Showing posts with label ನಾ ನಿನ್ನ ಮರೆತರೆ ನೀ ಯನ್ನ ಮರೆವರೆ krishnavittala. Show all posts
Showing posts with label ನಾ ನಿನ್ನ ಮರೆತರೆ ನೀ ಯನ್ನ ಮರೆವರೆ krishnavittala. Show all posts

Monday 2 August 2021

ನಾ ನಿನ್ನ ಮರೆತರೆ ನೀ ಯನ್ನ ಮರೆವರೆ ankita krishnavittala

ನಾ ನಿನ್ನ ಮರೆತರೆ ನೀ ಯನ್ನ ಮರೆವರೆ

ದೀನ ವತ್ಸಲ ರಂಗ ದಾನವಾಂತಕ ಕೃಷ್ಣ ಪ


e್ಞÁನಗಮ್ಯನೆ ನಿನ್ನ ಧ್ಯಾನ ದೊಳಿಟ್ಟೆನ್ನ

ಮಾನದಿಂದಲಿ ಕಾಯೋ ಶ್ರೀನಿವಾಸ ಪ್ರಭುವೆ ಅ.ಪ.


ದಿನಕರನ ಜನರು ನೆನೆಯದೆ ಬಿಟ್ಟರೆÉ

ಜನರನ್ನು ಬೆಳಗದೆ ದಿನಕರ ಬಿಡುವನೆ

ಹೀನವಿಷಯದಿ ಮುಳುಗಿ ತೇಲುವ ಎನ್ನ

ನೀನಾಗಿ ಪೊರೆದರೆ ಘನತೆಯಲ್ಲವೆ ದೇವಾ 1


ಪೆತ್ತ ಮಕ್ಕಳು ಬಲು ಕತ್ತೆಗಳಾದರು

ಹೆತ್ತ ತಾಯಿಯು ತಾನು ಎತ್ತದೆ ಬಿಡುವಳೆ

ಮತ್ತನಾನಾದರು ಉತ್ತಮೋತ್ತಮಸ್ವಾಮಿ

ವಾತ್ಸಲ್ಯತೋರಯ್ಯ ಹಸ್ತಿವರದ ಧೊರೆಯೇ 2

ಗೋವತ್ಸಹಾಲಿಗೆ ಗೋವಿನಗುದ್ದಲು

ತವಕದಿ ಉಣಿಸದೆ ಗೋವು ಬಿಡುವುದೇ

ತವಪಾದ ಕಮಲದಿ ಅವಿನೀತನಾದರೆ

ಸುವಿವೇಕ e್ಞÁನವ ಈಯದಿರುವರೇನೋ 3


ಕರಿ ಧೃವ ಭಕ್ತರ ಪೊರೆಯಲಿಲ್ಲವೆ ನೀನು

ಘೋರಪಾಪಗಳ ತರಿದೆ ಅಜಾಮಿಳಗೇ

ವರವಿತ್ತು ವ್ಯಾಧಗೆ ವರಕವಿಯೆನಿಸಿದೇ

ಭಾರವೆ ನಾನಿನಗೆ ಕರುಣಾಸಾಗರ ರಂಗ 4


ಜಯಮುನಿ ಅಂತರ ವಾಯುವಿನೊಳಗಿಪ್ಪ

ರಾಯ ಶ್ರೀಕೃಷ್ಣವಿಠಲನೆ ನಂಬಿದೆ

ಕಾಯವಚ ಮನದಿ ಜೀಯನೆ ಗತಿಯೆಂಬೆ

ನೋಯಿಸದೆ ಭವದಿ ದಯಮಾಡಿ ಸಲಹಯ್ಯ 5

****