Showing posts with label ಛಂದದಿಂದ ಬಂದು ಸಲಹೊ ಫಂಡರೀಶ krishnavittala. Show all posts
Showing posts with label ಛಂದದಿಂದ ಬಂದು ಸಲಹೊ ಫಂಡರೀಶ krishnavittala. Show all posts

Monday 2 August 2021

ಛಂದದಿಂದ ಬಂದು ಸಲಹೊ ಫಂಡರೀಶ ankita krishnavittala

ಛಂದದಿಂದ ಬಂದು ಸಲಹೊ ಫಂಡರೀಶ ನಿನ್ನ ನಂಬಿದೆ ಪ

ತಂದೆ ನೀನೆ ಸರ್ವರಿಗೆ ಅನಿಮಿತ್ತ ಬಂಧುವಲ್ಲವೆ ಅ.ಪ


ದೋಷಿನಾನು ಮೂಢನಾನು ವಲಿಯೆನೆಂದು ಏಕೆ ಹೇಳು

ದೋಷದೂರ e್ಞÁನರೂಪ ಬಿಂಬ ನಿನ್ನ ದಾಸನಲ್ಲವೆ 1


ಎಲ್ಲಾ ಸತ್ತಾದಾತ ನೀನು ಇಲ್ಲ ನಿನಗೆ ಭೇದವೇನು

ನಲ್ಲ ಶರಣು ಎಂದಮೇಲೆ ವಲ್ಲೆ ಎನ್ನೆ ಬಿರುದು ಪೋಗದೆ 2


ಕಾಕುಮಾಡಿ ಎನ್ನ ಜಗದಿ ನೂಕಿ ಬಿಟ್ಟು ಭಂಟರಲ್ಲಿ

ಸಾಕದೇನೆ ಬಿಟ್ಟರೀಗ ಲೋಕನಗದೆ ಭಕ್ತರಾಣೆ 3


ಮುಂದುಮಾಡಿ ಹಿಂದೆ ಎನ್ನ ಹಿಂದು ಮಾಡಿ ಈಗ ನಗುವೆ

ಇಂದಿರೇಶ ನಿನ್ನ ನ್ಯಾಯ ಮಂದನಾನು ಅರಿಯೆ ಶರಣು 4


ಲಕುಮಿ ಮೊದಲು ಎಲ್ಲಾ ಜಗಕೆ ಶಕುತ ನೀನೆ ಒಬ್ಬ ಆಶ್ರಯ

ಮುಕುತರೊಡೆಯ “ಕೃಷ್ಣವಿಠಲ” ಭಕುತಿ

ನೀಡಿಕಾಯೋ ಬೇಗನೆ 5

****