Showing posts with label ಧ್ಯಾನಿಸು ಮನವೆ ನೀ ಧ್ಯಾನಿಸು gopala vittala. Show all posts
Showing posts with label ಧ್ಯಾನಿಸು ಮನವೆ ನೀ ಧ್ಯಾನಿಸು gopala vittala. Show all posts

Wednesday 1 September 2021

ಧ್ಯಾನಿಸು ಮನವೆ ನೀ ಧ್ಯಾನಿಸು ankita gopala vittala

 ..

ಧ್ಯಾನಿಸು ಮನವೆ ನೀ ಧ್ಯಾನಿಸು ಪ.


ಧ್ಯಾನಿಸು ಮನವೆ ಶ್ರೀಹರಿಯ ಪಾದಧ್ಯಾನನಿರುತ ಈ ಪರಿಯ ಆಹಾಪ್ರಾಣಾಪಾನವ್ಯಾನೋದಾನಸಮಾನರ್ಗೆ ಪ್ರಾಣನಾಗಿಪ್ಪ ಮುಖ್ಯ ಪ್ರಾಣಾಂತರ್ಗತನ ನೀ ಅ.ಪ.


ಪರಮಾಣು ಪ್ರದೇಶದಲ್ಲಿ ಪ್ರಾಣರಾಶಿ ಅನಂತುಂಟಲ್ಲಿ ಹೀಗೆಒರಲುತಿದೆ ವೇದದಲ್ಲಿ ದೃಷ್ಟಾಂತವ ಪೇಳ್ವೆ ಕೇಳು ದೃಢದಲ್ಲಿ ಆಹಾಪರಮಸೂಕ್ಷ್ಮ ವಟಮರನಾಗಿ ಅದರಲ್ಲಿಪರಿಮಿತಿಲ್ಲದರ ಫಲದಬೀಜವನರಿತು ನೀ 1

ನಿರುತ ಸುವರ್ಣಬ್ರಹ್ಮಾಂಡದಲ್ಲಿ ಹರಿ ಪೂರ್ಣವ್ಯಾಪ್ತ ಅಖಂಡನಾಗಿಮಿರುವುತಲಿಪ್ಪ ಮಾರ್ತಾಂಡ ತೇಜೋಕಿರಣದಂತಿರುವ ಪ್ರಚಂಡ ಆಹಾಹೊರಗೆ ಒಳಗೆ ಸರ್ವತ್ತರದಲ್ಲಿ ಹರಿಮಯ-ವರಿತು ನಿನಗೆ ಎಲ್ಲಿ ದೊರಕಿದ ಸ್ಥಳದಿಂದ 2

ಸಲಿಲಭೂಗಿರಿಲತೆ ನಾನಾವೃಕ್ಷಫಲಖಗಮೃಗ ಕಾನನತೃಣ ಪೊಳೆವಪಾವಕತರುಪವನ ಮುಕ್ತಸ್ಥಳ ಅವ್ಯಾಕೃತ ಗಗನ ಆಹಾಒಳಗೆ ಹೊರಗೆ ಹರಿ ಚಲಿಸದೆ ಇರುತಿಪ್ಪಸ್ಥಳದ ನಿಲುವಿನಂತೆ ತಿಳಿದು ನೀ ಅದರಂತೆ 3

ಕೇಶವ ವಿಶ್ವಮತ್ಸ್ಯಾದಿ ತೈಜಸ ಶ್ರೀಶ ಹಯಗ್ರೀವಾದಿ ಜೀವರಾಶಿಯೊಳಿದ್ದಾನಾದಿ ಸರ್ವದೇಶ ವ್ಯಾಪಿಸಿದಂತಾಭೇದಿ ಆಹಾಈ ಸಮಸ್ತಮೂರ್ತಿ ಶ್ರೀಶ ರಂಗನೆ ಎಂದುವಾಸನಾಮಯದಿಂದ ನೀ ಸೇವಿಸುತ್ತ ನಿತ್ಯ 4

ಸಪ್ತಾವರಣ ಶರೀರದಿ ದಶಸಪ್ತದ್ವಿಸಹಸ್ರ ನಾಡಿಯಲಿ ದಶ-ಸಪ್ತದ್ವಿಸಹಸ್ರ ರೂಪದಲ್ಲಿ ಹರಿವ್ಯಾಪ್ತ ನಿರ್ಲಿಪ್ತಸ್ಥಾನದಲ್ಲಿ ಆಹಾಆಪ್ತನಂತಿರುವ ಸುಷುಪ್ತಿ ಸ್ವಪ್ನ ಜಾಗ್ರದಿತಪ್ತಕಾಂಚನದಂತೆ ದೀಪ್ತಿಸುತಿಪ್ಪನ 5

ಜೀವರಿಂದತ್ಯಂತ ಭೇದ ಪ್ರತಿಜೀವಾಂತರದಲಿ ಪ್ರಮೋದನಾಗಿಆವಾಗ ಚರಿಸುವ ವೇದ ಪೇಳುವುದು ಸತ್ಯಂಭಿದಾ ಆಹಾಈ ವೇದಾರ್ಥವು ಸಾವಧಾನದಿ ತಿಳಿದುಶ್ರೀವಾಯುಮತವ ಕೋವಿದರೊಡಗೂಡಿ6

