Showing posts with label ನಾರಾಯಣ ಪರಿಪಾಹಿ ನರಹರಿಯೆ ನಿನ್ನೊಳು uragadrivasa vittala. Show all posts
Showing posts with label ನಾರಾಯಣ ಪರಿಪಾಹಿ ನರಹರಿಯೆ ನಿನ್ನೊಳು uragadrivasa vittala. Show all posts

Monday 2 August 2021

ನಾರಾಯಣ ಪರಿಪಾಹಿ ನರಹರಿಯೆ ನಿನ್ನೊಳು ankita uragadrivasa vittala

ನಾರಾಯಣ ಪರಿಪಾಹಿ-ನರಹರಿಯೆ ಪ


ನಿನ್ನೊಳು ನಿರುತನಾನಪರಾಧಿ ನಾರಾಯಣ ಅ.ಪ


ಹೇಸಿಕೆಯಿಂದ ಮನಕಾಸುವೀಸಕೆ ಸೋತು

ಮೋಸಹೋದೆ ನಿನ್ನ ನೆನೆಯದೆ ಕೇಶವ 1

ನಿರುತ ನಿನ್ನಯ ನಾಮಸ್ಮರಣೆಯ ಬಿಟ್ಟು

ಘೋರನರಕಕ್ಕೆ ಗುರಿಯಾದೆ ಪೊರೆಯೊ ನಾರಾಯಣ2

ಮುದದಿಂದ ನಾ ಹದಿಬದೆಯರ ಮುಖನೋಡಿ

ಮದದಿಂದ ನಿನ್ನನು ಮರೆದೆನೊ ಮಾಧವಾ3

ಸವನತ್ರಯದಿ ಅವ್ಯವಹಿತ ಕಾರ್ಯವ

ಲವಲೇಶ ಬಿಡದೆ ನಾನೆಸಗಿದೆನೋ ಗೋವಿಂದ 4

ಕ್ಷಣ ಬಿಡದಲೆ ದುಷ್ಕರ್ಮದಿಂದಲಿ ದಣಿದು

ತೃಣಕೆಣೆಯಾಗಿ ನಿರ್ವಿಣ್ಣನಾದೆ ಹೇವಿಷ್ಣು 5

ಹೃದಯದೊಳಿಲ್ಲದ ಮಧುರ ನುಡಿಗಳ

ಮುದದಿ ನುಡಿದೆನೋ ಮಧುಸೂದನನೇ 6

ಅವನಿಯೊಳಗೆ ಎನಗೆಣೆಯಿಲ್ಲವೆನುತ

ಅವಗುಣಪ್ರತಿಮೆ ನಾನಾದೆ ತ್ರಿವಿಕ್ರಮ 7

ಸುಮನಸರುಗಳ ನಾ ಅನುದಿನ ನಿಂದಿಸಿ

ಯಮನ ಮಂದಿರದಿ ನಾ ನಿಂದೆನೊ ವಾಮನ8

ಬುಧನೆಂದು ಮೆರೆದು ನಾ ಆಧಮರಸೇವಿಸಿ

ಅಂಧತಮಕೆ ಗುರಿಯಾದೆನೋ ಶ್ರೀಧರ 9

ವಿಷಯವೆ ಜೀವನದ ಕೃಷಿಯಾಯಿತೆನಗೆ

ತೃಷೆಯ ಮೀರದೆ ನಿನ್ನ ಮರೆದೆನೊ ಹೃಷಿಕೇಶನೆ 10

ಉದುಭವಿಸಿದೆ ಈ ವಸುಧೆ ಭಾರಕ್ಕಾಗಿ

ಬಾಧಕನಾದೆನೊ ಪದುಮನಾಭನೆ 11

ತಾಮಸಕೃತ್ಯದಿಂದುದರ ಪೋಷಣೆಗಾಗಿ

ಪ್ರೇಮದಿ ತಿರುಗಿದೆ ದಾಮೋದರ ದೇವ 12

ಶಂಕೆಯಿಲ್ಲದ ದುರುಳಕಿಂಕರಸೇವೆಯಿಂದ

ಸಂಕಟಪಟ್ಟೆನೊ ಸಂಕುರುಷಣ ದೇವ 13

ಕಾಸಿನಾಶೆಗೆ ನಾ ಹೇಸಿಕಿಲ್ಲದೆ ಮನ

ಹೇಸದೆ ಯಾಚಿಸಿದೆ ವಾಸುದೇವನೇ 14

ಸದ್ಯಫಲವೆ ಮುಖ್ಯವು ಉದ್ಯೋಗವೆಂದು ಉಬ್ಬಿ

ಒದ್ಯಾಡುತಿಹೆ ಪ್ರದ್ಯುಮ್ನದೇವನೆ15

ಅನುಜತನುಜರು ಸತಿ ಅನುಗಾಲ ಬಂಧು ಎಂದು

ಅನವರತ ನಂಬಿದೆನು ಅನಿರುದ್ಧದೇವನೆ 16

ಪರಿಪರಿ ಕ್ರೀಡೆಯಿಂ ಪರಪೀಡಕನಾಗಿ

ಪರರನು ಸ್ತುತಿಸಿ ಬೆಳೆದೆ ಪುರುಷೋತ್ತಮ17

ಸಾಧು ಸಜ್ಜನರೊಳು ಭೇದ ವಂಚನೆ ಮಾಡಿ

ಖೇದಕ್ಕೆ ಒಳಗಾದೆ ಅಧೋಕ್ಷಜ ಮೂರ್ತೇ 18

ಬಾರಿಬಾರಿಗೆ ಪರಾನ್ನವನುಂಡು ಘೊರ

ದುರಿತಕ್ಕೆ ಗುರಿಯಾದೆ ಶ್ರೀ ನರಸಿಂಹನೇ19

ಕೆಚ್ಚೆದೆಯಿಂದ ನಾನು ಸ್ವೇಚ್ಛೆಯಿಂದಲಿ ಚರಿಸಿ

ಹುಚ್ಚು ಹಿಡಿದಂತಾದೆ ಅಚ್ಯುತಮೂರ್ತೇ20

ಮಾನಿಗಳಿಗೆ ಅವಮಾನ ಮಾಡಿ ನಾ

e್ಞÁನಿ ಎಂದೆನಿಸಿದೇ ಜನಾರ್ದನನೇ ಕಾಯೊ 21

ಕೋಪತಾಪಗಳಿಂ ಪಾಪಕೃತ್ಯವೆಸಗಿ

ತಾಪ ಪಡುತಲಿಪ್ಪೆನಯ್ಯ ಉಪೇಂದ್ರನೆ 22

ಕರಚರಣಗಳಿಂದ ಕಳ್ಳನಾಗಿಹೆನು ತೊರೆದೆನೊ

ಹರಿಗುರು ಯಾತ್ರೆಯ ಶ್ರೀಹರೇ 23

ಶಿಷ್ಟರನ್ನೆಲ್ಲ ನಿಕೃಷ್ಟತನದಿ ನೋಡಿ

ಭ್ರಷ್ಟನಾಗೀಜಗದಿ ಮೆರೆದೆ ಶ್ರೀಕೃಷ್ಣನೇ 24

ಸಂಕಟಪಡುತಿಹ ಕಿಂಕರನೊಳಿಹ

ಮಂಕು ಹರಿಸಿ ಕಾಯೋ ಶ್ರೀ ವೇಂಕಟೇಶನೇ25

****