದ ಸಾರ್ವಬೌಮ ಬೇಡಿದೆ ರಚಿಸೆ

ಧಾಮ ಕ್ರೋಢನ ಕಂಡು ಪ್ರೇಮದಿಂದಲಿ ಬಕುಳೆ

ವಾಮ ಕಂದನು ಆಗಿ ಭಾಮೆ ಪಾಕವನುಂಡು

ಕಾಮ ವರ್ಜಿತ ಪೂರ್ಣ ಕಾಮ ಕುದುರೆಯನೇರಿ

ಕಾಮ ಬೇಟೆಯೋಳ್ ನಿಜ ಕಾಮಿನಿಯನು ಕಂಡು

ದ್ಧಾಮ ಮೋಹವ ತೋರಿ ಭೂಮಿಜಾತೆಯ ಘಟಿಸೆ

ಭಾಮೆ ಬಕುಳೆಯ ಕಳಿಸಿ ಧರ್ಮದೇವತೆಯೆನಿಸಿ

ಗ್ರಾಮ ತಿರುಗುತ ಪೋಗಿ ಜಾಮಾತ ಸನ್ನಾಹ

ಜಾಣ್ಮಿಯಿಂದಲಿನಡೆಸಿ ಕಾಮಿತಾರ್ಥವ ಕೊಂಡು

ಧಾಮ ಸೇರಲು ಬಕುಳೆ ಹೇಮಮಯ ದಾರಿದ್ರ

ನೇಮದಾಟವ ತೋರಿ ಹೇಮಗರ್ಭನ ಕರಿಸೆ

ಸೋಮಶೇಖರ ಕೊಡಿಸೆ ಹೇಮರಾಶಿಯ ತಂದು

ಭೀಮರುಜೆಗಳ ನಟಿಸೆ ಸೋಮಸೋದರಿಕರಿಸಿ

ಮಾಮನೋಹರಗೈದ ಸೀಮೆಇಲ್ಲದಂಥ 2

ಮದುವೆ ಹಬ್ಬಿಸಿ ಭಕ್ತ ಹೃದಯ ತುಂಬುವ ನಂದ

ಮುದದಿ ಬೆಳೆಸೆ ಪಯಣ ವದಗೆ ಶುಕರಾತಿಥ್ಯ

ಸದಯಗೊಳ್ಳುತ ತೃಪ್ತಿ ಬದಿಗರೆಲ್ಲರಿಗಿತ್ತು

ಮದನಮೋಹನ ತೇಜ ಮದುವೆ ಊರನು ಸೇರಿ

ಕುದಿವ ಕುತೂಹಲದಿ ಅದ್ಭುತ ಸ್ವಾಗತವ

ಪದುಮಾವತಿಯ ತಂದೆ ಹೃದಯ ಪೂರ್ವಕ ನೀಡೆ

ಆದರದಿ ಸ್ವೀಕರಿಸಿ ಪಾದದ್ವಂಧ್ವವ ನೀಡಿ

ವೇಧಾದಿ ನಿಜವೃಂದ ಮೇದಿನೀ ಸುರವೃಂದ

ಸಾಧು ಸಜ್ಜನ ಸಂಗ ಮೋದ ಮೆಲ್ಲಲು ಕೂಡಿ

ವೇದ ಘೋಷವುಗೈಯೆ ವಾದ್ಯದುಂದುಭಿ ಮೊಳಗೆ

ವೇದವೇದ್ಯನು ಮದುವೆ ವೇದಿಕೆಯನು ಏರಿ

ಕಾದುಕೊಂಡಿಹ ಜನಕೆ ಸಾಧಿಸುತಲಭೀಷ್ಠ

ಪದ್ಮಾವತಿಯ ಕರ ಸಾದರ ಪಿಡಿದಂಥ

ಖೇದ ತರಿಯುತ ನಿಜ ಮೋದದಾನವ ಗೈವ 3

ತಿರುಪತಿ ತಿಮ್ಮಪ್ಪ ಸುರಗಣ ಜಗದಪ್ಪ

ವರಸಮರಿಲ್ಲಪ್ಪ ಭರದಿ ಕಸಿವಕಪ್ಪ

