Showing posts with label ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು hayavadana. Show all posts
Showing posts with label ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು hayavadana. Show all posts

Wednesday 1 September 2021

ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು ankita hayavadana

 ..


ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು

ದುಷ್ಟವಿಷಯಕ್ಕೆ ಎರಗುವÀ ಮನವನ್ನು

ಅಚ್ಚುತನ ಚರಣದಲಿ ಇರಿಸುವೆ1

ಮನದಭಿಮಾನಿಯೆ ಇವನ ನಾ ಬಲಗೊಂಡು

ದುರುಳ ವಿಷಯಕೆ ಎರಗುವ ಮನವನ್ನು

ನರಹರಿಯ ಚರಣದಲಿ ಇರಿಸುವೆ 2

ಅಚ್ಚುತನೆ ನಾ ನಿನ್ನ ಹೆಚ್ಚು ಬೇಡೋದಿಲ್ಲ

ಕಷ್ಟಕಾಲದಲ್ಲಿ ಹರಿಯೆಂಬ ಸ್ಮರಣೀಯೊ

ರಕ್ಷಿಸೋ ಲಕ್ಷ್ಮೀರಮಣನೆ 3

ನರಹರಿಯೆ ನಾ ನಿನ್ನ ಹಿರಿದ ಬೇಡೋಳಲ್ಲ

ಸರ್ವಕಾಲದಲಿ ಹರಿಯೆಂಬೋ ಸ್ಮರಣೀಯ

ಕರುಣಿಸೋ ಲಕ್ಷ್ಮೀರಮಣನೆ 4

ಪಾಲ್ಗಂಜಿಯೆಂದರೆ ಅರಗಂಜಿಯಾಹೋದೆ

ಲಕ್ಷ್ಮೀರಮಣಗೆ ಎಂಟುಗುಣಳುಂಟೆಂದರೆ

ಮೇಲಿದ್ದ ಗುಣಗಳಡಗೋದೆ 5

ಪಂಚಕನ ದೇಹದಲಿ ನಿಂತೆರಡು ಪಕ್ಷಿಗಳು

ಸಂತತ ದುಃಖಿ ಸುಖಿಯೊಬ್ಬ ಜೀವಗೆ

ನಿಂತು ಸುಖ ದುಃಖ ಕೊಡುತಿತ್ತು 6

ಪಂಚಮೂರುತಿ ಹರಿಯ ಅಂತರಂಗದಿ ಇಟ್ಟು

ಸಂತತ ಸ್ವಪ್ನ ಸುಷುಪ್ತಿ ಏರಿಸುವ

ಪ್ರಾರ್ಥಿಸಿ ಪ್ರಾಜ್ಞರಿಗೆ ಸರಿಯೆಂಬೆ7

ಈ ಜಾಗ್ರದವಸ್ಥೆಯಲಿ ನಾನಾವಿಧ ಕರ್ಮಗಳ

ಪ್ರೇರಿಸಿ ಸಕಲ ಶ್ರೀಕಾರ ಮಾಡುವೊ

ಸ್ವಾಮಿ ಶ್ರೀಹರಿಗೆ ಶರಣೆಂಬೆ 8

ನಡೆವುದು ನಿನ್ನ ಯಾತ್ರೆ ನುಡಿವುದು ನಿನ್ನ ನಾಮಸ್ಮರಣೆ

ಅಡಿಯಿಡೋದೆಲ್ಲ ಹರಿಯಾತ್ರೆ ಗುರುಪೂಜೆ

ಸ್ಮರಣೇಯ ಪಾಲಿಸೋ ಲಕ್ಷ್ಮೀರಮಣನೆ 9

ವಿಷ್ಣುಭಕ್ತಿಯಿಲ್ಲದೋರ ಹತ್ತಿರ ನಾನಿರೆ

ಎಚ್ಚರಿತು ಮಾಡೆ ಗೆಳೆತನವ

ಅವರ ಕಂಡರೆ ನಾನು ಕಿಚ್ಚ ಕಂಡಂತೆ ಕೊಲ್ಲಿಸುವೆ 10

ಹರಿಭಕ್ತಿಯಿಲ್ಲದೋರ ಹತ್ತಿರಲಿ ನಾನಿರೆ

ಅರೆಘಳಿಗೆ ಮಾಡಿ ಗೆಳೆತನವ

ಅವರ ಕಂಡರೆ ತಾನು ಉರಿಯ ಕಂಡಂತೆ ತೊಲಗುವೆ 11

ಕಾಶೀಪಟ್ಟಣ ಶ್ರೀ ವಾಸುದೇವರು

ಭೂಮಿ ಹರಿದಾಸರು ಕಟ್ಟಿಸಿದ ಸ್ಥಳದಲ್ಲಿ

