Showing posts with label ನಿನ್ನ ಮಹಿಮೆಗಿಂಥವರು ಹೊಣೆಯೆ neleyadikeshava. Show all posts
Showing posts with label ನಿನ್ನ ಮಹಿಮೆಗಿಂಥವರು ಹೊಣೆಯೆ neleyadikeshava. Show all posts

Wednesday 1 September 2021

ನಿನ್ನ ಮಹಿಮೆಗಿಂಥವರು ಹೊಣೆಯೆ ankita neleyadikeshava

 ..

ನಿನ್ನ ಮಹಿಮೆಗಿಂಥವರು ಹೊಣೆಯೆ ? ಪ


ಚಿನ್ಮಯನೆ ಸಕಲಭುವನಾಧಾರವೆಂಬುದನುಬಣ್ಣಿಸಲು ಎನ್ನಳವೆ ಪನ್ನಗೇಂದ್ರನು ಹೊಣೆಯೆ ? ಅ


ಹರಿ ನಿನ್ನ ಪಾದವು ಪವಿತ್ರತರವೆಂಬುದಕೆಧರಣಿ ಬಲಿ ವಿಧಿ ಭವಾಹ್ಲಾದ ಹೊಣೆಯೊಹರಿಯು ನೀನೆಂಬುದಕೆ ಸರಿಯು ಕೌಸ್ತುಭ ರತ್ನವರ ಪೀತ ವಸನ ಕ್ಷೀರಾಬ್ಧಿ ಹೊಣೆಯೊಶರಣರಿಚ್ಛೆಯಲಿ ನೀನಿದ್ದುದಕೆ ದ್ರೌಪದಿಯುಕರಿರಾಜ ಶಂಭು ಅಂಬರೀಷ ಹೊಣೆಯೊಕರುಣಿಯು ಉದಾರಿ ನೀನೆಂಬುದಕೆ ಧ್ರುವರಾಯಮರುತಸುತ ಸಾಂಧೀಪ ಹೊಣೆಯೊ ಕೃಷ್ಣ 1


ಸುಲಭ ಭಕುತರ ಕಾಯ್ವನೆಂಬುದಕ್ಕೆಲೊ ದೇವಫಲುಗುಣನು ವಿದುರ ಅಕ್ರೂರ ಹೊಣೆಯೊಛಲದಂಕನೆಂಬುದಕೆ ಬಾಣನು ಹಿರಣ್ಯಕನುಜಲಧಿ ದಶಮುಖ ಕಾರ್ತವೀರ್ಯ ಹೊಣೆಯೊಒಲಿಸಿ ನಿನ್ನನು ತುತಿಸಿ ಮುಕುತಿಯನು ಪಡೆದುದಕೆಸಲೆ ಶ್ರುತಿಯು ಗಿರಿಜೆ ಅಜಮಿಳನು ಹೊಣೆಯೊನಳಿನಾಕ್ಷ ಸತ್ತ್ವಗುಣ ನಿನಗೆ ಉಂಟೆಂಬುದಕೆಸಲಿಲಜೋದ್ಭವ ಭೃಗುಮುನೀಂದ್ರ ಹೊಣೆಯೊ 2


ಏಕೋದೇವನದ್ವಿತೀಯ ಬ್ರಹ್ಮ ನೀನೆಂಬುದಕೆಏಕಾರ್ಣವದಲಿದ್ದ ವಟಪತ್ರ ಹೊಣೆಯೊಲೋಕೇಶ ಸರ್ವಂ ವಿಷ್ಣುಮಯಂ ಜಗತ್ತೆಂಬುದಕೆವಾಕೇಶ ವಾತ ಸತ್ತ್ವಗುಣ ಹೊಣೆಯೊಶ್ರೀಕಾಂತ ನೀನಿತ್ತ ವರವು ಸ್ಥಿರವೆಂಬುದಕೆನಾಕೇಶಜಿತನ ಪಿತನನುಜ ಹೊಣೆಯೊಲೋಕದೊಳು ಕಾಗಿನೆಲೆಯಾದಿಕೇಶವ ಭಕ್ತಸಾಕಾರನೆಂಬುದಕೆ ಸಕಲ ಭುವನವೆ ಹೊಣೆಯೊ 3