ಅರಿತವರಿಲ್ಲಪ್ಪ ಧರಿಸಿಹ ಸಿರಿಯಪ್ಪ

ಕರುಣ ಸುರಿಸುವನಪ್ಪ ಉರುಗಗಿರಿಯಲ್ಲಿಪ್ಪ

ಗರುಡ ಗಮನನಪ್ಪ ಸುರತರು ಇವನಪ್ಪ

ಗಿರಿಸಪ್ತ ದೊರೆಯಪ್ಪ ಹರಿಕೆ ಕೊಳ್ಳುವನಪ್ಪ

ಅರಿಮಾರಿ ಸರಿಯಪ್ಪ ಶರಣರ ಪೊರೆಯಪ್ಪ

ಕರೆಕರೆ ಬೇಡಪ್ಪ ಸ್ವರತ ಸುಖಮಯನಪ್ಪ

ಅರವಿದೂರನಪ್ಪ ಮರೆವ ಶರಣರ ತಪ್ಪ

ಸರ್ವಹೃದಯಗನಪ್ಪ ಪರಿಪೂರ್ಣಗುಣನಪ್ಪ

ಅರಿಶಂಖುಧರನಪ್ಪ ಉರಿವ ರವಿಯಲ್ಲಿಪ್ಪ

ಸರ್ವಮುಕ್ತರಿಗಪ್ಪ ಬಿರಿವ ಖಳರೆದೆಯಪ್ಪ

ಮರುತ ಮಂದಿರನಪ್ಪ ಪರಿಮರ ಹೌದಪ್ಪ

ಪೊರೆದೆ ಮಾಧವನಪ್ಪ ವರಲೀಲಾ ಮಯನಪ್ಪ

ಪರಮ ಅದ್ಭುತನಪ್ಪ ಪರಮಾತ್ಮಹೌದಪ್ಪ

ಕರಣ ಚೋದಿಪನಪ್ಪ ಕರಣಕ್ಕೆಸಿಗನಪ್ಪ

ದುರಿತ ಪಾವಕನಪ್ಪ ಪರಮ ಪಾವನನಪ್ಪ

ಹರನ ಅಪ್ಪನಿಗಪ್ಪ ಪರಮೋಚ್ಚಹೌದಪ್ಪ 4

ಬಾದರಾಯಣ ಪೂರ್ಣ ಭೋಧ ತೀರ್ಥರ ದೈವ

ಸಾಧುಸಜ್ಜನ ಪ್ರಾಷ್ಯ ಮೋದ ಚಿನ್ಮಯಗಾತ್ರ

ವೇದ ವಿಭಜಿಸಿ ನಿಂದ ಖೇದವಿದ್ಯೆಯ ಕೊಂದ

ವಾದಿವಾರಿಣಿ ಸಿಂಹ ವಾದಿರಾಜರ ಹೃದಯ

ಮೋದ ಹಯಮುಖ ಶುದ್ಧ ವೇದರಾಶಿಯತಂದ

ವೇಧಗರುಹಿದ ಕರುಣಿ ಖೇದ ನೀಡುತಲಿದ್ದ

ಆದಿದೈತ್ಯರ ಕೊಂದು ಮೇದಿನಿಯನು ಎಯ್ದೆ

ಶ್ರೀಧರ ನರಸಿಂಹ ಗೋಧರಮಹಿದಾಸ

ಕಾದುಕೊ ಶ್ರೀ ವಿಷ್ಣು ಭೇದ ವಿದ್ಯೆಯಮನಕೆ

ಭೋಧಿಸು ವರ ಕಪಿಲ ಸಾಧು ಋಷಭದತ್ತ

ಯಾದವ ಕುಲರನ್ನ ಕಾಯ್ದೆ ಗೋಪಿಯ ರನ್ನ

ಸೀಳ್ದೆ ಕೌರವರನ್ನ ಪೇಳ್ದೆ ಪಾರ್ಥಗೆ ಗೀತೆ

ಶುದ್ಧ ಜಯಮುನಿಹೃಸ್ಥ ಮಧ್ವ ಇಂದಿರೆನಾಥ

ಮುದ್ದು ಕೃಷ್ಣವಿಠಲ ಬಿದ್ದೆ ಪಾದದಿ ಶರಣು 5

***