Showing posts with label ನಾರಾಯಣ ನಿನ್ನ ಸ್ಮರಣೆಯಲಿ ಮನ shanti. Show all posts
Showing posts with label ನಾರಾಯಣ ನಿನ್ನ ಸ್ಮರಣೆಯಲಿ ಮನ shanti. Show all posts

Sunday 1 August 2021

ನಾರಾಯಣ ನಿನ್ನ ಸ್ಮರಣೆಯಲಿ ಮನ ankita shanti

 ..

kruti by shantibai dasaru ಶಾಂತಿಬಾಯಿ ದಾಸರು


ನಾರಾಯಣ ನಿನ್ನ ಸ್ಮರಣೆಯಲಿ ಮನ

ಬೇರು ವೂರಿರುವಂತೆ ಕಾರುಣ್ಯದಲಿ ಕಾಯೊ ಪ


ವೇದನಾಲ್ಕರ ಕದ್ದಂಥಾ ದೈತ್ಯನ ಕೊಲ್ವಾ

ಶದಿ ಮತ್ಯಾವತಾರ ಧರಿಸಿದೆ ಹರಿಯೇ 1


ದೇವದಾನವರ ಮಥನದಿ ಮಂದರ ಪೊತ್ತೆ

ಭಾವಕಿಯಳ ಮೋಹಿಸಿ ಮೋಹಿನಿಯಾದೆ 2


ವರಹರೂಪದಿ ಪೋಗಿ ಧರೆಯನು ಧರಿಸಿದೆ

ದುರುಳ ಹಿರಣ್ಯಕನಕರದಿಂದ ಸೀಳಿದೆ 3


ಕಂದನ ನುಡಿಕೇಳಿ ಕಂಬದಿಂದುದಿಸಿದೆ

ತಂದೆಯ ಬಗೆದವನಾ ಛಂದದಿ ಸಲಹಿದೆ 4


ಬಲಿಯ ದಾನವ ಬೇಡಿ ನೆಲನ ಈರಡಿ ಮಾಡಿ

ತುಳಿದು ಆತನ ಮನೆ ಬಾಗಿಲ ಕಾಯ್ದೆಯೊ 5


ತಾತನ ಮಾತನು ಕೇಳಿ ಮಾತೆಯ ಕೊಂದೆ

ಖ್ಯಾತಿಯಿಂದಲಿ ಕ್ಷತ್ರಿಯರನು ಸಂಹರಿಸಿದೆ 6


ಮಾತೆಯ ವರ ಕೇಳಿ ನೀತಿಯಿಂದಲಿ ಪೋದೆ

ಸೇತುವೆ ಕಟ್ಟಿ ನೀಖ್ಯಾತರಾವಣನಕೊಂದೆ 7


ಪುಟ್ಟ ಶಿಶುವಾಗಿ ಗೋಪಿಗೆ ಮುದ್ದು ತೋರಿದೆ

ಬೊಟ್ಟಿಲಿ ಗಿರಿಯನು ನೆಗಹಿದೆ ಶ್ರೀ ಕೃಷ್ಣಾ 8


ತ್ರಿಪುರರ ಸತಿಯರ ವ್ರತವಗೆಡಿಸುವಂಥಾ

ಅಪರಿಮಿತದಿ ಮೋಹಿಸುವಾ ಮೂರ್ತಿಯಾದೆ 9


ಭಕ್ತವತ್ಸಲ ದೇವಾ ಯುಕ್ತಿಯಿಂದಲಿ ಕಾಯ್ವ

ವ್ಯಕ್ತಿ ಕಲ್ಕ್ಯಾವತಾರ ಧರಿಸಿದ ಹರಿಯೇ 10


ಶಬ್ದವ ನುಡಿಸುವ ಅಬ್ದಿನಿನ್ನದೊ ದೇವಾ

ಶಬ್ದವಾಲಿಸದ ನಿಶ್ಯಬ್ದದೊಳಿರಿಸೆನ್ನಾ 11


ಅಂತರದೊಳಗೆನ್ನಾ ಕಂತುನಾರಾಯಣಾ

ಸಂತಸದೊಳು ನಿಜ ಶಾಂತಿ ಪಾಲಿಪ ಗುರು 12

***