Showing posts with label ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ gurujagannatha vittala. Show all posts
Showing posts with label ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ gurujagannatha vittala. Show all posts

Wednesday 1 September 2021

ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ ankita gurujagannatha vittala

 

ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ ಪ


ತುತಿಸಲೆನ್ನೊಶವೆ ನಿ -ನ್ನತುಳ ಮಹಿಮ ಮಹಾ

ಮತಿವಂತ ಜನರು ಸು - ಮತಿಗೆ ಸಿಲ್ಕದ ನಿನ್ನ ಅ.ಪ


ಸ್ಮರಿಪ ಜನರ ಸುರ ತರು ಪಾಪಕಾಂತಾರ

ನರ ಸಮ ಸಜ್ಜನ | ಶರಜನಿಚಯ ದಿನ

ಕರಪೋಲುವ ಪಾದ | ಸರಸಿಜ ಭಜಿಸುವ

ಪರಮ ಭಕ್ತರ ಕುಮುದ | ವರ ನಿಚಯಕೆ ಸುಧಾ -

ಕರನಂತೆ ಧರೆಯೊಳು ಧುರದಿ ಮೆರೆವೊ ನಿನ್ನ

ಪರಮ ಕರುಣಿಯು ಎಂದು ನಿನ್ನಯ ಪಾದ

ಮೊರೆಯ ಪೊಕ್ಕೇನೊ ನಾನಿಂದು ನೀನೆ ಎನ್ನ

ಮೊರೆಯ ಲಾಲಿಸು ಎಂದು ಬಿನ್ನೈಸಿದೆ

ಪರಮಕೃಪಾಕರ ಪೊರೆಯೊ ಅನಾಥ ಬಂಧೂ 1


ದಯಕರ ನಿಜ - ಭಕ್ತಾ | ಮಯ ಹರ ಸುಖಸಾರಾ

ಶ್ರಯವಾಗಿ ಸಂತತ | ನಯದಿಂದ ನಿಜಜನ

ಭಯಕರ ಭವಹರ | ಜಯ ಜಯ ಜಯದಾತ

ಜಯ ವಿಜಯಾತ್ಮಜ | ಜಯಕುಲ ದಿಗ್ವಿಜಯ

ಜಯ ಕಾಲದಲಿ ನಿಜ | ಹಯಗ್ರೀವಮೂರ್ತಿಯ

ದಯದಿಳೆಯೊಳು ಜನಿಸೀ | ಜನ್ಮದಿ ಮೂರ್ತಿ

ತ್ರಯ ಪಾದವನೆ ಭಜಿಸಿ - ಧರಿಯೊಳು ಕ್ಷ -

ತ್ರಿಯ ಕುಲದೊಳು ಜನಿಸಿ ಯುಧಿ ಭೀಮ -

ಶಯನನಿಂದ ಹತನಾಗ್ಯಭüಯ ಸ್ಥಾನವನೆ ಬಯಸಿ 2


ಭೂಸುರ ವರನಾಗಿ | ಕಾಶ್ಯಪಿ ಸ್ಥಳದಲ್ಲಿ

ವಾಸಮಾಡಿ ಶಿರಿ ವ್ಯಾಸ ಕೃಷ್ಣ ಪಾದೋ -

ಪಾಸನ ಮಾಡುತ | ವ್ಯಾಸಮುನಿ ಆಗಿ

ದೇಶದೇಶದಿ ಭಾರ | ತೀಶ ಪ್ರತೀಕವ

ವಾಸವಾಸರ ಸ್ಥಾ - ಪಿಸಿ ಯಂತ್ರೋದ್ಧಾರಾ

ಶ್ರೀಶ ಮಧ್ವಮುನಿಯಾ - ಸ್ಥಾಪಿಸಿ ಅಲ್ಲಿ

ವಾಸವ ಮಾಡಿ ತಾನೂ - ಪುರಂದರ

ದಾಸರಾಯರಿಗೆ ಇನ್ನು - ಸುಮಂತ್ರೋಪ -

ದೇಶಿಸಿ ಅನುದಿನ ವಾಸಮಾಡಿದಿ ನೀನು 3


ಕ್ಷೋಣಿತಳದಿ ಕುಂಭ | ಕೋಣನಗರದಲ್ಲಿ

ಕ್ಷೋಣಿದೆವೋತ್ತುಮ | ವೀಣವೆಂಕಟನಾಮಾ -

ಕ್ಷೀಣಬಲ ಜ್ಞಾನ ತಾಣ | ಗೊಡದೆ ನಿನ್ನ

ಜಾಣತನದಿ ನರ | ಮಾಣವಕನಂತೆ

ಪಾಣಿ ಭಿಕ್ಷಾನ್ನವಾ | ಟಾಣಿ ಮಾಡುತ ನೀನು

ಕ್ಷೋಣಿಪ ಮನಿಗೆ ಬಾರೇ - ನಿನ್ನ ವೀ -

ಕ್ಷಣ ಗೈದು ತೋರೆ - ಶುಭ ಲ -

