Showing posts with label ನಿನಗೇನೊ ಭಕುತರ ಚಿಂತೀ ಘನಮಹಿಮ ಮಹÀದಾದಿ ಸುರವಂದ್ಯ ತಿಮ್ಮಾ gurujagannatha vittala. Show all posts
Showing posts with label ನಿನಗೇನೊ ಭಕುತರ ಚಿಂತೀ ಘನಮಹಿಮ ಮಹÀದಾದಿ ಸುರವಂದ್ಯ ತಿಮ್ಮಾ gurujagannatha vittala. Show all posts

Wednesday 1 September 2021

ನಿನಗೇನೊ ಭಕುತರ ಚಿಂತೀ ಘನಮಹಿಮ ಮಹÀದಾದಿ ಸುರವಂದ್ಯ ತಿಮ್ಮಾ ankita gurujagannatha vittala

 ..

ನಿನಗೇನೊ ಭಕುತರ ಚಿಂತೀ

ಘನಮಹಿಮ ಮಹÀದಾದಿ ಸುರವಂದ್ಯ ತಿಮ್ಮಾ ಪ


ಶಿರಿದೇವಿ ನಿನರಾಣಿ ಪರಮೇಷ್ಟಿ ನಿನಪುತ್ರ

ಕಿರಿಯ ಮಗನು ಜಗತ್ಪ್ರಾಣದೇವಾ

ಹಿರಿಯ ಸೊಸೆಯು ವಾಣಿ ಕಿರಿಯು ಭಾರತೀ ದೇವಿ

ಪುರಹರನು ಮೊಮ್ಮಗನು ಸುರರು ಪರಿವಾರ 1


ಸಕಲಲೋಕಕೆ ಅರಸು ಲಕುಮಿಕಾಂತನು ಎಂದು

ನಿಖಿಳವೇದ ಸ್ಮøತಿಯು ಸಾರುತಿಹದೋ

ಅಖಿಳವ್ಯಾಪಕನಾಗಿ ಸಕಲಸುರನರರಿಂದ

ಭಕುತಿಪೂರ್ವಕÀ ಓಲಗವಕೈಕೊಂಬ ಸಮಯದಲಿ 2


ಸುರನಾಥ ನೀನಲ್ಲದಿತರ ದೇವತೆಯುಂಟೆ

ಸರವೋತ್ತಮಾನೆಂಬನಾವನವನೋ

ಸರಸಗುಣನಿಧಿಯೆ ಶ್ರೀ ಗುರುಜಗನ್ನಾಥವಿಠಲ

ವರಭಾಗ್ಯ ಮಬ್ಬಿನಲಿ ಇರುವೊ ಸಮಯದಲಿ 3

***