ಶ್ರೀ ಕೇಶವನೆ ಮೂಲಾಸಿ ಶ್ರುತಿ ಏಕೋನಾರಾಯಣಾಸಿ ನಾನಾಲೋಕ ಸೃಷ್ಟಿಪದ ತಾನಾಸಿ ತಾರಕಮಂತ್ರ ಉಪದೇಶಿ ಆಹಾನೀ ಕೇಳು ನಿಗಮಾರ್ಥ ನೀಕರಿಸು ಸಂಶಯಏಕಮೇವಾದ್ವಿತೀಯನೆಂಬೊ ಕೃಷ್ಣನಂಘ್ರಿಯ 7

ಗಂಗಾಜನಕ ಸಿರಿರಂಗ ಉತ್ತುಂಗಗುಣಗಣತರಂಗ ಕಾ-ಳಿಂಗಸರ್ಪನ ಮದಭಂಗ ಭುಜಂಗಶಯನ ಅಮಲಾಂಗ ಆಹಾಪಿಂಗಳ ಇಡಾ ಮಂಗಳ ಸುಷುಮ್ನ ಸುಸಂಗಮ ಮಧ್ಯದಿ ತಿಮಿಂಗಿಲಂತಿಪ್ಪನ 8

ಹೃದಯ ಸ್ಥಾನದಲ್ಲಿದ್ದ ಮೂರ್ತಿ ಬಲು ಅದುಭುತದಿವ್ಯಕೀರ್ತಿಅದೆ ಪದುಮಜಾಂಡದಿ ಪರಿಪೂರ್ತಿ ದೊರೆವುದಕೆ ಬೇಕು ವಾಯುಸಾರ್ಥಿ ಆಹಾಅದೆ ಬಿಂಬಮೂರ್ತಿ ಜೀವದಾಕಾರವಾಗಿ ತಾಪದುಮಜಾಂಡದಲಿಪ್ಪ ಸದಮಲಾತ್ಮಕನ 9

ಧರೆಯನಳೆದ ದಿವ್ಯಚರಣ ಅದು ಮೆರವುತಿಪ್ಪುದು ಕೋಟಿ ಅರುಣನಂತೆಪರಿಪೂರ್ಣಭರಿತವು ಕಿರಣ ತನ್ನ ಸ್ಮರಿಸುವರಿಗೆ ಮಾಳ್ಪ ಕರುಣ ಆಹಾತರುಣಿಯಂದದಿ ನಖದಿ ಸುರನದಿಯ ಪೆತ್ತ ನೂ-ಪುರ ಗೆಜ್ಜೆಪೆಂಡೆಯ ಎರಡೈದು ಬೆರಳನು 10

ಹರಡು ಜಂಘೆಯುಗಜಘನ ಸುರುಚಿರ ರೇಖಧ್ವಜವಜ್ರ ನಾನಾ ದಿವ್ಯ ವರರೇಖೆಯಿಂದಲೊಪ್ಪುವನ ಜಾನು ಪರಮಶೋಭಿಸುವ ಸುಂದರನ ಆಹಾಉರುಟುಕದಳಿಸ್ತಂಭದಂತಿರುವೊ ಊರುದ್ವಯಸರಿಗಾಣೆ ಹರಿ ಉಟ್ಟ ವರಪೀತಾಂಬರವನು 11

ಗಜಹಾನದಂತಿಪ್ಪ ಮಧ್ಯ ಬಲುವಿಜಯ ಒಡ್ಯಾಣ ಅಭೇದ್ಯಾಭೇದ್ಯನಿಜಗಂಟೆ ಝಣರೆಂಬೊವಾದ್ಯ ಕುಬುಜೆ ಡೊಂಕು ತಿದ್ದಿದಾನಾದ್ಯ ಆಹಾಅಜಜನಿಸಿದ ನಾಭ್ಯಂಬುಜದಳ ಚತುರ್ದಶತ್ರಿಜಗಭರಿತ ಕುಕ್ಷಿ ನಿಜ ಸುಖಪೂರ್ಣನ 12

ಉದರತ್ರಿವಳಿ ನಾನಾಹಾರ ದಿವ್ಯ ಪದಕ ಪಚ್ಚೆಗಳ ವಿಸ್ತಾರ ಬಲುಚದುರ ವೈಜಯಂತಿ ಮಂದಾರವನ್ನು ಮುದದಿಂದ ಧರಿಸಿದ ಧೀರ ಆಹಾಪದುಮಜಭವರಿಂದ ತ್ರಿದಶರು ತಿಳಿದಿನ್ನುಸದಾಕಾಲ ಧೇನಿಪರು ಹೃದಯಾಂಬರದಲ್ಲಿ 13