ಕ್ಷಣ ಬ್ಯಾರೆ ಬ್ಯಾರೇ ಇರಲು ನಿನ್ನ

ಕ್ಷಣ ಬಿಡದಲೆ ಜನ ಮಣಿದು ನಮಿಸುತಿರೆ 4


ಜನಪ ನಿನ್ನಯ ಮಹ | ಘನ ಚರ್ಯವನೆ ನೋಡಿ

ದಿನದಿನದಲಿ ಬಹು | ವಿನಯಪೂರ್ವಕ ಪಾದ

ವನಜ ಸೇವಕÀನಾಗಿ |ತನು ಮನ ಧನ ಧಾನ್ಯ

ಘನ ನಿನಗರ್ಪಿಸಿ | ನಿನ ಸಂಗವಾಗಲೂ

ಜನುಮ ಇಲ್ಲೆಂಬುವ | ಘನ ಜ್ಞಾನ ಭಕುತಿಯ

ಮನದಲ್ಲಿ ಯೈದುತಲೆ - ತಾನು ನಿತ್ಯ

ಅನುಮಾನ ಮಾಡದಲೆ - ಇರಲು ಅವನ

ಘನಸುಖ ರೂಪದಲ್ಲೆ - ಇರುವಂತೆ

ಮನಪೂರ್ತಿ ಕರುಣಸಿದ್ಯನುಪಮ ಚರಿತಲ್ಲೆ 5


ಸತ್ಯನಾಮಕ ಸುತ | ಮೃತ್ಯುನಿಂದಲಿ ತಾನು

ಸತ್ತುಪೋದ ವಾರ್ತೆ | ಬಿತ್ತರಿಸೆ ಲೋಕದಿ

ಉತ್ತುಮ ನೀನಾಗ | ಸತ್ಯ ಸಂಕಲ್ಪವ

ಗೊತ್ತು ತಿಳಿದು ಅವನ | ಮತ್ತೆ ಈ ಲೋಕಕ್ಕೆ

ತತ್ಕಾಲದಲಿ ತಂದು | ಉತ್ತುಮ ಭಾರ್ಯಳ

ಜತ್ತು ಮಾಡಿದ ವಾರ್ತೆಯಾ - ಕೇಳೀ ಶೈವ -

ರುತ್ತುಮನಾತ್ಮಜನಾ - ಇವಾನಂತೆ

ಸತ್ತನೆಂದು ಕರಿಯೇ - ಅದನು ನೀನು

ಸತ್ಯವೆಂದು ಪೇಳಿ ಮತ್ತೆ ಪೊರೆದ್ಯೊ ಜೀಯಾ 6


ಇನತೆ ಮೊದಲಾದ | ಫನತರ ನಿನ ಮಹಿಮೆ

ಎನಗೆ ವಶವೆÀ ನಿತ್ಯ | ಅನಿಮಿಷ ಮುನಿಜನ

ಮನಕೆ ಸಿಲ್ಕದೆ ವೃಂದಾ - |ವನದಲಿ ನೀ ನಿಂತು

ವನುತೆ ಸುತ ಧನ | ಧಾನ್ಯ ಮೊದಲಾದ

ಅನುಪಮ ಇಷ್ಟಾರ್ಥ | ಅನುದಿನ ಸಲಿಸುತ್ತ

ಜನರ ಪಾಲಿಸೊಗೋಸುಗಾ - ಹರಿಯು ನಿನಗೆ

ಜನುಮಾವನಿತ್ತನೀಗ - ಅದಕೆ ನಿನ್ನ

ಜನರು ಭಜಿಸೊವೋರೀಗ - ಅದಕೆ ನಾನು

ಅನುದಿನ ತವಪಾದ ವನಜ ನಂಬಿದೆ ವೇಗ 7


ರಕ್ಷಿಸೋ ನೀ ಎನ್ನ | ಲಕ್ಷ್ಮೀರಮಣ ದೂತ

ಮೋಕ್ಷಾದಿ ಪುರುಷಾರ್ಥ - | ಪೇಕ್ಷ ಪ್ರದಾಯಕ

ಲಕ್ಷ ಜನರೊಳೆನ್ನ | ವೀಕ್ಷಿಸಿ ಪರಜನಾ -

ಪೇಕ್ಷಾ ಮಾಡದಂತೆ | ಲಕ್ಷ್ಮೀಶ ನಾತ್ಮಜ

ಭಿಕ್ಷಾನ್ನ ಬೇಡೋದು | ಲಕ್ಷಣವೇನಿದು -

ಪೇಕ್ಷಾ ಮಾಡದೆ ನೀ ಎನ್ನಾ - ಕಾಯಲಿಬೇಕು

ವಿಕ್ಷೀಸಿ ಜ್ಞಾನವನ್ನಾ - ಭಕುತಿ ಇತ್ತು -

ರಕ್ಷಿಸು ಎಂದೆ ನಿನ್ನಾ ಇದೆ ಒಂದಾ

ಪÉೀಕ್ಷೆ ಪೂರ್ತಿಸೊ ಕಲ್ಪವೃಕ್ಷ ನೀ ಎನಗೆ ಇನ್ನ 8


ಕಿಟಿಜ ಸರಿದ್ವರ | ತಟ ಕೃತ ಮಂದಿರ

ಚಟುಲ ಮಧ್ವಮುನಿ | ಪಟು ಶಾಸ್ತ್ರದಿಂದಲಿ

ಕುಟಿಲ ದುರ್ವಾದಿಗ | ಳ್ಥಟನೆ ಮುರಿದು ನಿಜ

ಚಟುಲ ಸಿದ್ಧಾಂತವ | ಭಟ ಜನರಿಗೆ ಸದಾ

ಘಟನೆ ಮಾಡಿ ಪ್ರತಿ | ಭಟರಿಲ್ಲದಲೆ ನೀನು

ಧಿಟನಾಗಿ ತ್ರಿಜಗದಿ - ಮೆರೆಯುತ

ಶಠÀಜನರನು ತ್ವರದಿ - ಮರಿದು ಜ್ಞಾನಿ

ಕಟಕ ಸುಪಾಲನದಿ ಪಟೋ ಎನಿಸಿ

ಧಿಟಗುರು ಜಗನ್ನಾಥ ವಿಠಲನ್ನ ಭಜಿಸಿದೆ 9

***