Showing posts with label ನಮೋ ನಮೋ ಶ್ರೀ ಮಧ್ವಾಚಾರ್ಯ vijaya vittala madhwacharya stutih. Show all posts
Showing posts with label ನಮೋ ನಮೋ ಶ್ರೀ ಮಧ್ವಾಚಾರ್ಯ vijaya vittala madhwacharya stutih. Show all posts

Friday 27 December 2019

ನಮೋ ನಮೋ ಶ್ರೀ ಮಧ್ವಾಚಾರ್ಯ ankita vijaya vittala madhwacharya stutih

ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ

ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ
ಜಗವೆಲ್ಲ ಧಾರಿಯನು ಯೆರದು ಸಂಹ್ಯಾ
ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ
ಈ ಭೂಮಿಯನು ಸಾಧಿಸಿದನು1

ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ
ಗತಿ ತಪ್ಪಿದಂತೆ ನಿರ್ಮಾಣ ಮಾಡಿ
ಸತಿಪತಿಯ ಉದ್ಧರಿಸಿ ಬರುತ ಕಂಡನು ಉ
ನ್ನತವಾದ ಪರ್ವತವು ಯೋಜನವಿರೆ 2

ಬೆರಗಾಗಿ ಪರಶುರಾಮನು ಬಂದು ಈ
ಗಿರಿಯಲ್ಲಿ ನಿಂದು ಅಗ್ರಭಾಗವೈದೆ
ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ
ನಿರೀಕ್ಷಿಸಿ ಸುಜನರು ಇದ್ದನಿತು3

ಸಿರಿರೂಪ ದುರ್ಗಾನಾಮಕಳಾದ ದೇವಿಯನು
ಕರದು ಈ ಸ್ಥಾನದಲಿ ಇರ ಹೇಳಿದಾ
ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು
ದುರುಳರಾತಿಯರ ಸಂಹರಿಸುಯೆಂದು 4

ಅನಿತರೊಳಾಕಾಶದಲಿ ಜಯ ಜಯವೆಂದು
ಅನಿಮಿಷರು ಕೊಂಡಾಡಿ ನಗುತ ದಿವ್ಯ
ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು
ಮ್ಮನರಾಗಿ ಬಂದು ತುತಿಸಿದರು ಹರಿಯಾ 5

ಅಂದಿನಾರಭ್ಯವಾಗಿ ಇದೇ ವಿಮಾನಗಿರಿ
ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ
ಎಂದೆಂದಿಗೆ ಇದನೆ ನೋಡಿದವರಿಗೆ ದೋಷ
ಗಂಧವಾದರು ಇಲ್ಲಾ ಇಲ್ಲ ಇಲ್ಲಾ6

ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ
ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ
ಪಾಮರರ ಉದ್ಧರಿಸಬೇಕು ಯೆಂದು7

ಪರಿ ಶ್ರೀಹರಿಯ ಧ್ಯಾನವನು ಮಾಡಲು
ಶ್ರೀಪತಿ ವರವಿತ್ತ ಮುಂದೆ ಮಹ
ಪಾಪಿ ಪುಟ್ಟುವನು ಅವನಗೋಸುಗ ವಾಯು
ತಾ ಪರಮ ಪ್ರೀತಿಯಲಿ ಜನಿಸುವನು 8

ಅಂದ ಮಾತಿಗೆ ಯಮನು ಬಹುಕಾಲದಲಿದ್ದ
ಛಂದದಿಂದದಿ ಪೋದ ತನ್ನ ಪುರಕೆ
ಇಂದಿರಾಪತಿ ನೇಮಿಸಿದ ಪರಿಯಂತೆ ಆ
ನಂದತೀರ್ಥರಾಗಿ ಜನಿಸಿದರು 9

ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ
e್ಞÁನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ
ಮಾನದಲಿ ಕೊಂಡಾಡಿ ಸುಖಿಪರಲ್ಲಿ10

ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ
ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ
ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ
ಸುರರು ಮುಕ್ತಿಯಿನಿತ್ತು 11

ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ
ಎರಡೊಂದು ಏಳು ಕುಲತೃಪ್ತರಹರೊ
ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ
ಎರಡೊಂದು ಋಣದಿಂದ ಕಡೆಗಾಗುವ 12

ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ
ಬಲಿವನು ಸುರದ್ರುಮದಂತೆ ರಂಗ
ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ
ಬಲು ವಿಷಗಳು ಪೋಗಿ ನಿರ್ಮಲಹರೋ 13

ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು
ವಾಲಯಾ ಶುಭವಿದ್ಯ ಫಲಿಸುವದು
ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ
ಶೀಲತೆಯು ಕೇಳೆ ಮನೋ ವಾಯುವೇಗ 14

ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು
ತೃಪ್ತನಾಗುವ ಮನುಜ ಮೃಷ್ಟಾನ್ನದಿ
ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು
ಪುತ್ರೋತ್ಸವಗಳಿಂದ ಬಾಳುತಿಪ್ಪ15

ಚಾಪ ಗದ ಪದುಮ ಎರಡೊಂದು ತೀರ್ಥಗಳು
ಇರುತಿಪ್ಪ ವಾಸುದೇವನೆಂಬೊ ನಾಮಾ
ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ
ವಿರಜೆಯಲಿ ಸ್ನಾನ ಸಂದೇಹವಿಲ್ಲ 16

ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ
ಎಣಿಕೆ ಇಲ್ಲದೆ ಚರಿತೆ ಅನುದಿನದಲಿ
ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ
ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17

ಮಧ್ವ ಮಧ್ವ ಎಂಬೋ ನಾಮವನು ನುಡಿದರೆ
ಬದ್ಧವಾಗಿದ್ದ ಭವಾಬ್ಧಿಯಿಂದ
ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ
ಗೆದ್ದು ಚರ್ಮ ದೇಹದಿಂದ ನಲಿವ 18

ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ
ಆಪನ್ನ ಪರಿಪಾಲ ಅಮೃತಫಲದ
ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ
ರೂಪಾತ್ಮಕ ಪ್ರಾಣ ಭಾರತೀಶ19

ಕೇಳಿ ಹರುಷಿತನಾಗಿ ಬಂದ ವೈಭವದಂತೆ
ಕಾಲ ಹಿಂಗಳಿಯದೇ ನಿತ್ಯದಲ್ಲಿ
ಲೀಲೆಯಲಿ ವಾಸವಾಗಿರಲೆಂದು ಅಂದು
ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20

ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ
ರಂಜನವಾಯಿತು ಇದೇ ನಾಮದಲ್ಲಿ
ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ
ಕಂಜವನು ಭಜಿತ ಗುರುರಾಜ ಜಯತು 21
**************