ಸಿರಿವತ್ಸ ಕೌಸ್ತುಭಹಾರ ಮ್ಯಾಲೆ ಸರಿಗೆ ನ್ಯಾವಳದ ಶೃಂಗಾರ ಸುಂ-ದರವಾದ ಕಂಬುಕಂಧರ ಅತಿಗುರುತರ ಭುಜವು ಚತುರ ಆಹಾಮರಿ ಆನೆ ಸೊಂಡಿಲಂತಿರುವ ಬಾಹುಕೀರ್ತಿ ಕೇತಕಿಬೆರಳು ನಕ್ಷತ್ರದರಸಿನಂದದಿ ನಖ14

ಕರಚತುಷ್ಟಯದಲಿ ಶಂಖಚಕ್ರ ವರಗದಾಪದುಮ ನಿಶ್ಶಂಕನಾಗಿಧರಿಸಿ ಮೆರೆವ ಅಕಳಂಕ ದುರುಳರ ತರಿವ ಛಲದಂಕ ಆಹಾಬೆರಳ ಮಾಣಿಕದುಂಗರ ಕಡಗ ಕಂಕಣಬಿರುದಿನ ತೋಳಬಂದಿ ಸಿರಿ ಭುಜಕೀರುತಿ15

ಅಗರುಚಂದನ ಗಂಧಲೇಪ ಕಂಬು ಸೊಗಸಾದ ಚುಬುಕ ಪ್ರಕಾಶಚಿಗುರು ಚಂದ್ರೆಳೆದುಟಿ ಭೂಪ ನಸುನಗುವ ವದನ ಸುಸಲ್ಲಾಪ ಆಹಾಮಗನಾಗಿ ತಾನು ಗೋಪಿಗೆ ವದನದೊಳಗೆಜಗವೆಲ್ಲ ತೋರಿದ ಅಗಣಿತ ಮಹಿಮನ16

ಮುಗುಳು ಮಲ್ಲಿಗೆ ಮೊಗ್ಗೆ ದಂತಪಂಕ್ತಿ ಜಗವಮೋಹಿಸುವ ಸುಶಾಂತ ಜಿಹ್ವೆನಿಗಮಕ್ಕೆ ವೇದ್ಯವಾದಂಥ ಬಹು ಬಗೆಯಲ್ಲಿ ಮೆರೆವ ಸುಪಂಥ ಆಹಾನಗುವ ವದನ ಝಗಝಗಿಸುವ ಕುಂಡಲಕರ್ಣಮಿಗೆ ಕೂರ್ಮಕದಪು ಸಂಪಿಗೆನಾಸಿಕವನ್ನು 17

ಕರುಣಶಾಂತಶುಭನೋಟ ಕಂಗಳೆರಡರ ಚೆಲ್ವಿಕೆ ಮಾಟ ಇನ್ನುಅರವಿಂದದಳವೆನ್ನು ದಿಟ ಇನ್ನು ತರಣಿಚಂದ್ರಮರ ಕೂಟ ಆಹಾಶರಣಜನರ ಮನೋಹರ್ಷವಾರ್ಧಿಗೆ ಚಂದ್ರದುರುಳ ದಿತಿಜತಿಮಿರಕ್ಕೆ ಭಾಸ್ಕರನ 18

ಪೊಳೆವ ಪುಬ್ಬುದ್ವಯ ಸ್ಮರನ ಚಾಪ ತಲೆಯ ತಗ್ಗಿಸುವಂಥಾ ರಚನಾಫಾಲದಲಿಟ್ಟ ತಿಲಕ ಸುಂದರ ಲೋಕ ಕಳವಳಗೊಳಿಸುವ ಸುಗುಣ ಆಹಾನಳಿನವದನದಲ್ಲಿ ಅಳಿಗಳಂತೊಪ್ಪುವಸುಳಿಗುರುಳಿನ ಮ್ಯಾಲೆ ಒಲೆವ ಅರಳೆಲೆಯನ್ನು 19

ಕೋಟಿಸೂರ್ಯ ಪ್ರಕಾಶ ಕಿರೀಟಕ್ಕೆ ಸಮ ಆವದೇಶದಲ್ಲಿಸಾಟಿಗಾಣೆನೊ ವಿಶೇಷ ಕಪಟನಾಟಕ ನಿತ್ಯ ರಮೇಶ ಆಹಾನೀಟಾಗಿ ನಖ ಲಲಾಟ ಪರಿಯಂತ್ರನೋಟದಿಂದಲಿ ಈಶಕೋಟಿ ಸಹಿತನ 20

ಕಾಮಾದಿಗಳೆಲ್ಲ ಜರಿದು ಮುಕ್ತಿಮಾರ್ಗ ಆವುದದರಿದು ಭೂಮಿ ಹೇಮಕಾಮಿನಿಯರ ಜರಿದು ಅತಿಪ್ರೇಮದಿ ಗುರುತುಗಳ ಬೆರೆದು ಆಹಾಸಾಮಜವರದ ಗೋಪಾಲವಿಠಲನ ಯಾಮ-ಯಾಮಕ್ಕೆ ನಲಿದಾಡುತ್ತ ನೀ ನಿತ್ಯ 21

***