***

ನಿನ್ನ ಮಹಿಮೆಗಿಂಥವರು ಹೊಣೆಯೆ?   ಚಿನ್ಮಯನೆ ಸಕಲಭುವನಾಧಾರವೆಂಬುದನು  

 ಬಣ್ಣಿಸಲು ಎನ್ನಳವೆ|


 ಪನ್ನಗೇಂದ್ರನು ಹೊಣೆಯೆ 

 ಹರಿ ನಿನ್ನ ಪಾದವು ಪವಿತ್ರತರವೆಂಬುದಕೆ | 

 ಧರಣಿ ಬಲಿ ವಿಧಿ ಭವಾಹ್ಲಾದ ಹೊಣೆಯೊ  |

 ಹರಿಯು ನೀನೆಂಬುದಕೆ ಸರಿಯು ಕೌಸ್ತುಭ ರತ್ನ  

 ವರಪೀತ ವಸನ ಕ್ಷೀರಾಬ್ಧಿ ಹೊಣೆಯೊ  |

 ಶರಣರಿಚ್ಛೆಯಲಿ ನೀನಿದ್ದುದಕೆ ದ್ರೌಪದಿಯು  

 ಕರಿರಾಜ ಶಂಭು ಅಂಬರೀಷ ಹೊಣೆಯೊ  |

 ಕರುಣಿಯು ಉದಾರಿ ನೀನೆಂಬುದಕೆ ಧ್ರುವರಾಯ  

 ಮರುತಸುತ ಸಾಂದೀಪ ಹೊಣೆಯೊ ಕೃಷ್ಣ ||1||  


 ಸುಲಭ ಭಕುತರ ಕಾಯ್ವನೆಂಬುದಕ್ಕೆಲೊ ದೇವ  

 ಫಲುಗುಣನು ವಿದುರ ಅಕ್ರೂರ ಹೊಣೆಯೊ  |

 ಛಲದಂಕನೆಂಬುದಕೆ ಬಾಣನು ಹಿರಣ್ಯಕನು  

 ಜಲಧಿ ದಶಮುಖ ಕಾರ್ತವೀರ್ಯ ಹೊಣೆಯೊ  |

 ಒಲಿಸಿ ನಿನ್ನನು ತುತಿಸಿ ಮುಕುತಿಯನು ಪಡೆದುದಕೆ  

 ಸಲೆ ಶ್ರುತಿಯು ಗಿರಿಜೆ ಅಜಮಿಳನು ಹೊಣೆಯೊ  |

 ನಳಿನಾಕ್ಷ ಸತ್ತ್ವಗುಣ ನಿನಗೆ ಉಂಟೆಂಬುದಕೆ  

 ಸಲಿಲಜೋದ್ಭವ ಭೃಗುಮುನೀಂದ್ರ ಹೊಣೆಯೊ ||2||  


 ಏಕೋದೇವನದ್ವಿತೀಯ ಬ್ರಹ್ಮ ನೀನೆಂಬುದಕೆ  

 ಏಕಾರ್ಣವದಲಿದ್ದ ವಟಪತ್ರ ಹೊಣೆಯೊ  |

 ಲೋಕೇಶ ಸರ್ವಂ ವಿಷ್ಣುಮಯಂ ಜಗತ್ತೆಂಬುದಕೆ  

 ವಾಕೇಶ ವಾತ ಸತ್ತ್ವಗುಣ ಹೊಣೆಯೊ  |

 ಶ್ರೀಕಾಂತ ನೀನಿತ್ತ ವರವು ಸ್ಥಿರವೆಂಬುದಕೆ  

 ನಾಕೇಶಜಿತನ ಪಿತನನುಜ ಹೊಣೆಯೊ  |

 ಲೋಕದೊಳು ಕಾಗಿನೆಲೆಯಾದಿಕೇಶವ ಭಕ್ತ  

 ಸಾಕಾರನೆಂಬುದಕೆ ಸಕಲ ಭುವನವೆ ಹೊಣೆಯೊ ||3||  

***