Showing posts with label ನಮಗೆಲ್ಲಿ ಮನೆಗಳಯ್ಯ ನಾರಾಯಣ neleyadikeshava. Show all posts
Showing posts with label ನಮಗೆಲ್ಲಿ ಮನೆಗಳಯ್ಯ ನಾರಾಯಣ neleyadikeshava. Show all posts

Wednesday 1 September 2021

ನಮಗೆಲ್ಲಿ ಮನೆಗಳಯ್ಯ ನಾರಾಯಣ ankita neleyadikeshava

 ..

ನಮಗೆಲ್ಲಿ ಮನೆಗಳಯ್ಯ ನಾರಾಯಣ ಪ


ಕಮಲ ಬ್ರಹ್ಮಾಂಡ ಕೋಟಿ ಒಡಲೊಳು ತಾಳ್ದಂಥರಮಾಧವ ನಿಮಗೆ ನೀರೊಳಗೆ ವಾಸವಾಯಿತುಅ


ಜಲನಿಧಿಯನುತ್ತರಿಸಿ ಲಂಕೆಯನೈವುದಕೆಕುಲಗಿರಿಯ ಕಿತ್ತು ತಂದು ಸೇತುವೆ ಕಟ್ಟಿಸಲೆ ದೈತ್ಯನ ಕೊಂದು ಸೀತೆಯ ತಂದನಿಗೆ ಗಿರಿತಲೆಯ ಮೇಲೆ ಇಹ ಪ್ರಾಪ್ತಿಯಾಯಿತು 1


ಪೃಥ್ವಿಯ ತಲೆಯನು ಪರೆಮಾಡಿ ತಾಳಿದಳುತ್ಯಾನಮಮ್ಮನ ತಂದೆಯ ಮೆಲುವನಮೃತ್ಯುನಾಶಕನೆಂದು ಸುತ್ತಿದ್ದಾನೆಹುತ್ತಿನೊಳಗೆ ಇಹ ಪ್ರಾಪ್ತಿಯಾಯಿತು 2


ನಾಡದೇವತೆಗಳ ಸೆರೆಗಳ ಬಿಡಿಸಿಕ್ರೀಡೆಯಾಯಿತು ನಿಮ್ಮ ದಯದಿಂದಲಿರೂಢಿಯೊಳತಿ ಸೇವಕನಾದ ಗರುಡನಿಗೆಬೋಡು ಮರದ ಮೇಲೆ ಇಹ ಪ್ರಾಪ್ತಿಯಾಯಿತು 3


ಜಲನಿಧಿ ಸುತನ ಮೊಮ್ಮಗನ ಕೊಂದ ಶೂರ ನಕುಲ ಸಹದೇವ ಪಾಂಡವರೈವರುಲಲನೆ ದ್ರೌಪದಿಯೊಂದಿಗೆ ವನವಾಸ ಹೋಗಿಹೊಲದೊಳಗೆ ಇಹ ಪ್ರಾಪ್ತಿಯಾಯಿತು4


ಇಂಥಿಂಥವರಿಗೆಲ್ಲ ಮನೆಯಿಲ್ಲದಿರಲು ನ-ನ್ನಂಥವನಿಗಿನ್ನೆಲ್ಲಿ ಇರಲು ಸಾಧ್ಯಕಂತುಪಿತ ಕಾಗಿನೆಲೆಯಾದಿಕೇಶವನೆ ನಿ-ಶ್ಚಿಂತನಾಗಿ ನಿಮ್ಮ ಗುಡಿಯಲಿಪ್ಪೆನು 5

***