Showing posts with label ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ vaikunta vittala. Show all posts
Showing posts with label ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ vaikunta vittala. Show all posts

Sunday 1 August 2021

ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ankita vaikunta vittala

 ..

kruti by ಬೇಲೂರು ವೈಕುಂಠ ದಾಸರು belur vaikunta dasaru


ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ


ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ

ಕುಂದದೇ ಭಜಿಸಲು ಮರುಗಿ ಬೇಗಾ

ಇಂದಿರೇ ಅಜಭವರೆಂದೂ ಕಾಣದ ನಿಜ

ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1


ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು

ಹರಿರೂಪತಾಳ್ದು ದೈತ್ಯನ ಶಿರವಾ

ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ

ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2


ಪಾತಕದಿಂದ ಗೌತಮಸತಿ ಶಿಲೆಯಾಗೆ

ಭೂತಳದೊಳು ಪರಬೊಮ್ಮನೆಂಬೋ

ಸೀತಾರಾಮಾವತಾರರಿಂದ ಸೌಂದರ್ಯ

ನೂತನಪದ ಸೋಕಲು ನಿಜಸತಿಯಾದಳೋ 3


ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ

ಹರಿಯೆಂದು ಕರೆದ ಉತ್ತರೆಗೆ ಬೇಗಾ

ವರಚಕ್ರವನು ಮರೆಮಾಡಿ ಪರೀಕ್ಷಿತನ

ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4


ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ

ಸುರನು ಫಾಲಕ್ಷನ ಖತಿಗೊಳಿಸೆ

ಸಿರಿವೇಲಾಪುರ ಚನ್ನಕೇಶವನಾವೇಶದಿಂ

ಪರಿದಸುರನ ಕೊಂದು ಸ್ಥಿರವಾದಕಾರಣ 5

***