ಹರಿಯ ನಿಜದಾಸಗೆ ವಿಶ್ವನಾಥನೆಂತೆಂಬೊ ಪೆಸರುಂಟು 12

ಹರಿದಾಸರ ಒಳಗೆ ಪರಮ ವೈಷ್ಣವನ್ಯಾರೆ

ಕಿರಿಯ ಕೆಂಜೆÉಡೆಯ ಮಕುಟನೆ

ಅಜನ ಸುತನಾ ಶಿವನು ಹರಿದಾಸಕಾಣೆ ಹುಸಿಯಲ್ಲ13

ಗುಣಮಣಿಧಾಮಗೆ ಮಣಿದೊಮ್ಮೆ ಇಕ್ಕದೆ

ಹಲವು ದೈವಗಳ ಭಜಿಸಿದ ಪಾಪಿ ನೀನು

ಮಣಿಮಂತ ಹೋದಗತಿಗ್ಹೋಗ್ವೆ 14

ಬಿದ್ದ್ಹೋಗೊ ಶರೀರವನು ಮುದ್ದು ಶ್ರೀಹರಿಗೆ ಸರಿಯೆಂಬೆ

ಎದ್ದು ತಮಸಿಗೆ ಉರುಳುವೊ ಪಾಪಿ ನೀ

ಅದ್ವೈತ ಹ್ಯಾಗೆ ಬಿಡದ್ಹೋದಿ 15

ಅಳಿದ್ಹೋಗೊ ಶರೀರವನು ನರಹರಿಗೆ ಸರಿಯೆಂಬೆ

ಬಿಡದೆ ತಮಸಿಗೆ ಉರುಳವೊ ಪಾಪಿ ನೀ

ಚಲಹವನು ಹ್ಯಾಗೆ ಬಿಡದ್ಹೋದಿ 16

ನಾಶ್ವಾಗೊ ಶರೀರವನು ವಾಸುದೇವಗೆ ಸರಿಯೆಂಬೆ

ಹೇಸದೆ ತಮಸಿಗೆ ಉರುಳವೊ ಪಾಪಿ ನೀ

ವಾಸನೆ ಹ್ಯಾಗೆ ಬಿಡದ್ಹೋದಿ 17

ಈ ಸೃಷ್ಟಿಯೊಳಗೆ ಅಚ್ಚುತಗೆ ಸರಿಯುಂಟೆ

ಮೆಚ್ಚಿ ನೀ ಮನವೆ ಕೆಡಬೇಡ

ಅಲ್ಲಿತ್ತಾರಾ(ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 18

ಭೂಮಿಯೊಳಗೆ ಶ್ರೀರಾಮನಿಗೆ ಸರಿಯುಂಟೆ

ಮಾನುನೀ ಮನವೇ ಕೆಡಬೇಡ

ಅಲ್ಲಿತ್ತಾರಾ(ಅಲ್ಲದ?)ಎಲೆಯ ಒತ್ತಿ ಹಿಂಡಿದರೆ ರಸವುಂಟೆ 19

ಭೂಮಂಡಲದೊಳಗೆ ರಂಗಗೆ ಸರಿಯುಂಟೆ

ಅಂದು ನೀ ಮನವೆ ಕೆಡಬೇಡ

ಅಲ್ಲಿತ್ತಾರಾ (ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 20

ವಿಷ್ಣು ಸರ್ವೋತ್ತಮನೆಂದು ಇಟ್ಟರೆ ಮುಂಡಿಗೆಯ

ಮುಟ್ಟಲಂಜಿದನೆ ಪರವಾದಿ

ಪರವಾದಿ ತತ್ವದ ಬಟ್ಟೇನೂ ಕಾಣದಿರುತಿದ್ದ21

ಹರಿಸರ್ವೋತ್ತಮನೆಂದು ಇರಿಸಿದರೆ ಮುಂಡಿಗೆಯ

ಹಿಡಿಯಲಂಜಿದನೆ ಪರವಾದಿ

ಪರವಾದಿ ತತ್ವದ ವಿವರವನು ಕಾಣದಿರುತಿಹ 22

ಅರಣ್ಯದ ಅಡವೀಲಿ ಗೋಡೇನು ಹಾಕಿದರೆ

ಯಾರು ಕೂಲೀನಕೊಡುವೋರು

ಸಂಕರನ ಮತವನು ಮಾಯದಿಂ ಮೆಚ್ಚಿ ಕೆಡಬ್ಯಾಡ 23

ಅತ್ತಿಹಣ್ಣಿನಂತೆ ಮಿಥ್ಯವಾದಿಮತ ಬಿಚ್ಚಿನೋಡಿದರೆ

ಕ್ರಿಮಿರಾಶಿ ಮಧ್ವರಾಯರ ಮತ

ಮುತ್ತಿನ ಸರವ ತೆಗೆದಂತೆ 24

ಆಲಹಂಣೀನಸಂತೆ ಮಾಯಾವಾದಿಮತ ಸೀಳಿ

ನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ

ಹೂವ್ವಿನ ಸರವ ತೆಗೆದಂತೆ 25

ಭಾರತ ಭಾಗವತ ಅರ್ಥಸಾರವೆಲ್ಲವ ತಿಳಿದು

ಹೇಳಿದನೆ ತತ್ವ ಕಥೆಗಳ ಜ್ಞಾನ

ಭಕ್ತಿವೈರಾಗ್ಯವ ಈವನೆ ನಮ್ಮ ಹಯವದನ 26

***